AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಸಾಕುಪ್ರಾಣಿಗಳಂತಾಗಿದ್ದೇವೆ, ಮನೆ ಸುತ್ತ ಬೇಲಿ ಕಟ್ಟುತ್ತಿದ್ದಾರೆ-ಶಾಂಘೈ ಆಡಳಿತದ ವಿರುದ್ಧ ತಿರುಗಿಬಿದ್ದ ಜನರು

ಮನೆಯ ಎದುರು ಹಸಿರು ಬಣ್ಣದ ಸರಳುಗಳನ್ನು ಅಳವಡಿಸಲಾಗುತ್ತಿದೆ. ಆದರೆ ಹೀಗೆ ಮಾಡುವ ಮುನ್ನ ಒಂದು ಎಚ್ಚರಿಕೆಯನ್ನೂ ನೀಡುತ್ತಿಲ್ಲ.  ಒಂದು ಏರಿಯಾದಲ್ಲಿ ಒಬ್ಬ ವ್ಯಕ್ತಿಯಲ್ಲಿ ಕೊರೊನಾ ಕಾಣಿಸಿಕೊಂಡರೂ ಇಡೀ ಏರಿಯಾವನ್ನೇ ಸೀಲ್​ಡೌನ್ ಮಾಡುತ್ತಿದ್ದಾರೆ ಎಂದು ಜನರು ಆರೋಪಿಸುತ್ತಿದ್ದಾರೆ.

ನಾವು ಸಾಕುಪ್ರಾಣಿಗಳಂತಾಗಿದ್ದೇವೆ, ಮನೆ ಸುತ್ತ ಬೇಲಿ ಕಟ್ಟುತ್ತಿದ್ದಾರೆ-ಶಾಂಘೈ ಆಡಳಿತದ ವಿರುದ್ಧ ತಿರುಗಿಬಿದ್ದ ಜನರು
ಶಾಂಘೈನಲ್ಲಿ ಮನೆಗಳ ಎದುರು ಹಸಿರು ಗೇಟ್​
TV9 Web
| Edited By: |

Updated on: Apr 27, 2022 | 12:43 PM

Share

ಶಾಂಘೈನಲ್ಲಿ ಕೊವಿಡ್​ 19 ಮಿತಿಮೀರುತ್ತಿದೆ. ಅಲ್ಲಿ ಕೊರೊನಾ ಕಷ್ಟಕ್ಕಿಂತ ಅದರ ನಿಯಂತ್ರಣಕ್ಕಾಗಿ ಹೇರಲಾದ ನಿರ್ಬಂಧವೇ ಕ್ರೂರವಾಗಿದೆ. ಜನರು ಮನೆಯಿಂದ ಹೊರಗೆ ಬೀಳುವಂತಿಲ್ಲ. ಮನೆಯೊಳಗೆ ಬಂಧಿಯಾಗಿರುವ ಜನರಿಗೆ ಅಗತ್ಯ ವಸ್ತುಗಳ ಪೂರೈಕೆ ಸರಿಯಾಗಿ ಆಗುತ್ತಿಲ್ಲ. ಅಷ್ಟೇ ಅಲ್ಲ, ಯಾರಲ್ಲಾದರೂ ಕೊವಿಡ್​ 19 ಸೋಂಕು ಕಂಡುಬಂದರೆ ಅವರ ಮನೆಯ ಎದುರು ಸ್ಥಳೀಯ ಆಡಳಿತ ಬೇಲಿಯನ್ನೂ ನಿರ್ಮಾಣ ಮಾಡುತ್ತಿದೆ ಎಂದು ನ್ಯೂಯಾರ್ಕ್ ಪೋಸ್ಟ್​ ವರದಿ ಮಾಡಿದೆ. ಆದರೆ ಚೀನಾ ಜನರು ಇದನ್ನು ಸಿಕ್ಕಾಪಟೆ ವಿರೋಧ ಮಾಡುತ್ತಿದ್ದಾರೆ. ಕೊರೊನಾ, ಲಾಕ್​ಡೌನ್​ ಹೆಸರಲ್ಲಿ ಇಲ್ಲಿನ ಆಡಳಿತ, ಅಧಿಕಾರಿಗಳು ತಮ್ಮನ್ನು ಪ್ರಾಣಿಗಳಂತೆ ನಡೆಸಿಕೊಳ್ಳುತ್ತಿದ್ದಾರೆ ಎಂದು ಶಾಂಘೈ ನಿವಾಸಿಗಳು ಸೋಷಿಯಲ್​ ಮೀಡಿಯಾಗಳಲ್ಲಿ ಆಕ್ರೋಶ ಹೊರಹಾಕುತ್ತಿದ್ದಾರೆ ಎಂದೂ ವರದಿಯಲ್ಲಿ ಉಲ್ಲೇಖವಾಗಿದೆ.

ಕೊರೊನಾ ಹೆಚ್ಚಾಗುತ್ತಿದೆ. ಆದರೆ ಅದನ್ನು ತಡೆಯಲು ವಿಧಿಸಲಾಗಿರುವ ಕಠಿಣ ನಿಯಮಗಳನ್ನು ನಮ್ಮ ಹಕ್ಕುಗಳನ್ನು ಕಸಿದುಕೊಳ್ಳುತ್ತಿವೆ. ಸೋಂಕು ಕಂಡುಬಂದವರ ಮನೆಯ ಎದುರು ಲೋಹದ ಬೇಲಿಗಳನ್ನು ಹಾಕಲಾಗುತ್ತಿದೆ. ಈ ಮೂಲಕ ಮನುಷ್ಯರನ್ನೂ ಸಾಕುಪ್ರಾಣಿಗಳಂತೆ ನಡೆಸಿಕೊಳ್ಳಲಾಗುತ್ತಿದೆ. ನಮಗಿದು ಅಗೌರವ ಎಂದು ಸ್ಥಳೀಯ ನಿವಾಸಿಯೊಬ್ಬರು ಹೇಳಿದ್ದಾರೆ.  ಚೀನಾದ ಸಾಮಾಜಿಕ ಜಾಲತಾಣಗಳಾದ ವೈಬೋ ಮತ್ತು ಇತರ ಆ್ಯಪ್​ಗಳಲ್ಲಿ ಜನರ ಆಕ್ರೋಶವೇ ತುಂಬಿ ಹೋಗಿದೆ.  ಅಲ್ಲದೆ, ಚೀನಾದ ಆರೋಗ್ಯ ಸಿಬ್ಬಂದಿ ವಸತಿ ಕಟ್ಟಡದ ಹೊರಭಾಗದಲ್ಲಿ ಹಸಿರು ಬಣ್ಣದ ಮೆಟಲ್​ ಗೇಟ್​ಗಳನ್ನು ಅಳವಡಿಸುತ್ತಿರುವ ಫೋಟೋ, ವಿಡಿಯೋಗಳನ್ನೂ ಜನ ಶೇರ್ ಮಾಡಿಕೊಳ್ಳುತ್ತಿದ್ದಾರೆ.

ಮನೆಯ ಎದುರು ಹಸಿರು ಬಣ್ಣದ ಸರಳುಗಳನ್ನು ಅಳವಡಿಸಲಾಗುತ್ತಿದೆ. ಆದರೆ ಹೀಗೆ ಮಾಡುವ ಮುನ್ನ ಒಂದು ಎಚ್ಚರಿಕೆಯನ್ನೂ ನೀಡುತ್ತಿಲ್ಲ.  ಒಂದು ಏರಿಯಾದಲ್ಲಿ ಒಬ್ಬ ವ್ಯಕ್ತಿಯಲ್ಲಿ ಕೊರೊನಾ ಕಾಣಿಸಿಕೊಂಡರೂ ಇಡೀ ಏರಿಯಾವನ್ನೇ ಸೀಲ್​ಡೌನ್ ಮಾಡುತ್ತಿದ್ದಾರೆ. ಹಾಗಂತ ಕೊರೊನಾ ಕಾಣಿಸಿಕೊಂಡವರಿಗೆ ಮನೆಯಲ್ಲೇ ಕ್ವಾರಂಟೈನ್ ಆಗಲೂ ಬಿಡುತ್ತಿಲ್ಲ. ಬಲವಂತವಾಗಿ ಅವರನ್ನು ಕರೆದುಕೊಂಡು ಹೋಗಲಾಗುತ್ತಿದೆ ಎಂದು ಬಿಬಿಸಿ ವರದಿ ಮಾಡಿದೆ. ಶಾಂಘೈನಲ್ಲಿ ಒಮಿಕ್ರಾನ್​​ನಿಂದಾಗಿ ಕೊರೊನಾ ಭಯಂಕರ ಹರಡುತ್ತಿದ್ದು, ಶನಿವಾರ 40 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಚೀನಾದಲ್ಲಿ ಕೊವಿಡ್​ 19 ಮೊದಲ ಅಲೆಯ ಹೊತ್ತಲ್ಲೂ ಕಠಿಣ ನಿರ್ಬಂಧಗಳನ್ನು ವಿಧಿಸಲಾಗಿತ್ತು. ಈಗಲೂ ಕೂಡ ಲಾಕ್​ಡೌನ್ ಅತ್ಯಂತ ಬಿಗಿಯಾಗಿದೆ. ಅದರಲ್ಲೂ ಶಾಂಘೈನಲ್ಲಂತೂ ಬದುಕುವುದೇ ಕಷ್ಟವಾಗುತ್ತಿದೆ. ಹೀಗಾಗಿ ಜನರು ಸಹಜವಾಗಿಯೇ ಸೋಷಿಯಲ್ ಮೀಡಿಯಾಗಳ ಮೊರೆ ಹೋಗಿದ್ದಾರೆ. ಸ್ವಲ್ಪ ದಿನಗಳ ಹಿಂದೆ ಅಲ್ಲಿನ ನಿವಾಸಿಗಳು ಮನೆಯ ಬಾಲ್ಕನಿಗೆ ಬಂದು, ತಮ್ಮ ಕಷ್ಟವನ್ನು ಹಾಡಿನ ರೂಪದಲ್ಲಿ ಹಾಡಿದ್ದರು. ಬಳಿಕ ಸರ್ಕಾರದ ಡ್ರೋನ್​​ವೊಂದು ಹಾರಾಟ ನಡೆಸಿತ್ತು. ಹೀಗೆಲ್ಲ ವರ್ತಿಸಬೇಡಿ ಎಂಬ ಎಚ್ಚರಿಕೆಯನ್ನೂ ನೀಡಿತ್ತು.

ಇದನ್ನೂ ಓದಿ: ‘ಕೆಜಿಎಫ್​ 2’ ಮಾತ್ರವಲ್ಲ, ಅತಿ ಹೆಚ್ಚು ಕಲೆಕ್ಷನ್​ ಮಾಡಿದ ಟಾಪ್​ 10 ಸಿನಿಮಾಗಳ ಲಿಸ್ಟ್​ ಇಲ್ಲಿದೆ..

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್