AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಸಾಕುಪ್ರಾಣಿಗಳಂತಾಗಿದ್ದೇವೆ, ಮನೆ ಸುತ್ತ ಬೇಲಿ ಕಟ್ಟುತ್ತಿದ್ದಾರೆ-ಶಾಂಘೈ ಆಡಳಿತದ ವಿರುದ್ಧ ತಿರುಗಿಬಿದ್ದ ಜನರು

ಮನೆಯ ಎದುರು ಹಸಿರು ಬಣ್ಣದ ಸರಳುಗಳನ್ನು ಅಳವಡಿಸಲಾಗುತ್ತಿದೆ. ಆದರೆ ಹೀಗೆ ಮಾಡುವ ಮುನ್ನ ಒಂದು ಎಚ್ಚರಿಕೆಯನ್ನೂ ನೀಡುತ್ತಿಲ್ಲ.  ಒಂದು ಏರಿಯಾದಲ್ಲಿ ಒಬ್ಬ ವ್ಯಕ್ತಿಯಲ್ಲಿ ಕೊರೊನಾ ಕಾಣಿಸಿಕೊಂಡರೂ ಇಡೀ ಏರಿಯಾವನ್ನೇ ಸೀಲ್​ಡೌನ್ ಮಾಡುತ್ತಿದ್ದಾರೆ ಎಂದು ಜನರು ಆರೋಪಿಸುತ್ತಿದ್ದಾರೆ.

ನಾವು ಸಾಕುಪ್ರಾಣಿಗಳಂತಾಗಿದ್ದೇವೆ, ಮನೆ ಸುತ್ತ ಬೇಲಿ ಕಟ್ಟುತ್ತಿದ್ದಾರೆ-ಶಾಂಘೈ ಆಡಳಿತದ ವಿರುದ್ಧ ತಿರುಗಿಬಿದ್ದ ಜನರು
ಶಾಂಘೈನಲ್ಲಿ ಮನೆಗಳ ಎದುರು ಹಸಿರು ಗೇಟ್​
TV9 Web
| Edited By: |

Updated on: Apr 27, 2022 | 12:43 PM

Share

ಶಾಂಘೈನಲ್ಲಿ ಕೊವಿಡ್​ 19 ಮಿತಿಮೀರುತ್ತಿದೆ. ಅಲ್ಲಿ ಕೊರೊನಾ ಕಷ್ಟಕ್ಕಿಂತ ಅದರ ನಿಯಂತ್ರಣಕ್ಕಾಗಿ ಹೇರಲಾದ ನಿರ್ಬಂಧವೇ ಕ್ರೂರವಾಗಿದೆ. ಜನರು ಮನೆಯಿಂದ ಹೊರಗೆ ಬೀಳುವಂತಿಲ್ಲ. ಮನೆಯೊಳಗೆ ಬಂಧಿಯಾಗಿರುವ ಜನರಿಗೆ ಅಗತ್ಯ ವಸ್ತುಗಳ ಪೂರೈಕೆ ಸರಿಯಾಗಿ ಆಗುತ್ತಿಲ್ಲ. ಅಷ್ಟೇ ಅಲ್ಲ, ಯಾರಲ್ಲಾದರೂ ಕೊವಿಡ್​ 19 ಸೋಂಕು ಕಂಡುಬಂದರೆ ಅವರ ಮನೆಯ ಎದುರು ಸ್ಥಳೀಯ ಆಡಳಿತ ಬೇಲಿಯನ್ನೂ ನಿರ್ಮಾಣ ಮಾಡುತ್ತಿದೆ ಎಂದು ನ್ಯೂಯಾರ್ಕ್ ಪೋಸ್ಟ್​ ವರದಿ ಮಾಡಿದೆ. ಆದರೆ ಚೀನಾ ಜನರು ಇದನ್ನು ಸಿಕ್ಕಾಪಟೆ ವಿರೋಧ ಮಾಡುತ್ತಿದ್ದಾರೆ. ಕೊರೊನಾ, ಲಾಕ್​ಡೌನ್​ ಹೆಸರಲ್ಲಿ ಇಲ್ಲಿನ ಆಡಳಿತ, ಅಧಿಕಾರಿಗಳು ತಮ್ಮನ್ನು ಪ್ರಾಣಿಗಳಂತೆ ನಡೆಸಿಕೊಳ್ಳುತ್ತಿದ್ದಾರೆ ಎಂದು ಶಾಂಘೈ ನಿವಾಸಿಗಳು ಸೋಷಿಯಲ್​ ಮೀಡಿಯಾಗಳಲ್ಲಿ ಆಕ್ರೋಶ ಹೊರಹಾಕುತ್ತಿದ್ದಾರೆ ಎಂದೂ ವರದಿಯಲ್ಲಿ ಉಲ್ಲೇಖವಾಗಿದೆ.

ಕೊರೊನಾ ಹೆಚ್ಚಾಗುತ್ತಿದೆ. ಆದರೆ ಅದನ್ನು ತಡೆಯಲು ವಿಧಿಸಲಾಗಿರುವ ಕಠಿಣ ನಿಯಮಗಳನ್ನು ನಮ್ಮ ಹಕ್ಕುಗಳನ್ನು ಕಸಿದುಕೊಳ್ಳುತ್ತಿವೆ. ಸೋಂಕು ಕಂಡುಬಂದವರ ಮನೆಯ ಎದುರು ಲೋಹದ ಬೇಲಿಗಳನ್ನು ಹಾಕಲಾಗುತ್ತಿದೆ. ಈ ಮೂಲಕ ಮನುಷ್ಯರನ್ನೂ ಸಾಕುಪ್ರಾಣಿಗಳಂತೆ ನಡೆಸಿಕೊಳ್ಳಲಾಗುತ್ತಿದೆ. ನಮಗಿದು ಅಗೌರವ ಎಂದು ಸ್ಥಳೀಯ ನಿವಾಸಿಯೊಬ್ಬರು ಹೇಳಿದ್ದಾರೆ.  ಚೀನಾದ ಸಾಮಾಜಿಕ ಜಾಲತಾಣಗಳಾದ ವೈಬೋ ಮತ್ತು ಇತರ ಆ್ಯಪ್​ಗಳಲ್ಲಿ ಜನರ ಆಕ್ರೋಶವೇ ತುಂಬಿ ಹೋಗಿದೆ.  ಅಲ್ಲದೆ, ಚೀನಾದ ಆರೋಗ್ಯ ಸಿಬ್ಬಂದಿ ವಸತಿ ಕಟ್ಟಡದ ಹೊರಭಾಗದಲ್ಲಿ ಹಸಿರು ಬಣ್ಣದ ಮೆಟಲ್​ ಗೇಟ್​ಗಳನ್ನು ಅಳವಡಿಸುತ್ತಿರುವ ಫೋಟೋ, ವಿಡಿಯೋಗಳನ್ನೂ ಜನ ಶೇರ್ ಮಾಡಿಕೊಳ್ಳುತ್ತಿದ್ದಾರೆ.

ಮನೆಯ ಎದುರು ಹಸಿರು ಬಣ್ಣದ ಸರಳುಗಳನ್ನು ಅಳವಡಿಸಲಾಗುತ್ತಿದೆ. ಆದರೆ ಹೀಗೆ ಮಾಡುವ ಮುನ್ನ ಒಂದು ಎಚ್ಚರಿಕೆಯನ್ನೂ ನೀಡುತ್ತಿಲ್ಲ.  ಒಂದು ಏರಿಯಾದಲ್ಲಿ ಒಬ್ಬ ವ್ಯಕ್ತಿಯಲ್ಲಿ ಕೊರೊನಾ ಕಾಣಿಸಿಕೊಂಡರೂ ಇಡೀ ಏರಿಯಾವನ್ನೇ ಸೀಲ್​ಡೌನ್ ಮಾಡುತ್ತಿದ್ದಾರೆ. ಹಾಗಂತ ಕೊರೊನಾ ಕಾಣಿಸಿಕೊಂಡವರಿಗೆ ಮನೆಯಲ್ಲೇ ಕ್ವಾರಂಟೈನ್ ಆಗಲೂ ಬಿಡುತ್ತಿಲ್ಲ. ಬಲವಂತವಾಗಿ ಅವರನ್ನು ಕರೆದುಕೊಂಡು ಹೋಗಲಾಗುತ್ತಿದೆ ಎಂದು ಬಿಬಿಸಿ ವರದಿ ಮಾಡಿದೆ. ಶಾಂಘೈನಲ್ಲಿ ಒಮಿಕ್ರಾನ್​​ನಿಂದಾಗಿ ಕೊರೊನಾ ಭಯಂಕರ ಹರಡುತ್ತಿದ್ದು, ಶನಿವಾರ 40 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಚೀನಾದಲ್ಲಿ ಕೊವಿಡ್​ 19 ಮೊದಲ ಅಲೆಯ ಹೊತ್ತಲ್ಲೂ ಕಠಿಣ ನಿರ್ಬಂಧಗಳನ್ನು ವಿಧಿಸಲಾಗಿತ್ತು. ಈಗಲೂ ಕೂಡ ಲಾಕ್​ಡೌನ್ ಅತ್ಯಂತ ಬಿಗಿಯಾಗಿದೆ. ಅದರಲ್ಲೂ ಶಾಂಘೈನಲ್ಲಂತೂ ಬದುಕುವುದೇ ಕಷ್ಟವಾಗುತ್ತಿದೆ. ಹೀಗಾಗಿ ಜನರು ಸಹಜವಾಗಿಯೇ ಸೋಷಿಯಲ್ ಮೀಡಿಯಾಗಳ ಮೊರೆ ಹೋಗಿದ್ದಾರೆ. ಸ್ವಲ್ಪ ದಿನಗಳ ಹಿಂದೆ ಅಲ್ಲಿನ ನಿವಾಸಿಗಳು ಮನೆಯ ಬಾಲ್ಕನಿಗೆ ಬಂದು, ತಮ್ಮ ಕಷ್ಟವನ್ನು ಹಾಡಿನ ರೂಪದಲ್ಲಿ ಹಾಡಿದ್ದರು. ಬಳಿಕ ಸರ್ಕಾರದ ಡ್ರೋನ್​​ವೊಂದು ಹಾರಾಟ ನಡೆಸಿತ್ತು. ಹೀಗೆಲ್ಲ ವರ್ತಿಸಬೇಡಿ ಎಂಬ ಎಚ್ಚರಿಕೆಯನ್ನೂ ನೀಡಿತ್ತು.

ಇದನ್ನೂ ಓದಿ: ‘ಕೆಜಿಎಫ್​ 2’ ಮಾತ್ರವಲ್ಲ, ಅತಿ ಹೆಚ್ಚು ಕಲೆಕ್ಷನ್​ ಮಾಡಿದ ಟಾಪ್​ 10 ಸಿನಿಮಾಗಳ ಲಿಸ್ಟ್​ ಇಲ್ಲಿದೆ..

Follow Us
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ