AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ ಬಸ್ ಅಪಘಾತ; 13 ಜನ ಸಾವು, 34 ಮಂದಿಯ ಸ್ಥಿತಿ ಗಂಭೀರ

ಉತ್ತರಾಖಂಡದ ಪಿಥೋರಗಢ ಬಳಿಯ ನೇಪಾಳದ ಬೈತಾಡಿಯಲ್ಲಿ ಬಸ್ ಕಂದಕಕ್ಕೆ ಉರುಳಿ 13 ಜನರು ಸಾವನ್ನಪ್ಪಿದ್ದಾರೆ, 30ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಉತ್ತರಾಖಂಡದ ಪಿಥೋರಗಢದೊಂದಿಗೆ ಗಡಿಯನ್ನು ಹಂಚಿಕೊಂಡಿರುವ ನೇಪಾಳದ ಬೈತಾಡಿ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಈ ಭೀಕರ ರಸ್ತೆ ಅಪಘಾತದ ಸಂಭವಿಸಿತ್ತು. ಹಲವಾರು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಸುಮಾರು 200 ಮೀಟರ್ ಆಳದ ಕಂದಕಕ್ಕೆ ಉರುಳಿದಾಗ ಈ ಘಟನೆ ಸಂಭವಿಸಿತ್ತು.

ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ ಬಸ್ ಅಪಘಾತ; 13 ಜನ ಸಾವು, 34 ಮಂದಿಯ ಸ್ಥಿತಿ ಗಂಭೀರ
Nepal Bus AccidentImage Credit source: x
ಸುಷ್ಮಾ ಚಕ್ರೆ
|

Updated on: Feb 06, 2026 | 5:24 PM

Share

ಕಠ್ಮಂಡು, ಫೆಬ್ರವರಿ 6: ಉತ್ತರಾಖಂಡದ ಗಡಿಯಲ್ಲಿರುವ ನೇಪಾಳದ ಬೈತಾಡಿ ಜಿಲ್ಲೆಯಲ್ಲಿ ಗುರುವಾರ ಭೀಕರ ಬಸ್ ಅಪಘಾತ (Accident) ಸಂಭವಿಸಿತ್ತು. ಮದುವೆಗೆ ದಿಬ್ಬಣ ಕರೆದೊಯ್ಯುತ್ತಿದ್ದ ಬಸ್ ನಿಯಂತ್ರಣ ತಪ್ಪಿ 200 ಮೀಟರ್ ಆಳದ ಕಂದಕಕ್ಕೆ ಉರುಳಿತ್ತು. ಈ ಅಪಘಾತದ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. 34 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಪಘಾತದ ಮಾಹಿತಿ ತಿಳಿದ ಕೂಡಲೇ ನೇಪಾಳದ ಅಧಿಕಾರಿಗಳು ಮತ್ತು ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಗಾಯಾಳುಗಳನ್ನು ಬೈತಾಡಿ ಮತ್ತು ದಾದೇಲ್ಧುರಾದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ.

ವರದಿಗಳ ಪ್ರಕಾರ, ನೇಪಾಳದ ಸುದುರ್ಪಾಶ್ಚಿಮ್ ಪ್ರದೇಶದಲ್ಲಿ ನಿನ್ನೆ ಈ ಅಪಘಾತ ಸಂಭವಿಸಿದ್ದು, 8 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಚಿಕಿತ್ಸೆಯ ಸಮಯದಲ್ಲಿ 5 ಜನರು ಸಾವನ್ನಪ್ಪಿದರು. ಈ ಮೂಲಕ ಸಾವಿನ ಸಂಖ್ಯೆ 13ಕ್ಕೆ ಏರಿದೆ.

ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಬೈತಾಡಿ ಜಿಲ್ಲೆಯ ಪುರ್ಚೌರಿ ಪುರಸಭೆ ಪ್ರದೇಶದಿಂದ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ ಬಸ್ ಪರ್ವತದ ರಸ್ತೆಯಲ್ಲಿ ನಿಯಂತ್ರಣ ತಪ್ಪಿ 200 ಮೀಟರ್ ಆಳದ ಕಂದಕಕ್ಕೆ ಬಿದ್ದಾಗ ಈ ಅಪಘಾತ ಸಂಭವಿಸಿದೆ. ಪಶ್ಚಿಮ ನೇಪಾಳದ ಪುರ್ಚೌರಿ -7 ಪ್ರದೇಶದ ಬದ್ಗಾಂವ್ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ.

ಇದನ್ನೂ ಓದಿ: ಹನಿಮೂನ್ ಮರ್ಡರ್ 2.0: ಮದುವೆಯಾದ 3 ತಿಂಗಳಲ್ಲೇ ಗಂಡನನ್ನು ಕೊಂದು ಅಪಘಾತವೆಂದು ನಂಬಿಸಿದ ಹೆಂಡತಿ

ಸ್ಥಳೀಯ ನಿವಾಸಿಗಳು, ನೇಪಾಳದ ಪೊಲೀಸರು ಮತ್ತು ಸಶಸ್ತ್ರ ಪೊಲೀಸ್ ಪಡೆ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಹಲವಾರು ಗಾಯಾಳುಗಳ ಸ್ಥಿತಿ ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಪೊಲೀಸರು ಹೇಳಿದ್ದಾರೆ. ಭಾರ ಹೊತ್ತಿದ್ದ ಬಸ್ ಹತ್ತುತ್ತಿದ್ದಾಗ ಪ್ರೆಶರ್ ಪೈಪ್ ಒಡೆದ ನಂತರ ಅಪಘಾತ ಸಂಭವಿಸಿರಬಹುದು ಎನ್ನಲಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!