AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಭಾಷಣ ಮುಗಿಯುವಷ್ಟರಲ್ಲಿ ಯುದ್ಧವೇ ಮುಗಿಯುತ್ತೆ ಬಿಡಿ, ಪಾಕ್​ ಮಂದಿ ಶೆಹಬಾಜ್ ವಿರುದ್ಧ ಗರಂ ಆಗಿದ್ದೇಕೆ?

‘ನಿಮ್ಮ ಭಾಷಣ ಮುಗಿಯುವಷ್ಟರಲ್ಲಿ ಯುದ್ಧವೇ ಮುಗಿದಿರುತ್ತೆ ಬಿಡಿ ಎಂದು ಪಾಕಿಸ್ತಾನಿಗಳೇ ಪ್ರಧಾನಿ ಶೆಹಬಾಜ್ ಷರೀಫ್(Shahbaz Sharif)​ ಅವರನ್ನು ಅಣಕಿಸಿದ್ದಾರೆ. ಭಾರತೀಯ ಸಶಸ್ತ್ರ ಪಡೆಗಳು ಪಿಒಕೆ ಹಾಗೂ ಪಂಜಾಬ್ ಪ್ರಾಂತ್ಯದಲ್ಲಿ ಭಯೋತ್ಪಾದಕರ ಅಡಗುತಾಣಗಳನ್ನು ಗುರಿಯಾಗಿಸಿ 9 ಕಡೆಗಳಲ್ಲಿ ದಾಳಿ ನಡೆಸಿತ್ತು. ನಂತರ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಭಾರತದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದರು.

ನಿಮ್ಮ ಭಾಷಣ ಮುಗಿಯುವಷ್ಟರಲ್ಲಿ ಯುದ್ಧವೇ ಮುಗಿಯುತ್ತೆ ಬಿಡಿ, ಪಾಕ್​ ಮಂದಿ ಶೆಹಬಾಜ್ ವಿರುದ್ಧ ಗರಂ ಆಗಿದ್ದೇಕೆ?
ಶೆಹಬಾಜ್ ಷರೀಫ್ Image Credit source: Moneycontrol
ನಯನಾ ರಾಜೀವ್
|

Updated on: May 09, 2025 | 11:08 AM

Share

ಇಸ್ಲಾಮಾಬಾದ್, ಮೇ 09: ‘‘ನಿಮ್ಮ ಭಾಷಣ ಮುಗಿಯುವಷ್ಟರಲ್ಲಿ ಯುದ್ಧವೇ ಮುಗಿದಿರುತ್ತೆ ಬಿಡಿ’’ ಎಂದು ಪಾಕಿಸ್ತಾನಿಗಳೇ ಪ್ರಧಾನಿ ಶೆಹಬಾಜ್ ಷರೀಫ್(Shahbaz Sharif)​ ಅವರನ್ನು ಅಣಕಿಸಿದ್ದಾರೆ. ಭಾರತೀಯ ಸಶಸ್ತ್ರ ಪಡೆಗಳು ಪಿಒಕೆ ಹಾಗೂ ಪಂಜಾಬ್ ಪ್ರಾಂತ್ಯದಲ್ಲಿ ಭಯೋತ್ಪಾದಕರ ಅಡಗುತಾಣಗಳನ್ನು ಗುರಿಯಾಗಿಸಿ 9 ಕಡೆಗಳಲ್ಲಿ ದಾಳಿ ನಡೆಸಿತ್ತು. ನಂತರ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಭಾರತದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದರು.

ಅನೇಕ ಪಾಕಿಸ್ತಾನಿ ನಾಗರಿಕರು ತಮ್ಮ ಪ್ರಧಾನಿಯವರ ನಿಧಾನ ಭಾಷಣದಿಂದ ಸಿಟ್ಟಾದರು, ಅವರು ಪ್ರಧಾನಿಯನ್ನು ‘ದುರ್ಬಲ ಮತ್ತು ಆತ್ಮವಿಶ್ವಾಸದ ಕೊರತೆ’ ಎಂದು ಕರೆದರು. ನಿಮ್ಮ ಭಾಷಣ ಮುಗಿಯುವಷ್ಟರಲ್ಲಿ ಯುದ್ಧವೇ ಅಂತ್ಯಗೊಂಡಿರುತ್ತೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ
Image
12 ಡ್ರೋನ್​ಗಳನ್ನು ಹೊಡೆದುರುಳಿಸಲಾಗಿದೆ ಎಂದ ಪಾಕ್: ಭಾರತ ಹೇಳಿದ್ದೇನು?
Image
ಭಾರತ ಪಾಕ್​ ಮೇಲೆ ನಡೆಸಿದ ದಾಳಿಯಲ್ಲಿ 100 ಉಗ್ರರು ಹತರಾಗಿದ್ದಾರೆ
Image
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
Image
ಪಾಕಿಸ್ತಾನದ ಮೇಲೆ ಭಾರತದ ದಾಳಿಗೂ ಮುನ್ನ, ನಂತರದ ಸ್ಯಾಟಲೈಟ್​ ಚಿತ್ರಗಳು

ಶೆಹಬಾಜ್ ತಮ್ಮ ಭಾಷಣದಲ್ಲಿ ಭಾರತವು ದೊಡ್ಡ ತಪ್ಪು ಮಾಡಿದೆ, ಪಾಕಿಸ್ತಾನದಲ್ಲಿ ಮೃತಪಟ್ಟವರ ಹನಿ ರಕ್ತದ ಪ್ರತೀಕಾರವನ್ನು ತೀರಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಷರೀಫ್ ಅವರ ಮಾತುಗಳು ದೇಶಭಕ್ತಿಯನ್ನು ಹುಟ್ಟುಹಾಕುವ ಬದಲು, ಪ್ರಧಾನಿಯವರ ನಿಧಾನಗತಿಯ ಭಾಷಣವನ್ನು ಟೀಕಿಸಿದ ಪಾಕಿಸ್ತಾನಿ ನಾಗರಿಕರ ಕೋಪಕ್ಕೆ ಕಾರಣವಾಯಿತು.

ಪಾಕಿಸ್ತಾನಿ ಬಳಕೆದಾರರೊಬ್ಬರು, “ಶೆಹಬಾಜ್ ಅಂಕಲ್ ದಯವಿಟ್ಟು ಸ್ವಲ್ಪ ಫಾಸ್ಟ್​ ಆಗಿ ಮಾತನಾಡಿ, ನಮಗೆ ಪ್ರತಿಯೊಂದು ವಿಷಯದ ಬಗ್ಗೆ ಭಾಷಣ ಬೇಡ, ದಯವಿಟ್ಟು ವಿಷಯಕ್ಕೆ ಬನ್ನಿ” ಎಂದು ಹೇಳಿದ್ದಾರೆ. ಮತ್ತೊಬ್ಬ ಕಮೆಂಟ್ ಮಾಡಿದ್ದು, ಶೆಹಬಾಜ್​ಗೆ ಆತ್ಮವಿಶ್ವಾಸದ ಕೊರತೆ ಇದೆ. ಶಹಬಾಜ್ ಷರೀಫ್ ಅವರ ಭಾಷಣದ ವೇಗವನ್ನು ನೋಡಿದರೆ, ಯುದ್ಧ ಕೊನೆಗೊಳ್ಳಬಹುದು ಆದರೆ ಅವರ ಭಾಷಣ ಮುಗಿಯುವುದಿಲ್ಲ ಎಂದಿದ್ದಾರೆ. ಮತ್ತೊಬ್ಬರು ಶೆಹಬಾಜ್​ ಷರೀಫ್​ನನ್ನು ಹೇಡಿ ಎಂದು ಕರೆದಿದ್ದಾರೆ.

“ಭಾಷಣ ಕೇಳಿದ ಮೇಲೆ ಪಾಕಿಸ್ತಾನ ಪ್ರತೀಕಾರ ತೀರಿಸಿಕೊಳ್ಳಲು ಯೋಜಿಸುತ್ತಿಲ್ಲ ಎಂಬುದು ಸ್ಪಷ್ಟವಾಗಿದೆ” ಎಂದು ಹೇಳಿದ್ದಾರೆ. ಏತನ್ಮಧ್ಯೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಆಪರೇಷನ್ ಸಿಂಧೂರ್ ನಿರಂತರ ಕಾರ್ಯಾಚರಣೆ ಎಂದು ಸ್ಪಷ್ಟಪಡಿಸಿದರು. ಭಾರತವು ಪರಿಸ್ಥಿತಿಯನ್ನು ಉಲ್ಬಣಗೊಳಿಸಲು ಬಯಸುವುದಿಲ್ಲ ಆದರೆ ಪಾಕಿಸ್ತಾನ ಪ್ರತೀಕಾರ ತೀರಿಸಿಕೊಂಡರೆ ಪ್ರತಿದಾಳಿ ನಡೆಸುತ್ತದೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: Operation Sindoor: ಪಾಕ್ ಪ್ರಧಾನಿ ಶೆಹಬಾಜ್, ಸೇನಾ ಮುಖ್ಯಸ್ಥ ಮುನೀರ್ ಮನೆ ಬಳಿ ಸ್ಫೋಟ?

ಏಪ್ರಿಲ್ 22ರಂದು ಉಗ್ರರು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ಅಮಾಯಕರ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆಗೈದಿದ್ದರು. ಇದಕ್ಕೆ ಪ್ರತಿಯಾಗಿ ಭಾರತ ಪಾಕಿಸ್ತಾನದ 9 ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿ 100 ಉಗ್ರರನ್ನು ಹತ್ಯೆ ಮಾಡಿತ್ತು. ಇದಾದ ಬಳಿಕ ಪಾಕಿಸ್ತಾನವು ಭಾರತದ ಮೇಲೆ ಪ್ರತಿ ದಾಳಿ ಶುರು ಮಾಡಿತ್ತು, ಗಡಿಗಳ ಉದ್ದಕ್ಕೂ ಗುಂಡಿನ ದಾಳಿ ನಡೆಸಿದ್ದು, ಅನೇಕ ನಾಗರಿಕರನ್ನು ಹತ್ಯೆ ಮಾಡಿತ್ತು, ಹೀಗಾಗಿ ಕೋಪಗೊಂಡ ಭಾರತ ಮತ್ತೆ ಪಾಕ್​ ವಿರುದ್ಧ ದಾಳಿಗೆ ನಿಂತಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ