AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಉಕ್ರೇನ್​ ಸ್ವಾತಂತ್ರ್ಯ ರಕ್ಷಿಸಿಕೊಳ್ಳಲು ಎಲ್ಲರೂ ಒಂದಾಗಿದ್ದೇವೆ; ಸೇನಾ ವಸ್ತ್ರ ಧರಿಸಿ ವಿಡಿಯೋ ಮಾಡಿದ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ

ಉಕ್ರೇನ್​​ನಲ್ಲಿ ಅಧಿಕಾರದಲ್ಲಿ ಇರುವುದು ಮಾದಕವ್ಯಸನಿ ಮತ್ತು ನವನಾಜಿಗಳ ಗುಂಪೆಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್​ ಪುತಿನ್​ ಹೀಗಳೆದಿದ್ದರು. ಅಲ್ಲದೆ, ಉಕ್ರೇನ್​​ನಲ್ಲಿರುವ ಈ ಸರ್ಕಾರವನ್ನು ಕಿತ್ತೊಗೆಯಿರಿ ಎಂದು ಸೇನೆಗೆ ಹೇಳಿದ್ದರು.  ಅದಕ್ಕೆ ಪ್ರತಿಕ್ರಿಯೆಯಾಗಿ ಉಕ್ರೇನ್​ ಅಧ್ಯಕ್ಷ ಈ ಮಾತುಗಳನ್ನಾಡಿದ್ದಾರೆ.

Video: ಉಕ್ರೇನ್​ ಸ್ವಾತಂತ್ರ್ಯ ರಕ್ಷಿಸಿಕೊಳ್ಳಲು ಎಲ್ಲರೂ ಒಂದಾಗಿದ್ದೇವೆ; ಸೇನಾ ವಸ್ತ್ರ ಧರಿಸಿ ವಿಡಿಯೋ ಮಾಡಿದ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ
ಉಕ್ರೇನ್​ ಅಧ್ಯಕ್ಷ
TV9 Web
| Edited By: |

Updated on:Feb 26, 2022 | 10:11 AM

Share

ಕೈವ್​: ರಷ್ಯಾ-ಉಕ್ರೇನ್ (Russia-Ukraine War)​ ಯುದ್ಧದಲ್ಲಿ ಸಾವು-ನೋವಿನ ಪ್ರಮಾಣ ಹೆಚ್ಚುತ್ತಿದೆ. ನಾವಂತೂ ತಲೆ ಬಾಗುವ ಪ್ರಶ್ನೆಯೇ ಇಲ್ಲವೆಂದು ಉಕ್ರೇನ್​ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelensky) ಹೇಳಿಬಿಟ್ಟಿದ್ದಾರೆ. ನಿನ್ನೆ ಬೆಳಗ್ಗೆಯೇ ಉಕ್ರೇನ್​ ರಾಜಧಾನಿ ಕೈವ್​​ಗೆ ತಲುಪಿರುವ ಅವರೂ ಸಹ ಈಗಾಗಲೇ ಮಿಲಿಟರಿ ಉಡುಪು ಧರಿಸಿ, ಕೈಯಲ್ಲಿ ರೈಪಲ್​ ಹಿಡಿದಿದ್ದಾರೆ. ಉಕ್ರೇನ್​​ನಲ್ಲಿ ದೇಶ ರಕ್ಷಣೆಗಾಗಿ ಬರೀ ಯೋಧರಷ್ಟೇ ಅಲ್ಲ, ನಾಗರಿಕರೂ ಬಂದೂಕು ಹಿಡಿದು ನಿಂತಿದ್ದಾರೆ. ಈ ಎಲ್ಲದರ ಮಧ್ಯೆ ರಷ್ಯಾ ಅಧ್ಯಕ್ಷ ಮತ್ತು ಉಕ್ರೇನ್​ ಅಧ್ಯಕ್ಷರ ನಡುವೆ ಮಾತಿನ ಚಕಮಕಿಯೂ ಮುಂದುವರಿದಿದೆ.  ಹಾಗೇ, ಶುಕ್ರವಾರ ರಾತ್ರಿ ಹೊತ್ತಿಗೆ ಕೈವ್​​ನ ಕೇಂದ್ರ ಭಾಗದಿಂದ ತಮ್ಮದೊಂದು ವಿಡಿಯೋ ಮಾಡಿರುವ ಉಕ್ರೇನ್​ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ನಾವೆಲ್ಲ ಇಲ್ಲಿದ್ದೇವೆ. ನಮ್ಮ ಸೇನೆಯೂ ಇಲ್ಲಿದೆ.  ಈ ಸಮಾಜದ ನಾಗರಿಕರೂ ನಮ್ಮೊಂದಿಗೆ ಸೇರಿದ್ದಾರೆ. ನಾವೆಲ್ಲರೂ ನಮ್ಮ ಸ್ವಾತಂತ್ರ್ಯವನ್ನು ರಕ್ಷಿಸಿಕೊಳ್ಳಲು, ನಮ್ಮ ದೇಶವನ್ನು ಕಾಪಾಡಿಕೊಳ್ಳಲು ಒಂದಾಗಿದ್ದೇವೆ ಎಂದು ಹೇಳಿದ್ದಾರೆ.  ಈ ವೇಳೆ ಅವರು ಸೇನಾ ಉಡುಪನ್ನು ಧರಿಸಿದ್ದನ್ನು ಕಾಣಬಹುದು. ಅಧ್ಯಕ್ಷರ ಭವನದ ಹೊರಗೆ ನಿಂತಿರುವ ಅವರ ಜತೆ, ಉಕ್ರೇನ್​ ಪ್ರಧಾನಮಂತ್ರಿ ಮತ್ತು ಇತರರು ಇದ್ದಾರೆ.

ಉಕ್ರೇನ್​​ನಲ್ಲಿ ಅಧಿಕಾರದಲ್ಲಿ ಇರುವುದು ಮಾದಕವ್ಯಸನಿ ಮತ್ತು ನವನಾಜಿಗಳ ಗುಂಪೆಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್​ ಪುತಿನ್​ ಹೀಗಳೆದಿದ್ದರು. ಅಲ್ಲದೆ, ಉಕ್ರೇನ್​​ನಲ್ಲಿರುವ ಈ ಸರ್ಕಾರವನ್ನು ಕಿತ್ತೊಗೆಯಿರಿ ಎಂದು ಸೇನೆಗೆ ಹೇಳಿದ್ದರು.  ಅದಕ್ಕೆ ಪ್ರತಿಕ್ರಿಯೆಯಾಗಿ ಉಕ್ರೇನ್​ ಅಧ್ಯಕ್ಷ ಈ ಮಾತುಗಳನ್ನಾಡಿದ್ದಾರೆ.  ಅದಕ್ಕೂ ಮೊದಲು ಮಾತನಾಡಿದ್ದ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ, ಉಕ್ರೇನ್​​ನಲ್ಲಿ ನಡೆಯುತ್ತಿರುವ ಘಟನೆಗಳನ್ನು ಜಗತ್ತು ದೂರದಿಂದ ಗಮನಿಸುತ್ತಿದೆ. ವಿಶ್ವದ ಅತ್ಯಂತ ಶಕ್ತಿಶಾಲಿ ರಾಷ್ಟ್ರವೂ ಕೂಡ ದೂರದಿಂದಲೇ ನೋಡುತ್ತಿದೆ ಹೊರತು ಯಾರೂ ಬರುತ್ತಿಲ್ಲ. ನಾವು ಏಕಾಂಗಿಯಾಗಿ ನಮ್ಮ ರಾಷ್ಟ್ರವನ್ನು ರಕ್ಷಿಸಿಕೊಳ್ಳುತ್ತಿದ್ದೇವೆ ಎಂದು ಹೇಳಿದ್ದರು. ಅಷ್ಟೇ ಅಲ್ಲ, ಯುಎಸ್​ ಸೇರಿ ಜಗತ್ತಿನ ಇತರ ರಾಷ್ಟ್ರಗಳು ರಷ್ಯಾದ ಮೇಲೆ ಹೇರುತ್ತಿರುವ ನಿರ್ಬಂಧಗಳ ಪ್ರಮಾಣ ಸಾಕಾಗುತ್ತಿಲ್ಲ ಎಂದಿದ್ದರು.

ಇದನ್ನೂ ಓದಿ: ಧರ್ಮಸ್ಥಳದ ಕನ್ಯಾಡಿ ಬಳಿ ದಿನೇಶ್ ಕೊಲೆ ಪ್ರಕರಣ; ಟಿವಿ9ಗೆ ಹಲ್ಲೆ ಮಾಡಿದ ಸಿಸಿಟಿವಿ ದೃಶ್ಯ ಲಭ್ಯ

Published On - 8:28 am, Sat, 26 February 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು