AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Putin on Make in India: ಮೇಕ್ ಇನ್ ಇಂಡಿಯಾ ಪರಿಕಲ್ಪನೆಯನ್ನು ಹೊಗಳಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್

ರಷ್ಯಾ(Russia) ಹಾಗೂ ಭಾರತ(India)ದ ಸಂಬಂಧಗಳು ಯಾವಾಗಲೂ ಉತ್ತಮವಾಗಿಯೇ ಇದೆ. ರಷ್ಯಾ ಉಕ್ರೇನ್ ಯುದ್ಧದ ಸಂದರ್ಭದಲ್ಲಿಯೂ ಭಾರತ ಯಾರ ಪರ, ವಿರೋಧವನ್ನು ಮಾಡದೆ ತಟಸ್ಥ ನಿಲುವನ್ನು ತೋರಿತ್ತು.

Putin on Make in India: ಮೇಕ್ ಇನ್ ಇಂಡಿಯಾ ಪರಿಕಲ್ಪನೆಯನ್ನು ಹೊಗಳಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್
ವ್ಲಾಡಿಮಿರ್ ಪುಟಿನ್-ನರೇಂದ್ರ ಮೋದಿImage Credit source: The Print
ನಯನಾ ರಾಜೀವ್
|

Updated on: Jun 30, 2023 | 10:55 AM

Share

ರಷ್ಯಾ(Russia) ಹಾಗೂ ಭಾರತ(India)ದ ಸಂಬಂಧಗಳು ಯಾವಾಗಲೂ ಉತ್ತಮವಾಗಿಯೇ ಇದೆ. ರಷ್ಯಾ ಉಕ್ರೇನ್ ಯುದ್ಧದ ಸಂದರ್ಭದಲ್ಲಿಯೂ ಭಾರತ ಯಾರ ಪರ, ವಿರೋಧವನ್ನು ಮಾಡದೆ ತಟಸ್ಥ ನಿಲುವನ್ನು ತೋರಿತ್ತು. ಇದೀಗ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮೇಕ್ ಇನ್ ಇಂಡಿಯಾ(Make In India) ಪರಿಕಲ್ಪನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉತ್ತಮ ಸ್ನೇಹಿತ ಎಂದು ಬಣ್ಣಿಸಿದ್ದಾರೆ.

ಭಾರತ ಸರ್ಕಾರದ ಮೇಕ್​ ಇನ್ ಇಂಡಿಯಾ ಪರಿಕಲ್ಪನೆಯು ಭಾರತದ ಆರ್ಥಿಕತೆಯ ಮೇಲೆ ನಿಜವಾಗಿಯೂ ಆಳವಾದ ಪರಿಣಾಮ ಬೀರಲಿದೆ ಎಂದು ಹೇಳಿದರು. ಭಾರತದ ಕೆಲವು ಯೋಜನೆಗಳನ್ನು ರಷ್ಯಾದಲ್ಲೂ ಅಳವಡಿಸಿಕೊಳ್ಳುವುದರಿಂದ ಏನಾದರೂ ಹಾನಿಯಾಗಬಹುದೇ ಎಂದು ರಷ್ಯಾದ ಸಚಿವರು ಕಳವಳ ವ್ಯಕ್ತಪಡಿಸಿದ್ದರು.

ಮತ್ತಷ್ಟು ಓದಿ: 9 Years Of PM Modi: ಪ್ರಧಾನಿ ಮೋದಿಯವರ 9 ವರ್ಷಗಳ ಪಯಣ, ಭಾರತದ ಅಭಿವೃದ್ಧಿಗೆ ಕೊಡುಗೆ ನೀಡಿದ 9 ಮಹತ್ವದ ಯೋಜನೆಗಳು ಇಲ್ಲಿವೆ

ಆಗ ಪುಟಿನ್ ಮಾತನಾಡಿ, ಭಾರತವು ಹಲವು ವರ್ಷಗಳ ಹಿಂದೆ ಮೇಕ್ ಇನ್ ಇಂಡಿಯಾ ಎಂಬ ಯೋಜನೆ ಆರಂಭಿಸಿತ್ತು, ಈ ಯೋಜನೆಯು ಭಾರತದ ಆರ್ಥಿಕತೆಯ ಮೇಲೆ ತನ್ನ ಪರಿಣಾಮವನ್ನು ತೋರಿಸಿದೆ, ಇದು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಅದರಿಂದ ಯಾವುದೇ ಹಾನಿಯಿಲ್ಲ ಎಂದು ಹೇಳಿದ್ದಾರೆ. ವ್ಲಾಡಿಮಿರ್ ಪುಟಿನ್ ರಷ್ಯಾದಲ್ಲಿ ದೇಶೀಯ ಉತ್ಪನ್ನಗಳು ಮತ್ತು ಬ್ರ್ಯಾಂಡ್ಗಳನ್ನು ಪ್ರೋತ್ಸಾಹಿಸಲು ಭಾರತದ ಉದಾಹರಣೆಯನ್ನು ಉಲ್ಲೇಖಿಸಿದ್ದಾರೆ.

ನಾವು ನಮ್ಮ ಉತ್ಪನ್ನಗಳನ್ನು ಆಧುನೀಕರಿಸಬೇಕು ಮತ್ತು ಅವುಗಳನ್ನು ಹೆಚ್ಚು ಅನುಕೂಲಕರ ಮತ್ತು ಕ್ರಿಯಾತ್ಮಕಗೊಳಿಸುವ ಬಗ್ಗೆ ಯೋಚಿಸಬೇಕು ಎಂದು ಪುಟಿನ್ ಹೇಳಿದರು. ರಷ್ಯಾ ಜೊತೆಗಿನ ಸಂಬಂಧವನ್ನು ರಕ್ಷಣೆಗೆ ಮಾತ್ರ ಸೀಮಿತಗೊಳಿಸಬಾರದು ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದರು. ಇದೇ ವೇಳೆ ರಷ್ಯಾ ಜತೆಗಿನ ಆರ್ಥಿಕ ಸಂಬಂಧಗಳ ಬಗ್ಗೆ ಪ್ರಸ್ತಾಪಿಸಿದ ಜೈಶಂಕರ್, ಉಭಯ ದೇಶಗಳ ನಡುವಿನ ಆರ್ಥಿಕ ಸಂಬಂಧವೂ ಸುಧಾರಿಸಿದೆ ಎಂದು ಹೇಳಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ