AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ ನಂಬಿಕೆಗೆ ಯೋಗ್ಯವಲ್ಲ, ಮತ್ತೆ ಯುದ್ಧ ಆರಂಭವಾಗಬಹುದು; ಇರಾನ್ ಸ್ಫೋಟಕ ಹೇಳಿಕೆ

ಯಾವುದೇ ಒಪ್ಪಂದದ ಬಗ್ಗೆ ಅಮೆರಿಕ ಗಂಭೀರವಾಗಿಲ್ಲ. ಹೀಗಾಗಿ ಯುದ್ಧ ಪುನರಾರಂಭವಾಗಬಹುದು ಎಂದು ಇರಾನ್ ಹೇಳಿಕೆ ನೀಡಿದೆ. ಅಲ್ಲದೆ, ಇರಾನ್ ಸೇನೆಯು ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ಕೂಡ ಹೇಳಿದೆ. ಅತ್ತ ಟ್ರಂಪ್ ಇರಾನ್‌ನ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ. ಇರಾನ್​ನಲ್ಲಿ ಪರಮಾಣು ಶಸ್ತ್ರಾಸ್ತ್ರಗಳ ತಯಾರಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ, ಕದನ ವಿರಾಮದ ನಡುವೆಯೂ ಮತ್ತೆ ಎರಡೂ ದೇಶಗಳ ನಡುವಿನ ಉದ್ವಿಗ್ನತೆ ಮುಂದುವರೆದಿದೆ.

ಅಮೆರಿಕ ನಂಬಿಕೆಗೆ ಯೋಗ್ಯವಲ್ಲ, ಮತ್ತೆ ಯುದ್ಧ ಆರಂಭವಾಗಬಹುದು; ಇರಾನ್ ಸ್ಫೋಟಕ ಹೇಳಿಕೆ
Masoud Pezeshkian And Donald TrumpImage Credit source: TV9
ಸುಷ್ಮಾ ಚಕ್ರೆ
|

Updated on: May 02, 2026 | 4:23 PM

Share

ಟೆಹ್ರಾನ್, ಮೇ 2: ಕದನವಿರಾಮ ಘೋಷಣೆಯಾಗಿದ್ದರೂ ಇರಾನ್ ಮತ್ತು ಅಮೆರಿಕದ ನಡುವಿನ ಉದ್ವಿಗ್ನತೆ ಇನ್ನೂ ಹೆಚ್ಚಾಗಿದೆ. ಎರಡೂ ದೇಶಗಳ ನಡುವಿನ ಪರಿಸ್ಥಿತಿ ಮತ್ತೆ ಉಲ್ಬಣಗೊಳ್ಳಬಹುದು. ಅಮೆರಿಕ ಮತ್ತು ಇಸ್ರೇಲ್ ಜೊತೆ ಯುದ್ಧ ಮತ್ತೆ ಆರಂಭವಾಗಬಹುದು ಎಂದು ಇರಾನ್ (Iran) ಸೇನೆ ಎಚ್ಚರಿಸಿದೆ. ಇರಾನ್ ಸೇನಾ ಉಪ ಅಧಿಕಾರಿ ಮೊಹಮ್ಮದ್ ಜಾಫರ್ ಅಸಾದಿ ಅಮೆರಿಕ ಯಾವುದೇ ಒಪ್ಪಂದಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ ಎಂದು ಟೀಕಿಸಿದ್ದಾರೆ.

ಅಮೆರಿಕದ ಅಧಿಕಾರಿಗಳ ಹೇಳಿಕೆಗಳು ಕೇವಲ ಪ್ರದರ್ಶನಕ್ಕಾಗಿ ಮಾತ್ರ ಎಂದು ಅಸ್ಸಾದಿ ಆರೋಪಿಸಿದ್ದಾರೆ. ಇರಾನ್ ಸೇನೆಯು ಸಂಪೂರ್ಣವಾಗಿ ಸಿದ್ಧವಾಗಿದೆ. ಮತ್ತೆ ಯಾವುದೇ ದಾಳಿ ನಡೆದರೂ ಪ್ರತೀಕಾರ ತೀರಿಸಿಕೊಳ್ಳುತ್ತದೆ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ.

ಇದನ್ನೂ ಓದಿ: ನೀವು ನನಗೆ ಸಹಾಯ ಮಾಡಿ, ನಾನು ನಿಮಗೆ ಸಹಾಯ ಮಾಡ್ತೇನೆ, ಟ್ರಂಪ್-ಪುಟಿನ್ 90 ನಿಮಿಷಗಳ ರಹಸ್ಯ ಮಾತುಕತೆ

ಇರಾನ್ ಜೊತೆಗಿನ ಮಾತುಕತೆಯ ಹೊಸ ಪ್ರಸ್ತಾಪವನ್ನು ಡೊನಾಲ್ಡ್ ಟ್ರಂಪ್ ತಿರಸ್ಕರಿಸಿದ ಸಮಯದಲ್ಲಿಯೇ ಅವರ ಈ ಹೇಳಿಕೆ ಬಂದಿದೆ. ಇರಾನ್ ತಾನು ಒಪ್ಪಿಕೊಳ್ಳಲು ಸಾಧ್ಯವಾಗದ ಷರತ್ತುಗಳನ್ನು ವಿಧಿಸುತ್ತಿದೆ ಎಂದು ಟ್ರಂಪ್ ಹೇಳಿದ್ದಾರೆ. ಇರಾನ್ ನಾಯಕರು ಒಗ್ಗಟ್ಟಿನಲ್ಲಿಲ್ಲ ಎಂದು ಅವರು ಆರೋಪಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಇರಾನ್ ಸಮರ ಅಂತ್ಯ: ಟ್ರಂಪ್ ಆಡಳಿತದ ದಿಢೀರ್ ಘೋಷಣೆ, ಸಂಸತ್ತಿನ ಹಸ್ತಕ್ಷೇಪಕ್ಕೆ ಬೀಳಲಿದೆಯೇ ಬ್ರೇಕ್?

ಒಂದು ಕಾರ್ಯಕ್ರಮವೊಂದರಲ್ಲಿ ಟ್ರಂಪ್ ಮಾತನಾಡುತ್ತಾ, ಪರಮಾಣು ಶಸ್ತ್ರಾಸ್ತ್ರಗಳು ಹುಚ್ಚರ ಕೈಗೆ ಸಿಗಲು ಬಿಡಲು ಸಾಧ್ಯವಿಲ್ಲದ ಕಾರಣ ಅಮೆರಿಕ ಈ ಯುದ್ಧದಲ್ಲಿ ಭಾಗವಹಿಸಿದೆ ಎಂದು ಹೇಳಿದ್ದಾರೆ. ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಪಡೆಯುವುದನ್ನು ತಡೆಯುವುದು ಅತ್ಯಗತ್ಯ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
‘ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ರು’; ಚೇತನ್
‘ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ರು’; ಚೇತನ್
ಗೃಹಿಣಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ ಆರೋಪ
ಗೃಹಿಣಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ ಆರೋಪ
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?
ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?