AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಹೋರ್​​ನಲ್ಲಿ ಖಲಿಸ್ತಾನ್ ಕಮಾಂಡೊ ಮುಖ್ಯಸ್ಥ ಪರಮ್‌ಜಿತ್ ಸಿಂಗ್​​ ಪಂಜ್ವಾರ್​​ ಹತ್ಯೆ

Paramjit Singh Panjwar: ಜೋಹರ್ ಟೌನ್‌ನಲ್ಲಿರುವ ಸನ್​​ಫ್ಲವರ್ ಸೊಸೈಟಿಯಲ್ಲಿರುವ ತನ್ನ ಮನೆಯ ಬಳಿ ಬೆಳಿಗ್ಗೆ 6 ಗಂಟೆಯ ಸುಮಾರಿಗೆ  ಗನ್‌ಮ್ಯಾನ್‌ನೊಂದಿಗೆ ಸುತ್ತಾಡುತ್ತಿದ್ದಾಗ ಮೋಟಾರ್‌ಸೈಕಲ್‌ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ

ಲಾಹೋರ್​​ನಲ್ಲಿ ಖಲಿಸ್ತಾನ್ ಕಮಾಂಡೊ ಮುಖ್ಯಸ್ಥ ಪರಮ್‌ಜಿತ್ ಸಿಂಗ್​​ ಪಂಜ್ವಾರ್​​ ಹತ್ಯೆ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on:May 06, 2023 | 3:11 PM

Share

ವಾಂಟೆಡ್ ಭಯೋತ್ಪಾದಕ ಮತ್ತು ಖಲಿಸ್ತಾನ್ (Khalistan) ಕಮಾಂಡೊ ಫೋರ್ಸ್ (KCF) ಮುಖ್ಯಸ್ಥ ಪರಮ್‌ಜಿತ್ ಸಿಂಗ್ ಪಂಜ್ವಾರ್ (Paramjit Singh Panjwar) ಅಲಿಯಾಸ್ ಮಲಿಕ್ ಸರ್ದಾರ್ ಸಿಂಗ್​​ನ್ನು ಇಂದು (ಶನಿವಾರ) ಬೆಳಿಗ್ಗೆ ಪಾಕಿಸ್ತಾನದ ಲಾಹೋರ್‌ನ ಜೋಹರ್ ಟೌನ್‌ನಲ್ಲಿ ಇಬ್ಬರು ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಜೋಹರ್ ಟೌನ್‌ನಲ್ಲಿರುವ ಸನ್​​ಫ್ಲವರ್ ಸೊಸೈಟಿಯಲ್ಲಿರುವ ತನ್ನ ಮನೆಯ ಬಳಿ ಬೆಳಿಗ್ಗೆ 6 ಗಂಟೆಯ ಸುಮಾರಿಗೆ  ಗನ್‌ಮ್ಯಾನ್‌ನೊಂದಿಗೆ ಸುತ್ತಾಡುತ್ತಿದ್ದಾಗ ಮೋಟಾರ್‌ಸೈಕಲ್‌ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಗುಂಡಿನ ಚಕಮಕಿಯಲ್ಲಿ ಗನ್ ಮ್ಯಾನ್ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಭಾರತದ ಪಂಜಾಬ್‌ಗೆ ಡ್ರೋನ್‌ಗಳ ಮೂಲಕ ಮಾದಕವಸ್ತು ಮತ್ತು ಶಸ್ತ್ರಾಸ್ತ್ರಗಳ ಕಳ್ಳಸಾಗಣೆಯಲ್ಲಿ ತೊಡಗಿಸಿಕೊಂಡಿರುವ ಪರಮ್‌ಜಿತ್, ತರನ್ ತಾರನ್ ಬಳಿಯ ಪಂಜ್ವಾರ್ ಗ್ರಾಮದಲ್ಲಿ ಜನಿಸಿದರು. 1986 ರಲ್ಲಿ ಅವರ ಸೋದರಸಂಬಂಧಿ ಲಾಭ್ ಸಿಂಗ್ ಅವರಿಂದ ತೀವ್ರಗಾಮಿಯಾದ ನಂತರ KCF ಗೆ ಸೇರಿದರು. ಅದಕ್ಕೂ ಮೊದಲು ಅವರು ಸೋಹಾಲ್‌ನ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದರು.

ಭಾರತೀಯ ಭದ್ರತಾ ಪಡೆ ಲಾಭ್ ಸಿಂಗ್ ಹತ್ಯೆ ಮಾಡಿದ ನಂತರ 1990 ರ ದಶಕದಲ್ಲಿ ಪಂಜ್ವಾರ್ಸ, KCF ನ ಉಸ್ತುವಾರಿ ವಹಿಸಿಕೊಂಡರು ಮತ್ತು ಪಾಕಿಸ್ತಾನಕ್ಕೆ ದಾಟಿದರು.

ಇದನ್ನೂ ಓದಿ: 23ನೇ ವಯಸ್ಸಿನಲ್ಲಿಯೇ ದುರಂತ ಅಂತ್ಯ ಕಂಡ ಮಿಸ್ ಯೂನಿವರ್ಸ್ ಫೈನಲಿಸ್ಟ್

ಪಾಕಿಸ್ತಾನದಿಂದ ಆಶ್ರಯ ಪಡೆದಿರುವ ಮೋಸ್ಟ್ ವಾಂಟೆಡ್ ಭಯೋತ್ಪಾದಕರ ಪಟ್ಟಿಯಲ್ಲಿರುವ ಪಂಜ್ವಾರ್ ಗಡಿಯಾಚೆಗಿನ ಶಸ್ತ್ರಾಸ್ತ್ರಗಳ ಕಳ್ಳಸಾಗಣೆ ಮತ್ತು ಹೆರಾಯಿನ್ ಕಳ್ಳಸಾಗಣೆ ಮೂಲಕ ನಿಧಿ ಸಂಗ್ರಹಿಸುವ ಮೂಲಕ ಕೆಸಿಎಫ್ ಅನ್ನು ಜೀವಂತವಾಗಿರಿಸಿದರು. ಪಾಕಿಸ್ತಾನ ಸರ್ಕಾರದ ನಿರಾಕರಣೆಗಳ ಹೊರತಾಗಿಯೂ, ಪಂಜ್ವಾರ್ ಲಾಹೋರ್‌ನಲ್ಲಿಯೇ ಇದ್ದರು. ಅವರ ಪತ್ನಿ ಮತ್ತು ಮಕ್ಕಳು ಜರ್ಮನಿಗೆ ಸ್ಥಳಾಂತರಗೊಂಡಿದ್ದರು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:53 pm, Sat, 6 May 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ