AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಕ್ಕಾಗಿ ಮಾತನಾಡುವಾಗ ಎಲ್ಲರೂ ಒಂದಾಗಬೇಕು: ಅಮೆರಿಕದಲ್ಲಿ ರಾಹುಲ್ ಗಾಂಧಿಗೆ ಮೋದಿ ಟಾಂಗ್?

ಪ್ರಧಾನಿ ಮೋದಿ ಅಮೆರಿಕದ ಶಾಸಕರನ್ನುದ್ದೇಶಿಸಿ ಮಾತನಾಡಿದ್ದು, ನಾನು ಆಲೋಚನೆಗಳು ಮತ್ತು ಸಿದ್ಧಾಂತದ ಚರ್ಚೆಯನ್ನು ಅರ್ಥಮಾಡಿಕೊಳ್ಳಬಲ್ಲೆ. ಆದರೆ ನೀವು ಅಮೆರಿಕ ಮತ್ತು ಭಾರತ ನಡುವಿನ ಬಾಂಧವ್ಯವನ್ನು ಆಚರಿಸಲು ಇಂದು ಒಟ್ಟಿಗೆ ಸೇರಿರುವುದನ್ನು ನೋಡಲು ನನಗೆ ಸಂತೋಷವಾಗಿದೆ ಎಂದಿದ್ದಾರೆ.

ರಾಷ್ಟ್ರಕ್ಕಾಗಿ ಮಾತನಾಡುವಾಗ ಎಲ್ಲರೂ ಒಂದಾಗಬೇಕು: ಅಮೆರಿಕದಲ್ಲಿ ರಾಹುಲ್ ಗಾಂಧಿಗೆ ಮೋದಿ ಟಾಂಗ್?
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jun 23, 2023 | 7:26 PM

Share

ವಾಷಿಂಗ್ಟನ್: ಭಾರತದೊಂದಿಗೆ ತಮ್ಮ ದೇಶದ ಬಾಂಧವ್ಯವನ್ನು ಆಚರಿಸಲು ಒಗ್ಗೂಡಿದ ಯುಎಸ್ (US) ಕಾಂಗ್ರೆಸ್ ಸದಸ್ಯರನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಮನೆಯಲ್ಲಿ ವಿಚಾರಗಳ ಸ್ಪರ್ಧೆಯಿರಬೇಕು ಆದರೆ ರಾಷ್ಟ್ರಕ್ಕಾಗಿ ಮಾತನಾಡುವಾಗ ಜನರು ಕೂಡ ಒಂದಾಗಬೇಕು ಎಂದು ಹೇಳಿದ್ದಾರೆ. ಗುರುವಾರದಂದು ಅಮೆರಿಕ ಕಾಂಗ್ರೆಸ್‌ನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಪ್ರಧಾನಿ ಮೋದಿಯವರು ಮಾಡಿದ ಹೇಳಿಕೆಗಳು ರಾಹುಲ್ ಗಾಂಧಿಗೆ (Rahul Gandhi) ಟಾಂಗ್ ನೀಡಿದಂತಿದೆ. ರಾಹುಲ್ ತಮ್ಮ ವಿದೇಶ ಪ್ರವಾಸಗಳ ಸಂದರ್ಭದಲ್ಲಿ ಕೇಂದ್ರ ಸರ್ಕಾರವನ್ನು ಆಗಾಗ ಟೀಕಿಸುತ್ತಲೇ ಇರುತ್ತಾರೆ. ಹಾಗಾಗಿ ಪ್ರಧಾನಿಯವರ ಮಾತುಗಳು ಕಾಂಗ್ರೆಸ್ ನಾಯಕನ ಮೇಲಿನ ದಾಳಿ ಎಂದು ಗ್ರಹಿಸಲಾಗಿದೆ.

ಪ್ರಧಾನಿ ಮೋದಿ ಅಮೆರಿಕದ ಶಾಸಕರನ್ನುದ್ದೇಶಿಸಿ ಮಾತನಾಡಿದ್ದು, ನಾನು ಆಲೋಚನೆಗಳು ಮತ್ತು ಸಿದ್ಧಾಂತದ ಚರ್ಚೆಯನ್ನು ಅರ್ಥಮಾಡಿಕೊಳ್ಳಬಲ್ಲೆ. ಆದರೆ ನೀವು ಅಮೆರಿಕ ಮತ್ತು ಭಾರತ ನಡುವಿನ ಬಾಂಧವ್ಯವನ್ನು ಆಚರಿಸಲು ಇಂದು ಒಟ್ಟಿಗೆ ಸೇರಿರುವುದನ್ನು ನೋಡಲು ನನಗೆ ಸಂತೋಷವಾಗಿದೆ.

ನಿಮಗೆ ಬಲವಾದ ಉಭಯಪಕ್ಷೀಯ ಒಮ್ಮತದ ಅಗತ್ಯವಿರುವಾಗ ಸಹಾಯ ಮಾಡಲು ನಾನು ಸಂತೋಷಪಡುತ್ತೇನೆ. ಮನೆಯಲ್ಲಿ ವಿಚಾರಗಳ ಸ್ಪರ್ಧೆ ಇರುತ್ತದೆ, ಮತ್ತು ಇರಬೇಕು. ಆದರೆ, ನಾವು ನಮ್ಮ ರಾಷ್ಟ್ರಕ್ಕಾಗಿ ಮಾತನಾಡುವಾಗ ನಾವು ಕೂಡ ಒಂದಾಗಬೇಕು. ನೀವು ಅದನ್ನು ಮಾಡಬಲ್ಲಿರಿ ಎಂದು ತೋರಿಸಿದ್ದೀರಿ, ಅಭಿನಂದನೆಗಳು ಎಂದಿದ್ದಾರೆ.

ಯುಎಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಸ್ಪೀಕರ್ ಕೆವಿನ್ ಮೆಕಾರ್ಥಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ನಾನು ಪ್ರಜಾಪ್ರಭುತ್ವದ ಪ್ರಜೆಯಾಗಿ, ನಾನು ಒಂದು ವಿಷಯವನ್ನು ಒಪ್ಪಿಕೊಳ್ಳಬಲ್ಲೆ ಮಿಸ್ಟರ್ ಸ್ಪೀಕರ್ ನಿಮ್ಮದು ಕಷ್ಟದ ಕೆಲಸ. ಉತ್ಸಾಹ, ಮನವೊಲಿಕೆ ಮತ್ತು ನೀತಿಯ ಯುದ್ಧಳ ಬಗ್ಗೆ ಬಲ್ಲೆ ಎಂದಿದ್ದಾರೆ ಮೋದಿ.

ಇದನ್ನೂ ಓದಿ: PM Modi US Visit: ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಅಮೆರಿಕದ ಪ್ರತಿನಿಧಿಗಳು ಖುಷಿ ಹಂಚಿಕೊಂಡಿದ್ದು ಹೀಗೆ

ರಾಹುಲ್ ಗಾಂಧಿ ಇತ್ತೀಚೆಗೆ ಅಮೆರಿಕ ಪ್ರವಾಸ ನಡೆಸಿದಾಗ ಮೋದಿ ಸರ್ಕಾರ ಸಮಸ್ಯೆಗಳನ್ನು ನಿಭಾಯಿಸುತ್ತಿದ್ದ ರೀತಿಯನ್ನು ಟೀಕಿಸಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು