AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಕ್ಕಾಗಿ ಮಾತನಾಡುವಾಗ ಎಲ್ಲರೂ ಒಂದಾಗಬೇಕು: ಅಮೆರಿಕದಲ್ಲಿ ರಾಹುಲ್ ಗಾಂಧಿಗೆ ಮೋದಿ ಟಾಂಗ್?

ಪ್ರಧಾನಿ ಮೋದಿ ಅಮೆರಿಕದ ಶಾಸಕರನ್ನುದ್ದೇಶಿಸಿ ಮಾತನಾಡಿದ್ದು, ನಾನು ಆಲೋಚನೆಗಳು ಮತ್ತು ಸಿದ್ಧಾಂತದ ಚರ್ಚೆಯನ್ನು ಅರ್ಥಮಾಡಿಕೊಳ್ಳಬಲ್ಲೆ. ಆದರೆ ನೀವು ಅಮೆರಿಕ ಮತ್ತು ಭಾರತ ನಡುವಿನ ಬಾಂಧವ್ಯವನ್ನು ಆಚರಿಸಲು ಇಂದು ಒಟ್ಟಿಗೆ ಸೇರಿರುವುದನ್ನು ನೋಡಲು ನನಗೆ ಸಂತೋಷವಾಗಿದೆ ಎಂದಿದ್ದಾರೆ.

ರಾಷ್ಟ್ರಕ್ಕಾಗಿ ಮಾತನಾಡುವಾಗ ಎಲ್ಲರೂ ಒಂದಾಗಬೇಕು: ಅಮೆರಿಕದಲ್ಲಿ ರಾಹುಲ್ ಗಾಂಧಿಗೆ ಮೋದಿ ಟಾಂಗ್?
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
|

Updated on: Jun 23, 2023 | 7:26 PM

Share

ವಾಷಿಂಗ್ಟನ್: ಭಾರತದೊಂದಿಗೆ ತಮ್ಮ ದೇಶದ ಬಾಂಧವ್ಯವನ್ನು ಆಚರಿಸಲು ಒಗ್ಗೂಡಿದ ಯುಎಸ್ (US) ಕಾಂಗ್ರೆಸ್ ಸದಸ್ಯರನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಮನೆಯಲ್ಲಿ ವಿಚಾರಗಳ ಸ್ಪರ್ಧೆಯಿರಬೇಕು ಆದರೆ ರಾಷ್ಟ್ರಕ್ಕಾಗಿ ಮಾತನಾಡುವಾಗ ಜನರು ಕೂಡ ಒಂದಾಗಬೇಕು ಎಂದು ಹೇಳಿದ್ದಾರೆ. ಗುರುವಾರದಂದು ಅಮೆರಿಕ ಕಾಂಗ್ರೆಸ್‌ನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಪ್ರಧಾನಿ ಮೋದಿಯವರು ಮಾಡಿದ ಹೇಳಿಕೆಗಳು ರಾಹುಲ್ ಗಾಂಧಿಗೆ (Rahul Gandhi) ಟಾಂಗ್ ನೀಡಿದಂತಿದೆ. ರಾಹುಲ್ ತಮ್ಮ ವಿದೇಶ ಪ್ರವಾಸಗಳ ಸಂದರ್ಭದಲ್ಲಿ ಕೇಂದ್ರ ಸರ್ಕಾರವನ್ನು ಆಗಾಗ ಟೀಕಿಸುತ್ತಲೇ ಇರುತ್ತಾರೆ. ಹಾಗಾಗಿ ಪ್ರಧಾನಿಯವರ ಮಾತುಗಳು ಕಾಂಗ್ರೆಸ್ ನಾಯಕನ ಮೇಲಿನ ದಾಳಿ ಎಂದು ಗ್ರಹಿಸಲಾಗಿದೆ.

ಪ್ರಧಾನಿ ಮೋದಿ ಅಮೆರಿಕದ ಶಾಸಕರನ್ನುದ್ದೇಶಿಸಿ ಮಾತನಾಡಿದ್ದು, ನಾನು ಆಲೋಚನೆಗಳು ಮತ್ತು ಸಿದ್ಧಾಂತದ ಚರ್ಚೆಯನ್ನು ಅರ್ಥಮಾಡಿಕೊಳ್ಳಬಲ್ಲೆ. ಆದರೆ ನೀವು ಅಮೆರಿಕ ಮತ್ತು ಭಾರತ ನಡುವಿನ ಬಾಂಧವ್ಯವನ್ನು ಆಚರಿಸಲು ಇಂದು ಒಟ್ಟಿಗೆ ಸೇರಿರುವುದನ್ನು ನೋಡಲು ನನಗೆ ಸಂತೋಷವಾಗಿದೆ.

ನಿಮಗೆ ಬಲವಾದ ಉಭಯಪಕ್ಷೀಯ ಒಮ್ಮತದ ಅಗತ್ಯವಿರುವಾಗ ಸಹಾಯ ಮಾಡಲು ನಾನು ಸಂತೋಷಪಡುತ್ತೇನೆ. ಮನೆಯಲ್ಲಿ ವಿಚಾರಗಳ ಸ್ಪರ್ಧೆ ಇರುತ್ತದೆ, ಮತ್ತು ಇರಬೇಕು. ಆದರೆ, ನಾವು ನಮ್ಮ ರಾಷ್ಟ್ರಕ್ಕಾಗಿ ಮಾತನಾಡುವಾಗ ನಾವು ಕೂಡ ಒಂದಾಗಬೇಕು. ನೀವು ಅದನ್ನು ಮಾಡಬಲ್ಲಿರಿ ಎಂದು ತೋರಿಸಿದ್ದೀರಿ, ಅಭಿನಂದನೆಗಳು ಎಂದಿದ್ದಾರೆ.

ಯುಎಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಸ್ಪೀಕರ್ ಕೆವಿನ್ ಮೆಕಾರ್ಥಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ನಾನು ಪ್ರಜಾಪ್ರಭುತ್ವದ ಪ್ರಜೆಯಾಗಿ, ನಾನು ಒಂದು ವಿಷಯವನ್ನು ಒಪ್ಪಿಕೊಳ್ಳಬಲ್ಲೆ ಮಿಸ್ಟರ್ ಸ್ಪೀಕರ್ ನಿಮ್ಮದು ಕಷ್ಟದ ಕೆಲಸ. ಉತ್ಸಾಹ, ಮನವೊಲಿಕೆ ಮತ್ತು ನೀತಿಯ ಯುದ್ಧಳ ಬಗ್ಗೆ ಬಲ್ಲೆ ಎಂದಿದ್ದಾರೆ ಮೋದಿ.

ಇದನ್ನೂ ಓದಿ: PM Modi US Visit: ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಅಮೆರಿಕದ ಪ್ರತಿನಿಧಿಗಳು ಖುಷಿ ಹಂಚಿಕೊಂಡಿದ್ದು ಹೀಗೆ

ರಾಹುಲ್ ಗಾಂಧಿ ಇತ್ತೀಚೆಗೆ ಅಮೆರಿಕ ಪ್ರವಾಸ ನಡೆಸಿದಾಗ ಮೋದಿ ಸರ್ಕಾರ ಸಮಸ್ಯೆಗಳನ್ನು ನಿಭಾಯಿಸುತ್ತಿದ್ದ ರೀತಿಯನ್ನು ಟೀಕಿಸಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು