AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್​​ ಧರಿಸುವುದು ಕಡ್ಡಾಯವಲ್ಲ; ಅಚ್ಚರಿಯ ನಿಲುವು ತಳೆದ ಇಸ್ರೇಲ್​ ದೇಶ

ಇಸ್ರೇಲ್​ನಲ್ಲಿ ಕೊರೊನಾ ಸೋಂಕಿತರ ಮರಣ ಪ್ರಮಾಣವೂ ಕಡಿಮೆಯಾಗಿದ್ದು, ಸೋಂಕು ಹಬ್ಬುವಿಕೆಗೂ ಕಡಿವಾಣ ಬಿದ್ದಿದೆ. ದೇಶದಲ್ಲಿರುವ ಒಟ್ಟು ಅರ್ಧದಷ್ಟು ಜನರಿಗೆ ಕೊರೊನಾ ಲಸಿಕೆ ನೀಡಲಾಗಿರುವ ಬೆನ್ನಲ್ಲೇ ಸಾರ್ವಜನಿಕ ಸ್ಥಳಗಳಲ್ಲಿ ಇನ್ನುಮುಂದೆ ಮಾಸ್ಕ್ ಧರಿಸುವುದು ಕಡ್ಡಾಯವಲ್ಲ ಎಂಬ ಅಚ್ಚರಿಯ ನಿರ್ಧಾರವನ್ನು ಇಸ್ರೇಲ್​ ಸರ್ಕಾರ ತಳೆದಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್​​ ಧರಿಸುವುದು ಕಡ್ಡಾಯವಲ್ಲ; ಅಚ್ಚರಿಯ ನಿಲುವು ತಳೆದ ಇಸ್ರೇಲ್​ ದೇಶ
ಸಂಗ್ರಹ ಚಿತ್ರ
Skanda
| Updated By: preethi shettigar|

Updated on: Apr 19, 2021 | 11:10 AM

Share

ಭಾರತದಲ್ಲಿ ಕೊರೊನಾ ವೈರಾಣು ಎರಡನೇ ಅಲೆಯ ಮೂಲಕ ಜನಜೀವನವನ್ನು ಸಂಕಷ್ಟಕ್ಕೆ ನೂಕಿದೆ. ಸೋಂಕು ನಿಯಂತ್ರಿಸಲು ವಿವಿಧ ಕಠಿಣ ಕ್ರಮಗಳಿಗೆ ಮುಂದಾಗಿರುವ ಸರ್ಕಾರ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ಇನ್ನಿತರ ಕೊರೊನಾ ನಿಯಮಾವಳಿಗಳನ್ನು ಪಾಲಿಸುವುದಕ್ಕೆ ಅತಿಹೆಚ್ಚು ಪ್ರಾಮುಖ್ಯತೆ ನೀಡುತ್ತಿದೆ. ಏತನ್ಮಧ್ಯೆ ಜಾಗತಿಕ ಮಟ್ಟದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 30 ಲಕ್ಷದ ಗಡಿ ದಾಟಿದೆ. ಆದರೆ, ಇದೇ ಸಂದರ್ಭದಲ್ಲಿ ಇಸ್ರೇಲ್ ದೇಶ ಮಾತ್ರ ಸಾರ್ವಜನಿಕ ಸ್ಥಳಗಳಲ್ಲಿ ಇನ್ನುಮುಂದೆ ಮಾಸ್ಕ್ ಧರಿಸುವುದು ಕಡ್ಡಾಯವಲ್ಲ ಎಂಬ ಅಚ್ಚರಿಯ ನಿರ್ಧಾರ ತಳೆದಿದೆ. ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದ್ದಂತೆಯೇ ಇಸ್ರೇಲ್​ನ ಆರೋಗ್ಯ ಸಚಿವ ಪ್ರೊ.ಹೇಜಿ ಲೇವಿ ಹೊಸ ಸುತ್ತೋಲೆ ಹೊರಡಿಸಿದ್ದು, ಇನ್ನುಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಅಲ್ಲ ಎಂದು ತಿಳಿಸಿದ್ದಾರೆ.

ಇಸ್ರೇಲ್​ನಲ್ಲಿ ಕೊರೊನಾ ಸೋಂಕಿತರ ಮರಣ ಪ್ರಮಾಣವೂ ಕಡಿಮೆಯಾಗಿದ್ದು, ಸೋಂಕು ಹಬ್ಬುವಿಕೆಗೂ ಕಡಿವಾಣ ಬಿದ್ದಿದೆ. ಈಗಾಗಲೇ ಇಸ್ರೇಲ್​ ದೇಶದಲ್ಲಿರುವ ಒಟ್ಟು ಅರ್ಧದಷ್ಟು ಜನರಿಗೆ ಕೊರೊನಾ ಲಸಿಕೆ ನೀಡಲಾಗಿದ್ದು, ಜಗತ್ತಿನಲ್ಲಿ ಅತಿ ವೇಗವಾಗಿ ಕೊರೊನಾ ಲಸಿಕೆ ವಿತರಿಸುತ್ತಿರುವ ದೇಶ ಎಂಬ ಹಿರಿಮೆಗೂ ಅದು ಪಾತ್ರವಾಗಿದೆ. ಇದರ ನಡುವಿನಲ್ಲೇ ಹೊರಾಂಗಣ ಪ್ರದೇಶಗಳಲ್ಲಿ ಮಾಸ್ಕ್​ ಕಡ್ಡಾಯ ಅಲ್ಲ ಎಂಬ ನಿಲುವನ್ನು ತಳೆದಿರುವುದರಿಂದ ಕೊರೊನಾ ಮಣಿಸುವಲ್ಲಿ ಇಸ್ರೇಲ್ ಅತ್ಯಂತ ಆತ್ಮವಿಶ್ವಾಸದಿಂದ ಹೆಜ್ಜೆ ಇರಿಸಿದಂತಾಗಿದೆ.

ಇಸ್ರೇಲ್​ ದೇಶದಲ್ಲಿ ಕೊರೊನಾ ಲಸಿಕೆ ವಿತರಣೆಗೆ ಆದ್ಯತೆ ನೀಡಿದ ಕಾರಣ ಹೆಚ್ಚಿನ ಜನರಲ್ಲಿ ಕೊರೊನಾ ವಿರುದ್ಧದ ರೋಗ ನಿರೋಧಕ ಶಕ್ತಿ ಉತ್ಪತ್ತಿಯಾಗಿದೆ. ಜತೆಗೆ ಈಗಾಗಲೇ ಹರ್ಡ್​ ಇಮ್ಯೂನಿಟಿ ಸಹ ಅಭಿವೃದ್ಧಿ ಆಗಿರುವ ಸಾಧ್ಯತೆ ಇದೆ ಎಂದು ಕೆಲ ವರದಿಗಳು ತಿಳಿಸಿವೆ. ಈ ಹಿಂದೆ ದಿನಕ್ಕೆ ಸುಮಾರು 10 ಸಾವಿರದ ಆಸುಪಾಸಿನಲ್ಲಿ ದಾಖಲಾಗುತ್ತಿದ್ದ ಕೊರೊನಾ ಸೋಂಕಿತರ ಸಂಖ್ಯೆ ಇದೀಗ 100ರ ಅಂಚಿಗೆ ಇಳಿದಿದ್ದು, ಮರಣ ಪ್ರಮಾಣವೂ 10ರ ಆಸುಪಾಸಿಗೆ ಬಂದು ನಿಂತಿದೆ. ಹೀಗಾಗಿ ದೇಶದಲ್ಲಿ ಕೊರೊನಾ ಬಹುತೇಕ ನಿಯಂತ್ರಣಕ್ಕೆ ಬಂದಿರುವುದರಿಂದ ಇಸ್ರೇಲ್​ ಸರ್ಕಾರ ಜನಸಾಮಾನ್ಯರಿಗೆ ಕೊರೊನಾ ನಿಯಮಾವಳಿಗಳಿಂದ ಕೆಲ ವಿನಾಯಿತಿಗಳನ್ನು ನೀಡುತ್ತಿದೆ.

ಸೋಂಕು ಗಣನೀಯ ಪ್ರಮಾಣದಲ್ಲಿ ಇಳಿಕೆಯಾದ ಬೆನ್ನಲ್ಲೇ ಶೈಕ್ಷಣಿಕ ಚಟುವಟಿಕೆಗಳು ಪುನಾರಂಭಗೊಂಡಿದ್ದು, ಶಾಲಾ ಕಾಲೇಜುಗಳನ್ನು ತೆರೆಯಲಾಗಿದೆ. ಸದ್ಯ ಶೈಕ್ಷಣಿಕ ಕೇಂದ್ರ, ಒಳಾಂಗಣ ಸ್ಥಳಗಳು ಹಾಗೂ ಲಸಿಕೆ ಪಡೆಯದವರು ಹೆಚ್ಚಿರುವಲ್ಲಿ ಮಾತ್ರ ಮಾಸ್ಕ್ ಧರಿಸುವುದನ್ನು ಮುಂದುವರೆಸುವಂತೆ ಸೂಚಿಸಲಾಗಿದ್ದು ಮೇ ತಿಂಗಳಿನಿಂದ ವಿದೇಶಿಯರಿಗೆ ಇಸ್ರೇಲ್​ ದೇಶಕ್ಕೆ ಆಗಮಿಸಲು ಅವಕಾಶ ನೀಡುವುದಾಗಿಯೂ ಸರ್ಕಾರ ಘೋಷಣೆ ಮಾಡಿದೆ.

ಇದನ್ನೂ ಓದಿ: ಮಾಸ್ಕ್​ ಇಲ್ಲದೇ ರೈಲ್ವೆ ಸ್ಟೇಷನ್​ಗೆ ಕಾಲಿಟ್ಟರೆ ಹುಷಾರ್​; ಬೀಳಲಿದೆ ಭಾರೀ ದಂಡ

ಎರಡೇಟು ಕೊಟ್ಟು ಮಾಸ್ಕ್ ಧರಿಸುವಂತೆ ಸೂಚನೆ ನೀಡಿದ ದಾವಣಗೆರೆ ಎಸ್​ಪಿ

(Wearing mask in Public space to avoid Covid 19 is no more compulsory says Israel)

ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ