AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಹೋರ್​​ನಲ್ಲಿ ಖಲಿಸ್ತಾನ್ ಕಮಾಂಡೊ ಮುಖ್ಯಸ್ಥ ಪರಮ್‌ಜಿತ್ ಸಿಂಗ್​​ ಪಂಜ್ವಾರ್​​ ಹತ್ಯೆ

Paramjit Singh Panjwar: ಜೋಹರ್ ಟೌನ್‌ನಲ್ಲಿರುವ ಸನ್​​ಫ್ಲವರ್ ಸೊಸೈಟಿಯಲ್ಲಿರುವ ತನ್ನ ಮನೆಯ ಬಳಿ ಬೆಳಿಗ್ಗೆ 6 ಗಂಟೆಯ ಸುಮಾರಿಗೆ  ಗನ್‌ಮ್ಯಾನ್‌ನೊಂದಿಗೆ ಸುತ್ತಾಡುತ್ತಿದ್ದಾಗ ಮೋಟಾರ್‌ಸೈಕಲ್‌ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ

ಲಾಹೋರ್​​ನಲ್ಲಿ ಖಲಿಸ್ತಾನ್ ಕಮಾಂಡೊ ಮುಖ್ಯಸ್ಥ ಪರಮ್‌ಜಿತ್ ಸಿಂಗ್​​ ಪಂಜ್ವಾರ್​​ ಹತ್ಯೆ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on:May 06, 2023 | 3:11 PM

Share

ವಾಂಟೆಡ್ ಭಯೋತ್ಪಾದಕ ಮತ್ತು ಖಲಿಸ್ತಾನ್ (Khalistan) ಕಮಾಂಡೊ ಫೋರ್ಸ್ (KCF) ಮುಖ್ಯಸ್ಥ ಪರಮ್‌ಜಿತ್ ಸಿಂಗ್ ಪಂಜ್ವಾರ್ (Paramjit Singh Panjwar) ಅಲಿಯಾಸ್ ಮಲಿಕ್ ಸರ್ದಾರ್ ಸಿಂಗ್​​ನ್ನು ಇಂದು (ಶನಿವಾರ) ಬೆಳಿಗ್ಗೆ ಪಾಕಿಸ್ತಾನದ ಲಾಹೋರ್‌ನ ಜೋಹರ್ ಟೌನ್‌ನಲ್ಲಿ ಇಬ್ಬರು ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಜೋಹರ್ ಟೌನ್‌ನಲ್ಲಿರುವ ಸನ್​​ಫ್ಲವರ್ ಸೊಸೈಟಿಯಲ್ಲಿರುವ ತನ್ನ ಮನೆಯ ಬಳಿ ಬೆಳಿಗ್ಗೆ 6 ಗಂಟೆಯ ಸುಮಾರಿಗೆ  ಗನ್‌ಮ್ಯಾನ್‌ನೊಂದಿಗೆ ಸುತ್ತಾಡುತ್ತಿದ್ದಾಗ ಮೋಟಾರ್‌ಸೈಕಲ್‌ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಗುಂಡಿನ ಚಕಮಕಿಯಲ್ಲಿ ಗನ್ ಮ್ಯಾನ್ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಭಾರತದ ಪಂಜಾಬ್‌ಗೆ ಡ್ರೋನ್‌ಗಳ ಮೂಲಕ ಮಾದಕವಸ್ತು ಮತ್ತು ಶಸ್ತ್ರಾಸ್ತ್ರಗಳ ಕಳ್ಳಸಾಗಣೆಯಲ್ಲಿ ತೊಡಗಿಸಿಕೊಂಡಿರುವ ಪರಮ್‌ಜಿತ್, ತರನ್ ತಾರನ್ ಬಳಿಯ ಪಂಜ್ವಾರ್ ಗ್ರಾಮದಲ್ಲಿ ಜನಿಸಿದರು. 1986 ರಲ್ಲಿ ಅವರ ಸೋದರಸಂಬಂಧಿ ಲಾಭ್ ಸಿಂಗ್ ಅವರಿಂದ ತೀವ್ರಗಾಮಿಯಾದ ನಂತರ KCF ಗೆ ಸೇರಿದರು. ಅದಕ್ಕೂ ಮೊದಲು ಅವರು ಸೋಹಾಲ್‌ನ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದರು.

ಭಾರತೀಯ ಭದ್ರತಾ ಪಡೆ ಲಾಭ್ ಸಿಂಗ್ ಹತ್ಯೆ ಮಾಡಿದ ನಂತರ 1990 ರ ದಶಕದಲ್ಲಿ ಪಂಜ್ವಾರ್ಸ, KCF ನ ಉಸ್ತುವಾರಿ ವಹಿಸಿಕೊಂಡರು ಮತ್ತು ಪಾಕಿಸ್ತಾನಕ್ಕೆ ದಾಟಿದರು.

ಇದನ್ನೂ ಓದಿ: 23ನೇ ವಯಸ್ಸಿನಲ್ಲಿಯೇ ದುರಂತ ಅಂತ್ಯ ಕಂಡ ಮಿಸ್ ಯೂನಿವರ್ಸ್ ಫೈನಲಿಸ್ಟ್

ಪಾಕಿಸ್ತಾನದಿಂದ ಆಶ್ರಯ ಪಡೆದಿರುವ ಮೋಸ್ಟ್ ವಾಂಟೆಡ್ ಭಯೋತ್ಪಾದಕರ ಪಟ್ಟಿಯಲ್ಲಿರುವ ಪಂಜ್ವಾರ್ ಗಡಿಯಾಚೆಗಿನ ಶಸ್ತ್ರಾಸ್ತ್ರಗಳ ಕಳ್ಳಸಾಗಣೆ ಮತ್ತು ಹೆರಾಯಿನ್ ಕಳ್ಳಸಾಗಣೆ ಮೂಲಕ ನಿಧಿ ಸಂಗ್ರಹಿಸುವ ಮೂಲಕ ಕೆಸಿಎಫ್ ಅನ್ನು ಜೀವಂತವಾಗಿರಿಸಿದರು. ಪಾಕಿಸ್ತಾನ ಸರ್ಕಾರದ ನಿರಾಕರಣೆಗಳ ಹೊರತಾಗಿಯೂ, ಪಂಜ್ವಾರ್ ಲಾಹೋರ್‌ನಲ್ಲಿಯೇ ಇದ್ದರು. ಅವರ ಪತ್ನಿ ಮತ್ತು ಮಕ್ಕಳು ಜರ್ಮನಿಗೆ ಸ್ಥಳಾಂತರಗೊಂಡಿದ್ದರು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:53 pm, Sat, 6 May 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ