AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದೊಂದಿಗೆ ಉತ್ತಮ ಬಾಂಧವ್ಯ ಬೇಕು, ಆದರೆ ಕಾಶ್ಮೀರ ಸಮಸ್ಯೆ ಪರಿಹರಿಸದೆ ಶಾಂತಿ ಸಾಧ್ಯವಿಲ್ಲ: ಶಹಬಾಜ್ ಷರೀಫ್

Shehbaz Sharif ಈ ಹಿಂದೆ ಪಾಕಿಸ್ತಾನದಲ್ಲಿ ಅಧಿಕಾರದಲ್ಲಿದ್ದ ಇಮ್ರಾನ್ ಖಾನ್ ಅವರ "ಸರ್ಕಾರವನ್ನು ಹೊರಹಾಕಲು ವಿದೇಶಿ ಪಿತೂರಿ" ನಡೆದಿದೆ ಎಂಬ ಖಾನ್ ಅವರ ಆರೋಪವನ್ನು "ನಾಟಕ" ಎಂದು ಕರೆದ ಶಹಬಾಜ್, ಇಮ್ರಾನ್ ಖಾನ್ ಆ ಆರೋಪಗಳನ್ನು ಸಾಬೀತುಪಡಿಸಿದರೆ ರಾಜೀನಾಮೆ ನೀಡುವುದಾಗಿ ಪ್ರತಿಜ್ಞೆ ಮಾಡಿದರು.

ಭಾರತದೊಂದಿಗೆ ಉತ್ತಮ ಬಾಂಧವ್ಯ ಬೇಕು, ಆದರೆ ಕಾಶ್ಮೀರ ಸಮಸ್ಯೆ ಪರಿಹರಿಸದೆ ಶಾಂತಿ ಸಾಧ್ಯವಿಲ್ಲ: ಶಹಬಾಜ್ ಷರೀಫ್
ಶಹಬಾಜ್ ಶರೀಫ್
TV9 Web
| Edited By: |

Updated on:Apr 11, 2022 | 11:32 PM

Share

ಇಸ್ಲಾಮಾಬಾದ್: ಪಾಕಿಸ್ತಾನದ 23 ನೇ ಪ್ರಧಾನ ಮಂತ್ರಿಯಾಗಿ ಆಯ್ಕೆಯಾದ ನಂತರ ಪಾಕಿಸ್ತಾನದ (Pakistan) ಸಂಸತ್ತನ್ನುದ್ದೇಶಿಸಿ ಸೋಮವಾರ ಮಾಡಿದ ಭಾಷಣದಲ್ಲಿ ಶಹಬಾಜ್ ಷರೀಫ್ (Shehbaz Sharif) ಅವರು ಭಾರತದೊಂದಿಗೆ “ಉತ್ತಮ ಸಂಬಂಧ” ಭಾರತವನ್ನು ಬಯಸುತ್ತಾರೆ ಎಂದು ಹೇಳಿದ್ದಾರೆ. ಅದೇ ವೇಳೆ ಕಾಶ್ಮೀರ (Kashmir) ಸಮಸ್ಯೆಯನ್ನೂ ಅವರು  ಪ್ರಸ್ತಾಪಿಸಿದರು. “ನಾವು ಭಾರತದೊಂದಿಗೆ ಉತ್ತಮ ಸಂಬಂಧವನ್ನು ಬಯಸುತ್ತೇವೆ ಆದರೆ ಕಾಶ್ಮೀರ ಸಮಸ್ಯೆಗೆ ಪರಿಹಾರವಿಲ್ಲದೆ ಬಾಳಿಕೆ ಬರುವ ಶಾಂತಿ ಸಾಧ್ಯವಿಲ್ಲ” ಎಂದು ಶೆಹಬಾಜ್ ಹೇಳಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.  ಈ ಹಿಂದೆ ಪಾಕಿಸ್ತಾನದಲ್ಲಿ ಅಧಿಕಾರದಲ್ಲಿದ್ದ ಇಮ್ರಾನ್ ಖಾನ್ ಅವರ “ಸರ್ಕಾರವನ್ನು ಹೊರಹಾಕಲು ವಿದೇಶಿ ಪಿತೂರಿ” ನಡೆದಿದೆ ಎಂಬ ಖಾನ್ ಅವರ ಆರೋಪವನ್ನು “ನಾಟಕ” ಎಂದು ಕರೆದ ಶಹಬಾಜ್, ಇಮ್ರಾನ್ ಖಾನ್ ಆ ಆರೋಪಗಳನ್ನು ಸಾಬೀತುಪಡಿಸಿದರೆ ರಾಜೀನಾಮೆ ನೀಡುವುದಾಗಿ ಪ್ರತಿಜ್ಞೆ ಮಾಡಿದರು.  ಪಾಕಿಸ್ತಾನದಲ್ಲಿ ತನ್ನ ಸರ್ಕಾರದ ಪತನದ ಹಿಂದೆ ಖಾನ್ ಆರೋಪಿಸಿದ “ವಿದೇಶಿ ಪಿತೂರಿ” ಗೆ ಸಂಬಂಧಿಸಿದ ಪತ್ರವನ್ನು ಉಲ್ಲೇಖಿಸಿದ ಷರೀಫ್, “ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಮಿತಿಯು ವಿದೇಶಿ ಪಿತೂರಿ ಎಂದು ಕರೆಯಲ್ಪಡುವ ವಿವಾದಾತ್ಮಕ ಪತ್ರದ ಬಗ್ಗೆ ವಿಚಾರಣೆ ಮಾಡುತ್ತದೆ. ಇದು ಷಡ್ಯಂತ್ರ ಸಾಬೀತಾದರೆ ರಾಜೀನಾಮೆ ನೀಡಿ ಮನೆಗೆ ಹೋಗುತ್ತೇನೆ” ಎಂದು ಹೇಳಿದ್ದಾರೆ.  ಹಿಂದಿನ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಸರ್ಕಾರವನ್ನು ಉರುಳಿಸುವ ಪಿತೂರಿಯಲ್ಲಿ ಅಮೆರಿಕ ಭಾಗಿಯಾಗಿದೆ ಎಂದು ಖಾನ್ ಹೇಳಿದ್ದರು.  70ರ ಹರೆಯದ ಪಿಎಂಎಲ್-ಎನ್ ನಾಯಕ ಷರೀಫ್ ಅವರನ್ನು ಪಾಕಿಸ್ತಾನದ ಹೊಸ ಪ್ರಧಾನಿಯಾಗಿ ದೇಶದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಶಾಸಕರು ಅವಿರೋಧವಾಗಿ ಆಯ್ಕೆ ಮಾಡಿದರು. ಷರೀಫ್ 174 ಮತಗಳನ್ನು ಪಡೆದರು. ಅಂದರೆ ಚುನಾವಣೆಯಲ್ಲಿ ಗೆಲ್ಲಲು 172 ಸರಳ ಬಹುಮತಕ್ಕಿಂತ ಎರಡು ಹೆಚ್ಚು.

ದೇಶವು ಐತಿಹಾಸಿಕ ಬಜೆಟ್, ವ್ಯಾಪಾರ ಕೊರತೆಯತ್ತ ಸಾಗುತ್ತಿದೆ ಎಂದ ನೂತನ ಪ್ರಧಾನಿ ಶಹಬಾಜ್ ಷರೀಫ್ ಪಾಕಿಸ್ತಾನವು ದೇಶದ ಇತಿಹಾಸದಲ್ಲಿ ಅತಿದೊಡ್ಡ ಬಜೆಟ್ ಕೊರತೆ ಮತ್ತು ವ್ಯಾಪಾರ ಕೊರತೆಯತ್ತ ಸಾಗುತ್ತಿದೆ ಎಂದು ಶಹಬಾಜ್ ಹೇಳಿಕೊಂಡಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ. ನಿರ್ಗಮಿಸುತ್ತಿರುವ ಇಮ್ರಾನ್ ಖಾನ್ ಸರ್ಕಾರವು ಆರ್ಥಿಕತೆಯನ್ನು ತಪ್ಪಾಗಿ ನಿರ್ವಹಿಸಿದೆ ಎಂದು ಅವರು ಆರೋಪಿಸಿದರು. ನಮ್ಮ ಹೊಸ ಸರ್ಕಾರವು ಅದನ್ನು ಮರಳಿ ಟ್ರ್ಯಾಕ್ಗೆ ತರಲು ದೊಡ್ಡ ಸವಾಲನ್ನು ಎದುರಿಸುತ್ತಿದೆ ಎಂದು ಶಹಬಾಜ್ ಹೇಳಿದ್ದಾರೆ.  ಷರೀಫ್ ಅವರು ಯುರೋಪಿಯನ್ ಯೂನಿಯನ್ (ಇಯು) ನೊಂದಿಗೆ ಉತ್ತಮ ಬಾಂಧವ್ಯವನ್ನು ಕಾಪಾಡಿಕೊಳ್ಳಲು ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ ಮತ್ತು ಮುಂದಿನ ವರ್ಷ ಸಾಮಾನ್ಯೀಕೃತ ಆದ್ಯತೆಗಳ ಯೋಜನೆ (GSP) ಜೊತೆಗೆ ಸ್ಥಾನಮಾನವನ್ನು ವಿಸ್ತರಿಸಲು ಪ್ರಯತ್ನಿಸುವುದಾಗಿ ಹೇಳಿದರು.

ಇದನ್ನೂ ಓದಿ:Shehbaz Sharif: ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಶೆಹಬಾಜ್ ಷರೀಫ್ ಅವಿರೋಧ ಆಯ್ಕೆ

Published On - 11:29 pm, Mon, 11 April 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?