AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾವು ಯುದ್ಧಗಳಿಂದ ಯುದ್ಧದ ಅಂತ್ಯದತ್ತ ಸಾಗಬೇಕಿದೆ’; ರಷ್ಯಾ ಅಧ್ಯಕ್ಷ ಪುಟಿನ್‌ಗೆ ಪ್ರಧಾನಿ ಮೋದಿ ಸಂದೇಶ

ಕಿರ್ಗಿಸ್ತಾನ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯ (SCO) ನಡುವೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಪುಟಿನ್ ಜೊತೆ ಬಹಳ ಉತ್ತಮ ಬಾಂಧವ್ಯ ಹೊಂದಿರುವ ಪ್ರಧಾನಿ ಮೋದಿ ಪುಟಿನ್ ಅವರನ್ನು ಅಪ್ಪಿಕೊಳ್ಳುವ ಮೂಲಕ ತಮ್ಮ ಆತ್ಮೀಯತೆಯನ್ನು ತೋರಿಸಿದರು. ಈ ವೇಳೆ ಅವರು ನಿರಂತರ ಯುದ್ಧದಿಂದ ಯುದ್ಧದ ಅಂತ್ಯದತ್ತ ಸಾಗುವ ಅಗತ್ಯವನ್ನು ಒತ್ತಿ ಹೇಳಿದರು. ಅಮೆರಿಕ-ಇರಾನ್ ಯುದ್ಧ ಹಾಗೂ ರಷ್ಯಾ-ಉಕ್ರೇನ್ ಸಂಘರ್ಷಗಳು ಜಾಗತಿಕವಾಗಿ ಸವಾಲೊಡ್ಡುತ್ತಿರುವ ಈ ಸಮಯದಲ್ಲಿ ಪ್ರಧಾನಿ ಮೋದಿಯವರ ಈ ಶಾಂತಿ ಸಂದೇಶ ಹೊರಬಿದ್ದಿದೆ.

'ನಾವು ಯುದ್ಧಗಳಿಂದ ಯುದ್ಧದ ಅಂತ್ಯದತ್ತ ಸಾಗಬೇಕಿದೆ'; ರಷ್ಯಾ ಅಧ್ಯಕ್ಷ ಪುಟಿನ್‌ಗೆ ಪ್ರಧಾನಿ ಮೋದಿ ಸಂದೇಶ
Pm Modi Meets PutinImage Credit source: AP
ಸುಷ್ಮಾ ಚಕ್ರೆ
|

Updated on:Aug 31, 2026 | 9:12 PM

Share

ನವದೆಹಲಿ, ಆಗಸ್ಟ್ 31: ಕಿರ್ಗಿಸ್ತಾನ್‌ನ ಬಿಷ್ಕೆಕ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯ ನಡುವೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ಮಹತ್ವದ ದ್ವಿಪಕ್ಷೀಯ ಸಭೆ ನಡೆಸಿದರು. ಪ್ರಮುಖ ಜಿಯೋಪಾಲಿಟಿಕಲ್ ವಿದ್ಯಮಾನಗಳು ಮತ್ತು ಜಾಗತಿಕ ಇಂಧನ ಅಭದ್ರತೆಯ ನಡುವೆ ಈ ಭೇಟಿ ನಡೆದಿದೆ. ಈ ಸಭೆಯ ಆರಂಭದಲ್ಲಿ ಮೋದಿ ಮತ್ತು ಪುಟಿನ್ ಪರಸ್ಪರ ಆಲಿಂಗನ ಮಾಡಿಕೊಂಡು ಸುದೀರ್ಘ ಚರ್ಚೆಗೆ ಚಾಲನೆ ನೀಡಿದರು.

“ನಾವು ಉಕ್ರೇನ್ ವಿಷಯವನ್ನು ಸತತವಾಗಿ ಚರ್ಚಿಸುತ್ತಾ ಬಂದಿದ್ದೇವೆ. ಈ ಹಿಂದೆ ನಾವು ಭೇಟಿಯಾದಾಗ, ನೀವು ಈ ವಿಷಯದ ಎಲ್ಲಾ ಮಗ್ಗುಲುಗಳ ಬಗ್ಗೆ ನನಗೆ ವಿವರವಾಗಿ ತಿಳಿಸಿದ್ದಿರಿ. ನಿಮಗೆ ತಿಳಿದಿರುವಂತೆ, ಭಾರತವು ಶಾಂತಿಯತ್ತ ಕೈಗೊಳ್ಳುವ ಎಲ್ಲಾ ಪ್ರಯತ್ನಗಳನ್ನು ಬೆಂಬಲಿಸುತ್ತದೆ ಮತ್ತು ಮುಂದೆಯೂ ಬೆಂಬಲಿಸಲಿದೆ. ಯುದ್ಧದಲ್ಲಿ ಕಳೆಯುವ ಪ್ರತಿಯೊಂದು ದಿನವೂ ಮಾನವೀಯತೆಯನ್ನು ತುಳಿದುಹಾಕುತ್ತದೆ. ಆದರೆ ಶಾಂತಿಯತ್ತ ಇಡುವ ಪ್ರತಿಯೊಂದು ಹೆಜ್ಜೆಯೂ ಮಾನವೀಯತೆಯಲ್ಲಿ ಹೊಸ ಭರವಸೆ ಮತ್ತು ಉತ್ಸಾಹವನ್ನು ತುಂಬುತ್ತದೆ. ನಾವು ನಿರಂತರ ಯುದ್ಧಗಳಿಂದ ಯುದ್ಧದ ಅಂತ್ಯದತ್ತ ಸಾಗಬೇಕು” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: PM Modi Kyrgystan Visit: ಕಿರ್ಗಿಸ್ತಾನದಲ್ಲಿ ಇರಾನ್ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಿ ಮೋದಿ; ಹಾರ್ಮುಜ್ ಜಲಸಂಧಿಯ ಭದ್ರತೆ ಬಗ್ಗೆ ಚರ್ಚೆ

“ಎಲ್ಲಾ ಸಮಸ್ಯೆಗಳಿಗೆ ಆದಷ್ಟು ಬೇಗ ಶಾಂತಿಯುತ ಪರಿಹಾರ ಕಂಡುಕೊಳ್ಳುವುದೇ ಮಾನವೀಯತೆಯ ಕರೆಯನ್ನು ಧ್ವನಿಸುತ್ತದೆ ಮತ್ತು ಇದೇ ಭಾರತದ ಸಂದೇಶವಾಗಿದೆ. ಗಾಂಧಿ ಮತ್ತು ಬುದ್ಧನ ಭೂಮಿ ಒಂದೇ ಸಂದೇಶವನ್ನು ಹಂಚಿಕೊಳ್ಳುತ್ತದೆ… ಅದೇ ಶಾಂತಿಯ ಮಾರ್ಗ. ಇಂದು, ನಾನು ಈ ವಿಷಯಗಳನ್ನೇ ನಿಮ್ಮೊಂದಿಗೆ ಚರ್ಚಿಸಲು ನಿರೀಕ್ಷಿಸುತ್ತಿದ್ದೇನೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಹಾಗೇ, ಭಾರತ ಮತ್ತು ರಷ್ಯಾ ಎರಡೂ ದೇಶಗಳಿಗೆ ರಾಷ್ಟ್ರೀಯ ಹಿತಾಸಕ್ತಿಯೇ ಮೊದಲ ಆದ್ಯತೆಯಾಗಿ ಉಳಿದಿದೆ ಎಂದೂ ಕೂಡ ಪ್ರಧಾನಿ ಮೋದಿ ಹೇಳಿದ್ದಾರೆ.

ಪುಟಿನ್ ಕುರಿತು ಮೋದಿ ಮೆಚ್ಚುಗೆ:

“ರಷ್ಯಾದ ಅಧ್ಯಕ್ಷ ಪುಟಿನ್ ಅವರನ್ನು ಭೇಟಿಯಾಗಿ ನನಗೆ ತುಂಬಾ ಸಂತೋಷವಾಗಿದೆ. ಕಳೆದ ವರ್ಷ ಪುಟಿನ್ ಅವರ ಭಾರತ ಭೇಟಿ ಅತ್ಯಂತ ಯಶಸ್ವಿಯಾಗಿತ್ತು. ನಮ್ಮ ಆರ್ಥಿಕ ಸಂಬಂಧಗಳಿಗೆ ಮತ್ತಷ್ಟು ಬಲ ಬಂದಿದೆ. ಇನ್ನು ಕೆಲವೇ ದಿನಗಳಲ್ಲಿ ಭಾರತವು ಬ್ರಿಕ್ಸ್ (BRICS) ಶೃಂಗಸಭೆಯನ್ನು ಆಯೋಜಿಸುತ್ತಿದ್ದು, ಎಲ್ಲಾ ಭಾರತೀಯರು ನಿಮ್ಮನ್ನು ಮತ್ತು ನಿಮ್ಮ ನಿಯೋಗವನ್ನು ಸ್ವಾಗತಿಸಲು ಕಾತರರಾಗಿದ್ದಾರೆ. ನಿಮ್ಮ ಈ ಭೇಟಿಯು ನಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸಲಿದೆ ಮತ್ತು ಬ್ರಿಕ್ಸ್ ಚೌಕಟ್ಟಿನೊಳಗಿನ ಮಾತುಕತೆ ಹಾಗೂ ಸಹಕಾರವನ್ನು ಮತ್ತಷ್ಟು ವೃದ್ಧಿಸಲಿದೆ” ಎಂದು ಮೋದಿ ಹೇಳಿದ್ದಾರೆ.

ಪುಟಿನ್ ಹೇಳಿದ್ದೇನು?:

ರಷ್ಯಾ ಮತ್ತು ಭಾರತದ ನಡುವಿನ ವ್ಯಾಪಾರ ಹಾಗೂ ಆರ್ಥಿಕ ಸಹಕಾರವು ಸಕಾರಾತ್ಮಕ ಹಾದಿಯಲ್ಲಿದ್ದು, ದ್ವಿಪಕ್ಷೀಯ ವ್ಯಾಪಾರ ವಹಿವಾಟು ಶೇ. 2ಕ್ಕಿಂತ ಹೆಚ್ಚಾಗಿದೆ ಎಂದು ಪುಟಿನ್ ಹೇಳಿದ್ದಾರೆ. ಭಾರತ ಮತ್ತು ರಷ್ಯಾದ ಸಂಬಂಧಗಳು ನಿರಂತರವಾಗಿ ಬಲಗೊಳ್ಳುತ್ತಿದ್ದು, ಇದಕ್ಕೆ ಪ್ರಧಾನಿ ಮೋದಿಯವರ ವೈಯಕ್ತಿಕ ಗಮನವೇ ಪ್ರಮುಖ ಕಾರಣ ಎಂದು ಪುಟಿನ್ ಹೇಳಿದ್ದಾರೆ.

ಇದನ್ನೂ ಓದಿ: ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಹಿಂದಿ ಕವಿತೆ ಕೇಳಿ ಭಾವುಕರಾದ ಪ್ರಧಾನಿ ಮೋದಿ

ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಮಧ್ಯಪ್ರಾಚ್ಯದಿಂದ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಜಾಗತಿಕ ತೈಲ ಮಾರುಕಟ್ಟೆಗಳ ಮೇಲೆ ತೀವ್ರ ಒತ್ತಡ ಬಿದ್ದಿದೆ. ಈ ಸಂದರ್ಭದಲ್ಲಿ ಮೋದಿ-ಪುಟಿನ್ ಸಭೆಯು ಹೆಚ್ಚಿನ ಪ್ರಾಮುಖ್ಯತೆ ಪಡೆದುಕೊಂಡಿದೆ. ಭಾರತಕ್ಕೆ ಮಧ್ಯಪ್ರಾಚ್ಯದ ವಿದ್ಯಮಾನಗಳು ಇಂಧನ ಭದ್ರತೆಯ ಕಳವಳವನ್ನು ಹೆಚ್ಚಿಸಿವೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 9:00 pm, Mon, 31 August 26

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ