AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಯಾನ 3 ಉಡಾವಣೆಗೊಂಡು ವಾರದ ಬಳಿಕ ಚಂದ್ರನತ್ತ ಹೊರಟ ರಷ್ಯಾದ ಬಾಹ್ಯಾಕಾಶ ನೌಕೆ

ಚಂದ್ರಯಾನ 3 ಉಡಾವಣೆಗೊಂಡು ವಾರದ ಬಳಿಕ ಚಂದ್ರನತ್ತ ರಷ್ಯಾದ ಬಾಹ್ಯಾಕಾಶ ನೌಕೆ ಹೊರಟಿದೆ. ಅದೂ ಕೂಡ ವಿಕ್ರಂ ಲ್ಯಾಂಡರ್ ಚಂದ್ರನ ಮೇಲ್ಮೈ ಮೇಲೆ ಇಳಿಯುವ ದಿನವೇ ಅಂದರೆ ಆಗಸ್ಟ್​ 23ರಂದು ಚಂದ್ರನ ಮೇಲೆ ಇಳಿಯಲಿದೆ.

ಚಂದ್ರಯಾನ 3 ಉಡಾವಣೆಗೊಂಡು ವಾರದ ಬಳಿಕ ಚಂದ್ರನತ್ತ ಹೊರಟ ರಷ್ಯಾದ ಬಾಹ್ಯಾಕಾಶ ನೌಕೆ
ರಷ್ಯಾ ಬಾಹ್ಯಾಕಾಶ ನೌಕೆ
ನಯನಾ ರಾಜೀವ್
|

Updated on:Aug 11, 2023 | 8:31 AM

Share

ಚಂದ್ರಯಾನ 3 ಉಡಾವಣೆಗೊಂಡು ವಾರದ ಬಳಿಕ ಚಂದ್ರನತ್ತ ರಷ್ಯಾದ ಬಾಹ್ಯಾಕಾಶ ನೌಕೆ ಹೊರಟಿದೆ. ಅದೂ ಕೂಡ ವಿಕ್ರಂ ಲ್ಯಾಂಡರ್ ಚಂದ್ರನ ಮೇಲ್ಮೈ ಮೇಲೆ ಇಳಿಯುವ ದಿನವೇ ಅಂದರೆ ಆಗಸ್ಟ್​ 23ರಂದು ಚಂದ್ರನ ಮೇಲೆ ಇಳಿಯಲಿದೆ. ಸುಮಾರು 50 ವರ್ಷಗಳ ನಂತರ ರಷ್ಯಾ ಮತ್ತೆ ಚಂದ್ರನ ಅಂಗಳಕ್ಕೆ ಇಳಿಯಲು ಪ್ರಯತ್ನಿಸುತ್ತಿದೆ. 1976 ರ ನಂತರ ರಷ್ಯಾ ತನ್ನ ಮೊದಲ ಲೂನಾ -25 ಮೂನ್ ಲ್ಯಾಂಡರ್ ಅನ್ನು ಬಾಹ್ಯಾಕಾಶಕ್ಕೆ ಕಳುಹಿಸಿತ್ತು. ರಷ್ಯಾದ ಬಾಹ್ಯಾಕಾಶ ಸಂಸ್ಥೆ ರೋಸ್ಕೋಸ್ಮಾಸ್ ಸೋಯುಜ್-2 ರಾಕೆಟ್ ಸಹಾಯದಿಂದ ಲೂನಾ-25 ಅನ್ನು ಉಡಾವಣೆ ಮಾಡಿತ್ತು.

ಭಾರತವು ಚಂದ್ರಯಾನ-3 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿತ್ತು, ಅದರ ನಂತರ ಈಗ ರಷ್ಯಾ ಕೂಡ ಚಂದ್ರನ ಮಿಷನ್ ಅನ್ನು ಪ್ರಾರಂಭಿಸಿದೆ. ಉಡಾವಣೆಯಾದ ಸುಮಾರು 564 ಸೆಕೆಂಡುಗಳ ನಂತರ ಫ್ರಿಗೇಟ್ ಬೂಸ್ಟರ್ ರಾಕೆಟ್‌ನ ಮೂರನೇ ಹಂತದಿಂದ ಬೇರ್ಪಟ್ಟಿತು. ಉಡಾವಣೆಯಾದ ಸುಮಾರು ಒಂದು ಗಂಟೆಯ ನಂತರ, ಲೂನಾ-25 ಬಾಹ್ಯಾಕಾಶ ನೌಕೆಯು ಬೂಸ್ಟರ್‌ನಿಂದ ಬೇರ್ಪಡುತ್ತದೆ.

ಬಾಹ್ಯಾಕಾಶ ನೌಕೆಯು ನೀರು ಸೇರಿದಂತೆ ನೈಸರ್ಗಿಕ ಸಂಪನ್ಮೂಲಗಳನ್ನು ಹುಡುಕುತ್ತದೆ, ಅದೇ ಸಮಯದಲ್ಲಿ, ಲ್ಯಾಂಡರ್‌ನಲ್ಲಿ ಅನೇಕ ಕ್ಯಾಮೆರಾಗಳಿವೆ, ಇದು ಟೈಮ್‌ಲ್ಯಾಪ್ಸ್ ತುಣುಕನ್ನು ಮತ್ತು ಲ್ಯಾಂಡಿಂಗ್‌ನ ಅದ್ಭುತ ಚಿತ್ರಗಳನ್ನು ಸೆರೆಹಿಡಿಯುತ್ತದೆ.

ಒಂದೊಮ್ಮೆ ವಿಕ್ರಂ ಲ್ಯಾಂಡರ್ ಮತ್ತೆ ರಷ್ಯಾದ ನೌಕೆ ನಡುವೆ ಘರ್ಷಣೆ ಉಂಟಾದರೆ ಎನ್ನುವ ಭಯ ಬೇಡ ಎರಡೂ ಬೇರೆ ಬೇರೆ ಪ್ರದೇಶಗಳಲ್ಲಿ ಲ್ಯಾಂಡಿಂಗ್ ಆಗಲಿದೆ.

ಐದು ದಿನಗಳಲ್ಲಿ ನೌಕೆಯು ಚಂದ್ರನ ಕಕ್ಷೆಯನ್ನು ತಲುಪಲಿದೆ. ಚಂದ್ರನ ದಕ್ಷಿಣ ಧ್ರುವ ಪ್ರದೇಶದಲ್ಲಿ ಇಳಿಯುವ ಮೊದಲು ಅದು ಸರಿಯಾದ ಸ್ಥಳವನ್ನು ಆಯ್ಕೆ ಮಾಡಲು ಮೂರರಿಂದ ಏಳು ದಿನಗಳನ್ನು ತೆಗೆದುಕೊಳ್ಳುತ್ತದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:30 am, Fri, 11 August 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ