AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದೊಂದಿಗೆ ಉತ್ತಮ ಬಾಂಧವ್ಯ ಬೇಕು, ಆದರೆ ಕಾಶ್ಮೀರ ಸಮಸ್ಯೆ ಪರಿಹರಿಸದೆ ಶಾಂತಿ ಸಾಧ್ಯವಿಲ್ಲ: ಶಹಬಾಜ್ ಷರೀಫ್

Shehbaz Sharif ಈ ಹಿಂದೆ ಪಾಕಿಸ್ತಾನದಲ್ಲಿ ಅಧಿಕಾರದಲ್ಲಿದ್ದ ಇಮ್ರಾನ್ ಖಾನ್ ಅವರ "ಸರ್ಕಾರವನ್ನು ಹೊರಹಾಕಲು ವಿದೇಶಿ ಪಿತೂರಿ" ನಡೆದಿದೆ ಎಂಬ ಖಾನ್ ಅವರ ಆರೋಪವನ್ನು "ನಾಟಕ" ಎಂದು ಕರೆದ ಶಹಬಾಜ್, ಇಮ್ರಾನ್ ಖಾನ್ ಆ ಆರೋಪಗಳನ್ನು ಸಾಬೀತುಪಡಿಸಿದರೆ ರಾಜೀನಾಮೆ ನೀಡುವುದಾಗಿ ಪ್ರತಿಜ್ಞೆ ಮಾಡಿದರು.

ಭಾರತದೊಂದಿಗೆ ಉತ್ತಮ ಬಾಂಧವ್ಯ ಬೇಕು, ಆದರೆ ಕಾಶ್ಮೀರ ಸಮಸ್ಯೆ ಪರಿಹರಿಸದೆ ಶಾಂತಿ ಸಾಧ್ಯವಿಲ್ಲ: ಶಹಬಾಜ್ ಷರೀಫ್
ಶಹಬಾಜ್ ಶರೀಫ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Apr 11, 2022 | 11:32 PM

ಇಸ್ಲಾಮಾಬಾದ್: ಪಾಕಿಸ್ತಾನದ 23 ನೇ ಪ್ರಧಾನ ಮಂತ್ರಿಯಾಗಿ ಆಯ್ಕೆಯಾದ ನಂತರ ಪಾಕಿಸ್ತಾನದ (Pakistan) ಸಂಸತ್ತನ್ನುದ್ದೇಶಿಸಿ ಸೋಮವಾರ ಮಾಡಿದ ಭಾಷಣದಲ್ಲಿ ಶಹಬಾಜ್ ಷರೀಫ್ (Shehbaz Sharif) ಅವರು ಭಾರತದೊಂದಿಗೆ “ಉತ್ತಮ ಸಂಬಂಧ” ಭಾರತವನ್ನು ಬಯಸುತ್ತಾರೆ ಎಂದು ಹೇಳಿದ್ದಾರೆ. ಅದೇ ವೇಳೆ ಕಾಶ್ಮೀರ (Kashmir) ಸಮಸ್ಯೆಯನ್ನೂ ಅವರು  ಪ್ರಸ್ತಾಪಿಸಿದರು. “ನಾವು ಭಾರತದೊಂದಿಗೆ ಉತ್ತಮ ಸಂಬಂಧವನ್ನು ಬಯಸುತ್ತೇವೆ ಆದರೆ ಕಾಶ್ಮೀರ ಸಮಸ್ಯೆಗೆ ಪರಿಹಾರವಿಲ್ಲದೆ ಬಾಳಿಕೆ ಬರುವ ಶಾಂತಿ ಸಾಧ್ಯವಿಲ್ಲ” ಎಂದು ಶೆಹಬಾಜ್ ಹೇಳಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.  ಈ ಹಿಂದೆ ಪಾಕಿಸ್ತಾನದಲ್ಲಿ ಅಧಿಕಾರದಲ್ಲಿದ್ದ ಇಮ್ರಾನ್ ಖಾನ್ ಅವರ “ಸರ್ಕಾರವನ್ನು ಹೊರಹಾಕಲು ವಿದೇಶಿ ಪಿತೂರಿ” ನಡೆದಿದೆ ಎಂಬ ಖಾನ್ ಅವರ ಆರೋಪವನ್ನು “ನಾಟಕ” ಎಂದು ಕರೆದ ಶಹಬಾಜ್, ಇಮ್ರಾನ್ ಖಾನ್ ಆ ಆರೋಪಗಳನ್ನು ಸಾಬೀತುಪಡಿಸಿದರೆ ರಾಜೀನಾಮೆ ನೀಡುವುದಾಗಿ ಪ್ರತಿಜ್ಞೆ ಮಾಡಿದರು.  ಪಾಕಿಸ್ತಾನದಲ್ಲಿ ತನ್ನ ಸರ್ಕಾರದ ಪತನದ ಹಿಂದೆ ಖಾನ್ ಆರೋಪಿಸಿದ “ವಿದೇಶಿ ಪಿತೂರಿ” ಗೆ ಸಂಬಂಧಿಸಿದ ಪತ್ರವನ್ನು ಉಲ್ಲೇಖಿಸಿದ ಷರೀಫ್, “ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಮಿತಿಯು ವಿದೇಶಿ ಪಿತೂರಿ ಎಂದು ಕರೆಯಲ್ಪಡುವ ವಿವಾದಾತ್ಮಕ ಪತ್ರದ ಬಗ್ಗೆ ವಿಚಾರಣೆ ಮಾಡುತ್ತದೆ. ಇದು ಷಡ್ಯಂತ್ರ ಸಾಬೀತಾದರೆ ರಾಜೀನಾಮೆ ನೀಡಿ ಮನೆಗೆ ಹೋಗುತ್ತೇನೆ” ಎಂದು ಹೇಳಿದ್ದಾರೆ.  ಹಿಂದಿನ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಸರ್ಕಾರವನ್ನು ಉರುಳಿಸುವ ಪಿತೂರಿಯಲ್ಲಿ ಅಮೆರಿಕ ಭಾಗಿಯಾಗಿದೆ ಎಂದು ಖಾನ್ ಹೇಳಿದ್ದರು.  70ರ ಹರೆಯದ ಪಿಎಂಎಲ್-ಎನ್ ನಾಯಕ ಷರೀಫ್ ಅವರನ್ನು ಪಾಕಿಸ್ತಾನದ ಹೊಸ ಪ್ರಧಾನಿಯಾಗಿ ದೇಶದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಶಾಸಕರು ಅವಿರೋಧವಾಗಿ ಆಯ್ಕೆ ಮಾಡಿದರು. ಷರೀಫ್ 174 ಮತಗಳನ್ನು ಪಡೆದರು. ಅಂದರೆ ಚುನಾವಣೆಯಲ್ಲಿ ಗೆಲ್ಲಲು 172 ಸರಳ ಬಹುಮತಕ್ಕಿಂತ ಎರಡು ಹೆಚ್ಚು.

ದೇಶವು ಐತಿಹಾಸಿಕ ಬಜೆಟ್, ವ್ಯಾಪಾರ ಕೊರತೆಯತ್ತ ಸಾಗುತ್ತಿದೆ ಎಂದ ನೂತನ ಪ್ರಧಾನಿ ಶಹಬಾಜ್ ಷರೀಫ್ ಪಾಕಿಸ್ತಾನವು ದೇಶದ ಇತಿಹಾಸದಲ್ಲಿ ಅತಿದೊಡ್ಡ ಬಜೆಟ್ ಕೊರತೆ ಮತ್ತು ವ್ಯಾಪಾರ ಕೊರತೆಯತ್ತ ಸಾಗುತ್ತಿದೆ ಎಂದು ಶಹಬಾಜ್ ಹೇಳಿಕೊಂಡಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ. ನಿರ್ಗಮಿಸುತ್ತಿರುವ ಇಮ್ರಾನ್ ಖಾನ್ ಸರ್ಕಾರವು ಆರ್ಥಿಕತೆಯನ್ನು ತಪ್ಪಾಗಿ ನಿರ್ವಹಿಸಿದೆ ಎಂದು ಅವರು ಆರೋಪಿಸಿದರು. ನಮ್ಮ ಹೊಸ ಸರ್ಕಾರವು ಅದನ್ನು ಮರಳಿ ಟ್ರ್ಯಾಕ್ಗೆ ತರಲು ದೊಡ್ಡ ಸವಾಲನ್ನು ಎದುರಿಸುತ್ತಿದೆ ಎಂದು ಶಹಬಾಜ್ ಹೇಳಿದ್ದಾರೆ.  ಷರೀಫ್ ಅವರು ಯುರೋಪಿಯನ್ ಯೂನಿಯನ್ (ಇಯು) ನೊಂದಿಗೆ ಉತ್ತಮ ಬಾಂಧವ್ಯವನ್ನು ಕಾಪಾಡಿಕೊಳ್ಳಲು ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ ಮತ್ತು ಮುಂದಿನ ವರ್ಷ ಸಾಮಾನ್ಯೀಕೃತ ಆದ್ಯತೆಗಳ ಯೋಜನೆ (GSP) ಜೊತೆಗೆ ಸ್ಥಾನಮಾನವನ್ನು ವಿಸ್ತರಿಸಲು ಪ್ರಯತ್ನಿಸುವುದಾಗಿ ಹೇಳಿದರು.

ಇದನ್ನೂ ಓದಿ:Shehbaz Sharif: ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಶೆಹಬಾಜ್ ಷರೀಫ್ ಅವಿರೋಧ ಆಯ್ಕೆ

Published On - 11:29 pm, Mon, 11 April 22

ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ