ರಾಷ್ಟ್ರಕ್ಕಾಗಿ ಮಾತನಾಡುವಾಗ ಎಲ್ಲರೂ ಒಂದಾಗಬೇಕು: ಅಮೆರಿಕದಲ್ಲಿ ರಾಹುಲ್ ಗಾಂಧಿಗೆ ಮೋದಿ ಟಾಂಗ್?

ಪ್ರಧಾನಿ ಮೋದಿ ಅಮೆರಿಕದ ಶಾಸಕರನ್ನುದ್ದೇಶಿಸಿ ಮಾತನಾಡಿದ್ದು, ನಾನು ಆಲೋಚನೆಗಳು ಮತ್ತು ಸಿದ್ಧಾಂತದ ಚರ್ಚೆಯನ್ನು ಅರ್ಥಮಾಡಿಕೊಳ್ಳಬಲ್ಲೆ. ಆದರೆ ನೀವು ಅಮೆರಿಕ ಮತ್ತು ಭಾರತ ನಡುವಿನ ಬಾಂಧವ್ಯವನ್ನು ಆಚರಿಸಲು ಇಂದು ಒಟ್ಟಿಗೆ ಸೇರಿರುವುದನ್ನು ನೋಡಲು ನನಗೆ ಸಂತೋಷವಾಗಿದೆ ಎಂದಿದ್ದಾರೆ.

ರಾಷ್ಟ್ರಕ್ಕಾಗಿ ಮಾತನಾಡುವಾಗ ಎಲ್ಲರೂ ಒಂದಾಗಬೇಕು: ಅಮೆರಿಕದಲ್ಲಿ ರಾಹುಲ್ ಗಾಂಧಿಗೆ ಮೋದಿ ಟಾಂಗ್?
ನರೇಂದ್ರ ಮೋದಿ
Follow us
|

Updated on: Jun 23, 2023 | 7:26 PM

ವಾಷಿಂಗ್ಟನ್: ಭಾರತದೊಂದಿಗೆ ತಮ್ಮ ದೇಶದ ಬಾಂಧವ್ಯವನ್ನು ಆಚರಿಸಲು ಒಗ್ಗೂಡಿದ ಯುಎಸ್ (US) ಕಾಂಗ್ರೆಸ್ ಸದಸ್ಯರನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಮನೆಯಲ್ಲಿ ವಿಚಾರಗಳ ಸ್ಪರ್ಧೆಯಿರಬೇಕು ಆದರೆ ರಾಷ್ಟ್ರಕ್ಕಾಗಿ ಮಾತನಾಡುವಾಗ ಜನರು ಕೂಡ ಒಂದಾಗಬೇಕು ಎಂದು ಹೇಳಿದ್ದಾರೆ. ಗುರುವಾರದಂದು ಅಮೆರಿಕ ಕಾಂಗ್ರೆಸ್‌ನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಪ್ರಧಾನಿ ಮೋದಿಯವರು ಮಾಡಿದ ಹೇಳಿಕೆಗಳು ರಾಹುಲ್ ಗಾಂಧಿಗೆ (Rahul Gandhi) ಟಾಂಗ್ ನೀಡಿದಂತಿದೆ. ರಾಹುಲ್ ತಮ್ಮ ವಿದೇಶ ಪ್ರವಾಸಗಳ ಸಂದರ್ಭದಲ್ಲಿ ಕೇಂದ್ರ ಸರ್ಕಾರವನ್ನು ಆಗಾಗ ಟೀಕಿಸುತ್ತಲೇ ಇರುತ್ತಾರೆ. ಹಾಗಾಗಿ ಪ್ರಧಾನಿಯವರ ಮಾತುಗಳು ಕಾಂಗ್ರೆಸ್ ನಾಯಕನ ಮೇಲಿನ ದಾಳಿ ಎಂದು ಗ್ರಹಿಸಲಾಗಿದೆ.

ಪ್ರಧಾನಿ ಮೋದಿ ಅಮೆರಿಕದ ಶಾಸಕರನ್ನುದ್ದೇಶಿಸಿ ಮಾತನಾಡಿದ್ದು, ನಾನು ಆಲೋಚನೆಗಳು ಮತ್ತು ಸಿದ್ಧಾಂತದ ಚರ್ಚೆಯನ್ನು ಅರ್ಥಮಾಡಿಕೊಳ್ಳಬಲ್ಲೆ. ಆದರೆ ನೀವು ಅಮೆರಿಕ ಮತ್ತು ಭಾರತ ನಡುವಿನ ಬಾಂಧವ್ಯವನ್ನು ಆಚರಿಸಲು ಇಂದು ಒಟ್ಟಿಗೆ ಸೇರಿರುವುದನ್ನು ನೋಡಲು ನನಗೆ ಸಂತೋಷವಾಗಿದೆ.

ನಿಮಗೆ ಬಲವಾದ ಉಭಯಪಕ್ಷೀಯ ಒಮ್ಮತದ ಅಗತ್ಯವಿರುವಾಗ ಸಹಾಯ ಮಾಡಲು ನಾನು ಸಂತೋಷಪಡುತ್ತೇನೆ. ಮನೆಯಲ್ಲಿ ವಿಚಾರಗಳ ಸ್ಪರ್ಧೆ ಇರುತ್ತದೆ, ಮತ್ತು ಇರಬೇಕು. ಆದರೆ, ನಾವು ನಮ್ಮ ರಾಷ್ಟ್ರಕ್ಕಾಗಿ ಮಾತನಾಡುವಾಗ ನಾವು ಕೂಡ ಒಂದಾಗಬೇಕು. ನೀವು ಅದನ್ನು ಮಾಡಬಲ್ಲಿರಿ ಎಂದು ತೋರಿಸಿದ್ದೀರಿ, ಅಭಿನಂದನೆಗಳು ಎಂದಿದ್ದಾರೆ.

ಯುಎಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಸ್ಪೀಕರ್ ಕೆವಿನ್ ಮೆಕಾರ್ಥಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ನಾನು ಪ್ರಜಾಪ್ರಭುತ್ವದ ಪ್ರಜೆಯಾಗಿ, ನಾನು ಒಂದು ವಿಷಯವನ್ನು ಒಪ್ಪಿಕೊಳ್ಳಬಲ್ಲೆ ಮಿಸ್ಟರ್ ಸ್ಪೀಕರ್ ನಿಮ್ಮದು ಕಷ್ಟದ ಕೆಲಸ. ಉತ್ಸಾಹ, ಮನವೊಲಿಕೆ ಮತ್ತು ನೀತಿಯ ಯುದ್ಧಳ ಬಗ್ಗೆ ಬಲ್ಲೆ ಎಂದಿದ್ದಾರೆ ಮೋದಿ.

ಇದನ್ನೂ ಓದಿ: PM Modi US Visit: ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಅಮೆರಿಕದ ಪ್ರತಿನಿಧಿಗಳು ಖುಷಿ ಹಂಚಿಕೊಂಡಿದ್ದು ಹೀಗೆ

ರಾಹುಲ್ ಗಾಂಧಿ ಇತ್ತೀಚೆಗೆ ಅಮೆರಿಕ ಪ್ರವಾಸ ನಡೆಸಿದಾಗ ಮೋದಿ ಸರ್ಕಾರ ಸಮಸ್ಯೆಗಳನ್ನು ನಿಭಾಯಿಸುತ್ತಿದ್ದ ರೀತಿಯನ್ನು ಟೀಕಿಸಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ