AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾದಲ್ಲಿ ಬಂಡಾಯ ತೀವ್ರ, ಮಾಸ್ಕೋದತ್ತ 30 ಸಾವಿರ ಹೋರಾಟಗಾರರು; ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ ಪುಟಿನ್

ವ್ಯಾಗ್ನರ್ ಗುಂಪಿನ ಮುಖ್ಯಸ್ಥ ಪ್ರಿಗೊಜಿನ್ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆಪ್ತರೂ ಆಗಿದ್ದರು ಎನ್ನಲಾಗಿದೆ. ಈ ಗುಂಪು ಪುಟಿನ್ ಅವರ ದೊಡ್ಡ ಶಕ್ತಿಯಾಗಿತ್ತು. ಆದರೆ ಇಂದು ರಷ್ಯಾಕ್ಕೆ ಸಮಸ್ಯೆಯಾಗಿ ಪರಿಣಮಿಸಿದೆ.

ರಷ್ಯಾದಲ್ಲಿ ಬಂಡಾಯ ತೀವ್ರ, ಮಾಸ್ಕೋದತ್ತ 30 ಸಾವಿರ ಹೋರಾಟಗಾರರು; ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ ಪುಟಿನ್
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Jun 24, 2023 | 12:50 PM

Share

ಮಾಸ್ಕೋ: ದಂಗೆಯೆದ್ದಿರುವ ವ್ಯಾಗ್ನರ್ ಗುಂಪು ರಷ್ಯಾದ (Russia) ಸೈನ್ಯದ ಮೇಲೆಯೇ ದಾಳಿಗೆ ಮುಂದಾಗಿದ್ದು, ಉಕ್ರೇನ್​ ವಿರುದ್ಧದ ಯುದ್ಧದಲ್ಲಿ ತೊಡಗಿಸಿಕೊಂಡಿರುವ ರಷ್ಯಾ ಸೇನೆಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಗುಂಪಿನ ಮುಖ್ಯಸ್ಥ ಯೆವ್ಗೆನಿ ಪ್ರಿಗೊಜಿನ್ ರಷ್ಯಾದ ವಿರುದ್ಧ ಸಮರ ಸಾರಿದ್ದು, ಈ ಗುಂಪಿನ 30 ಸಾವಿರ ಹೋರಾಟಗಾರರು ಮಾಸ್ಕೋದತ್ತ ಧಾವಿಸುತ್ತಿದ್ದಾರೆ ಎಂದು ವರದಿಯಾಗಿದೆ. ಈ ಮಧ್ಯೆ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದೂ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

ಭದ್ರತಾ ದೃಷ್ಟಿಯಿಂದ ರಾಜಧಾನಿ ಮಾಸ್ಕೋಗೆ ಬರುವ ಹೆದ್ದಾರಿಯನ್ನು ಮುಚ್ಚಲಾಗಿದೆ. ಈ ಮಧ್ಯೆ, ರಷ್ಯಾದ ಸೈನ್ಯದ ಮತ್ತೊಂದು ಹೆಲಿಕಾಪ್ಟರ್ ಅನ್ನು ಹೊಡೆದುರುಳಿಸಿದೆ ಎಂದು ವ್ಯಾಗ್ನರ್ ಗುಂಪು ಹೇಳಿಕೊಂಡಿದೆ. ರಷ್ಯಾ ರಕ್ಷಣಾ ಇಲಾಖೆಯ ಪ್ರಧಾನ ಕಚೇರಿ ಇರುವ ರೊಸ್ಟೊವ್​​ನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆಯಿಂದ ಹೊರಬರದಂತೆ ಜನರಿಗೆ ರೊಸ್ಟೊವ್ ರಾಜ್ಯಪಾಲ ವಸಿಲಿ ಗೊಲುಬೆವ್ ಮನವಿ ಮಾಡಿದ್ದಾರೆ.

ಉಕ್ರೇನ್‌ ಯುದ್ಧದಲ್ಲಿ ಗೆಲುವಿನ ಭರವಸೆಯಲ್ಲಿ ರಷ್ಯಾದ ಅಧ್ಯಕ್ಷರು ಇದ್ದಾಗಲೇ ಈ ಬೆಳವಣಿಗೆ ನಡೆದಿದ್ದು, ದಂಗೆಯ ಅಪಾಯ ಎದುರಾಗಿದೆ. ಕ್ರೆಮ್ಲಿನ್ ಅನ್ನು ರಕ್ಷಿಸಲು ಟ್ಯಾಂಕ್‌ಗಳನ್ನು ನಿಯೋಜಿಸಲಾಗಿದೆ. ಮಾಸ್ಕೋದ ಬೀದಿಗಳು ಟ್ಯಾಂಕ್‌ಗಳು ಮತ್ತು ಶಸ್ತ್ರಸಜ್ಜಿತ ವಾಹನಗಳಿಂದ ತುಂಬಿವೆ. ತನ್ನ ದಂಗೆಗೆ ರಷ್ಯಾದ ಖಾಸಗಿ ಸೇನೆಯೇ ಕಾರಣ ಎಂದು ಪುಟಿನ್ ಭಾವಿಸಿದ್ದಾರೆ ಎಂದು ವರದಿಯಾಗಿದೆ. ಮತ್ತೊಂದೆಡೆ, ರೊಸ್ಟೊವ್‌ನಲ್ಲಿರುವ ರಷ್ಯಾದ ಸೈನ್ಯದ ಮಿಲಿಟರಿ ಪ್ರಧಾನ ಕಚೇರಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿರುವುದಾಗಿ ಪ್ರಿಗೊಜಿನ್ ಹೇಳಿದ್ದಾರೆ.

ಇದನ್ನೂ ಓದಿ: Russia: ಉಕ್ರೇನ್ ವಿರುದ್ಧ ಸಮರ ಸಾರಿರುವ ರಷ್ಯಾಕ್ಕೀಗ ದಂಗೆಯ ಬಿಸಿ; ಸೇನೆ ವಿರುದ್ಧವೇ ಶುರುವಾಯ್ತು ಬಂಡಾಯ

ಪುಟಿನ್ ಬತ್ತಳಿಕೆಯ ಪ್ರಮುಖ ಅಸ್ತ್ರವೇ ರಷ್ಯಾಕ್ಕೆ ತಿರುಗುಬಾಣವಾಯ್ತು

ವ್ಯಾಗ್ನರ್ ಗುಂಪಿನ ಮುಖ್ಯಸ್ಥ ಪ್ರಿಗೊಜಿನ್ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆಪ್ತರೂ ಆಗಿದ್ದರು ಎನ್ನಲಾಗಿದೆ. ಈ ಗುಂಪು ಪುಟಿನ್ ಅವರ ದೊಡ್ಡ ಶಕ್ತಿಯಾಗಿತ್ತು. ಆದರೆ ಇಂದು ರಷ್ಯಾಕ್ಕೆ ಸಮಸ್ಯೆಯಾಗಿ ಪರಿಣಮಿಸಿದೆ. ಮೂಲಗಳ ಪ್ರಕಾರ, ವ್ಯಾಗ್ನರ್ ಗುಂಪು ಉಕ್ರೇನಿಯನ್ ಸೈನ್ಯದ ಪರವಾಗಿದ್ದು, ಇದೀಗ ರಷ್ಯಾ ವಿರುದ್ಧ ದಂಗೆ ಎದ್ದಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ