AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಹೋರ್​​ನಲ್ಲಿ ಖಲಿಸ್ತಾನ್ ಕಮಾಂಡೊ ಮುಖ್ಯಸ್ಥ ಪರಮ್‌ಜಿತ್ ಸಿಂಗ್​​ ಪಂಜ್ವಾರ್​​ ಹತ್ಯೆ

Paramjit Singh Panjwar: ಜೋಹರ್ ಟೌನ್‌ನಲ್ಲಿರುವ ಸನ್​​ಫ್ಲವರ್ ಸೊಸೈಟಿಯಲ್ಲಿರುವ ತನ್ನ ಮನೆಯ ಬಳಿ ಬೆಳಿಗ್ಗೆ 6 ಗಂಟೆಯ ಸುಮಾರಿಗೆ  ಗನ್‌ಮ್ಯಾನ್‌ನೊಂದಿಗೆ ಸುತ್ತಾಡುತ್ತಿದ್ದಾಗ ಮೋಟಾರ್‌ಸೈಕಲ್‌ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ

ಲಾಹೋರ್​​ನಲ್ಲಿ ಖಲಿಸ್ತಾನ್ ಕಮಾಂಡೊ ಮುಖ್ಯಸ್ಥ ಪರಮ್‌ಜಿತ್ ಸಿಂಗ್​​ ಪಂಜ್ವಾರ್​​ ಹತ್ಯೆ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 06, 2023 | 3:11 PM

Share

ವಾಂಟೆಡ್ ಭಯೋತ್ಪಾದಕ ಮತ್ತು ಖಲಿಸ್ತಾನ್ (Khalistan) ಕಮಾಂಡೊ ಫೋರ್ಸ್ (KCF) ಮುಖ್ಯಸ್ಥ ಪರಮ್‌ಜಿತ್ ಸಿಂಗ್ ಪಂಜ್ವಾರ್ (Paramjit Singh Panjwar) ಅಲಿಯಾಸ್ ಮಲಿಕ್ ಸರ್ದಾರ್ ಸಿಂಗ್​​ನ್ನು ಇಂದು (ಶನಿವಾರ) ಬೆಳಿಗ್ಗೆ ಪಾಕಿಸ್ತಾನದ ಲಾಹೋರ್‌ನ ಜೋಹರ್ ಟೌನ್‌ನಲ್ಲಿ ಇಬ್ಬರು ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಜೋಹರ್ ಟೌನ್‌ನಲ್ಲಿರುವ ಸನ್​​ಫ್ಲವರ್ ಸೊಸೈಟಿಯಲ್ಲಿರುವ ತನ್ನ ಮನೆಯ ಬಳಿ ಬೆಳಿಗ್ಗೆ 6 ಗಂಟೆಯ ಸುಮಾರಿಗೆ  ಗನ್‌ಮ್ಯಾನ್‌ನೊಂದಿಗೆ ಸುತ್ತಾಡುತ್ತಿದ್ದಾಗ ಮೋಟಾರ್‌ಸೈಕಲ್‌ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಗುಂಡಿನ ಚಕಮಕಿಯಲ್ಲಿ ಗನ್ ಮ್ಯಾನ್ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಭಾರತದ ಪಂಜಾಬ್‌ಗೆ ಡ್ರೋನ್‌ಗಳ ಮೂಲಕ ಮಾದಕವಸ್ತು ಮತ್ತು ಶಸ್ತ್ರಾಸ್ತ್ರಗಳ ಕಳ್ಳಸಾಗಣೆಯಲ್ಲಿ ತೊಡಗಿಸಿಕೊಂಡಿರುವ ಪರಮ್‌ಜಿತ್, ತರನ್ ತಾರನ್ ಬಳಿಯ ಪಂಜ್ವಾರ್ ಗ್ರಾಮದಲ್ಲಿ ಜನಿಸಿದರು. 1986 ರಲ್ಲಿ ಅವರ ಸೋದರಸಂಬಂಧಿ ಲಾಭ್ ಸಿಂಗ್ ಅವರಿಂದ ತೀವ್ರಗಾಮಿಯಾದ ನಂತರ KCF ಗೆ ಸೇರಿದರು. ಅದಕ್ಕೂ ಮೊದಲು ಅವರು ಸೋಹಾಲ್‌ನ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದರು.

ಭಾರತೀಯ ಭದ್ರತಾ ಪಡೆ ಲಾಭ್ ಸಿಂಗ್ ಹತ್ಯೆ ಮಾಡಿದ ನಂತರ 1990 ರ ದಶಕದಲ್ಲಿ ಪಂಜ್ವಾರ್ಸ, KCF ನ ಉಸ್ತುವಾರಿ ವಹಿಸಿಕೊಂಡರು ಮತ್ತು ಪಾಕಿಸ್ತಾನಕ್ಕೆ ದಾಟಿದರು.

ಇದನ್ನೂ ಓದಿ: 23ನೇ ವಯಸ್ಸಿನಲ್ಲಿಯೇ ದುರಂತ ಅಂತ್ಯ ಕಂಡ ಮಿಸ್ ಯೂನಿವರ್ಸ್ ಫೈನಲಿಸ್ಟ್

ಪಾಕಿಸ್ತಾನದಿಂದ ಆಶ್ರಯ ಪಡೆದಿರುವ ಮೋಸ್ಟ್ ವಾಂಟೆಡ್ ಭಯೋತ್ಪಾದಕರ ಪಟ್ಟಿಯಲ್ಲಿರುವ ಪಂಜ್ವಾರ್ ಗಡಿಯಾಚೆಗಿನ ಶಸ್ತ್ರಾಸ್ತ್ರಗಳ ಕಳ್ಳಸಾಗಣೆ ಮತ್ತು ಹೆರಾಯಿನ್ ಕಳ್ಳಸಾಗಣೆ ಮೂಲಕ ನಿಧಿ ಸಂಗ್ರಹಿಸುವ ಮೂಲಕ ಕೆಸಿಎಫ್ ಅನ್ನು ಜೀವಂತವಾಗಿರಿಸಿದರು. ಪಾಕಿಸ್ತಾನ ಸರ್ಕಾರದ ನಿರಾಕರಣೆಗಳ ಹೊರತಾಗಿಯೂ, ಪಂಜ್ವಾರ್ ಲಾಹೋರ್‌ನಲ್ಲಿಯೇ ಇದ್ದರು. ಅವರ ಪತ್ನಿ ಮತ್ತು ಮಕ್ಕಳು ಜರ್ಮನಿಗೆ ಸ್ಥಳಾಂತರಗೊಂಡಿದ್ದರು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:53 pm, Sat, 6 May 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ