AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋ ಬೈಡನ್ ಅಮೆರಿಕ ಅಧ್ಯಕ್ಷರಾದರೆ ಭಾರತಕ್ಕೆ ಲಾಭವಾಗುತ್ತಾ?

ಅಮೆರಿಕ ಅಧ್ಯಕ್ಷೀಯ ಚುನಾವಣೆ ಫಲಿತಾಂಶ ಕ್ಷಣಕ್ಷಣಕ್ಕೂ ತಿರುವು ಪಡೆಯುತ್ತಿದೆ. ಈ ಬಾರಿ ಬಹುಮತ ಗಳಿಸುವ ಸನಿಹಕ್ಕೆ ಮಾಜಿ ಉಪಾಧ್ಯಕ್ಷ ಜೋ ಬೈಡನ್ ತಲುಪಿದ್ದು, ಸೋಲು-ಗೆಲುವಿನ ಲೆಕ್ಕಾಚಾರ ಶುರುವಾಗಿದೆ. ಆದರೆ ಈ ಹೊತ್ತಲ್ಲೇ ಬೈಡನ್ ಅಧ್ಯಕ್ಷರಾದರೆ ಭಾರತಕ್ಕೇನು ಲಾಭ ಎಂಬ ಲೆಕ್ಕಾಚಾರ ಶುರುವಾಗಿದೆ. ಒಬಾಮಾ ಅವಧಿಯಲ್ಲಿ ಉಪಾಧ್ಯಕ್ಷರಾಗಿ. ಹತ್ತಾರು ವರ್ಷಗಳಿಂದಲೂ ಅಮೆರಿಕದ ರಾಜಕೀಯದಲ್ಲಿ ಛಾಪು ಮೂಡಿಸಿರುವ ಜೋ ಬೈಡನ್ ಅಧ್ಯಕ್ಷರಾಗೋದು ಬಹುತೇಕ ಪಕ್ಕಾ ಆಗಿದೆ. ಹಲವಾರು ಕಾರಣಗಳಿಂದ ಟ್ರಂಪ್ ಈ ಬಾರಿ ಸಾಕಷ್ಟು ಹಿನ್ನಡೆ ಅನುಭವಿಸಿದ್ದು, ವೈಟ್​ಹೌಸ್ ಬಿಟ್ಟು […]

ಜೋ ಬೈಡನ್ ಅಮೆರಿಕ ಅಧ್ಯಕ್ಷರಾದರೆ ಭಾರತಕ್ಕೆ ಲಾಭವಾಗುತ್ತಾ?
ಆಯೇಷಾ ಬಾನು
|

Updated on: Nov 06, 2020 | 6:33 AM

Share

ಅಮೆರಿಕ ಅಧ್ಯಕ್ಷೀಯ ಚುನಾವಣೆ ಫಲಿತಾಂಶ ಕ್ಷಣಕ್ಷಣಕ್ಕೂ ತಿರುವು ಪಡೆಯುತ್ತಿದೆ. ಈ ಬಾರಿ ಬಹುಮತ ಗಳಿಸುವ ಸನಿಹಕ್ಕೆ ಮಾಜಿ ಉಪಾಧ್ಯಕ್ಷ ಜೋ ಬೈಡನ್ ತಲುಪಿದ್ದು, ಸೋಲು-ಗೆಲುವಿನ ಲೆಕ್ಕಾಚಾರ ಶುರುವಾಗಿದೆ. ಆದರೆ ಈ ಹೊತ್ತಲ್ಲೇ ಬೈಡನ್ ಅಧ್ಯಕ್ಷರಾದರೆ ಭಾರತಕ್ಕೇನು ಲಾಭ ಎಂಬ ಲೆಕ್ಕಾಚಾರ ಶುರುವಾಗಿದೆ.

ಒಬಾಮಾ ಅವಧಿಯಲ್ಲಿ ಉಪಾಧ್ಯಕ್ಷರಾಗಿ. ಹತ್ತಾರು ವರ್ಷಗಳಿಂದಲೂ ಅಮೆರಿಕದ ರಾಜಕೀಯದಲ್ಲಿ ಛಾಪು ಮೂಡಿಸಿರುವ ಜೋ ಬೈಡನ್ ಅಧ್ಯಕ್ಷರಾಗೋದು ಬಹುತೇಕ ಪಕ್ಕಾ ಆಗಿದೆ. ಹಲವಾರು ಕಾರಣಗಳಿಂದ ಟ್ರಂಪ್ ಈ ಬಾರಿ ಸಾಕಷ್ಟು ಹಿನ್ನಡೆ ಅನುಭವಿಸಿದ್ದು, ವೈಟ್​ಹೌಸ್ ಬಿಟ್ಟು ಹೋಗುವುದು 99 ಪರ್ಸೆಂಟ್ ಗ್ಯಾರಂಟಿ ಆಗಿದೆ. ಆದ್ರೆ ಈ ಬಾರಿ ಬೈಡನ್ ಅಧ್ಯಕ್ಷರಾದರೆ ಭಾರತಕ್ಕೇನು ಲಾಭ ಎಂಬ ಲೆಕ್ಕಾಚಾರ ಶುರುವಾಗಿದೆ.

ಬೈಡನ್ ಕಾಲದಲ್ಲಿ ಸುಧಾರಿಸುತ್ತಾ ಭಾರತ-ಅಮೆರಿಕ ಸಂಬಂಧ? ಹೌದು ಮೇಲ್ನೋಟಕ್ಕೆ ಭಾರತ-ಟ್ರಂಪ್ ಸಂಬಂಧ ಚೆನ್ನಾಗೇ ಇದ್ದರೂ ಸಾಕಷ್ಟು ಕಿರಿಕ್​ಗಳು ನಡೆದಿತ್ತು. ಇದು ಉಭಯ ದೇಶಗಳ ಬಾಂಧವ್ಯದ ಮೇಲೆ ಸಾಕಷ್ಟು ಪರಿಣಾಮ ಬೀರಿತ್ತು. ಅದರಲ್ಲೂ ಭಾರತದ ಪ್ರಮುಖ ಕ್ಷೇತ್ರಗಳಲ್ಲಿ ಟ್ರಂಪ್ ಕಠಿಣ ಕ್ರಮ ಕೈಗೊಂಡಿದ್ದರು. ಇದೀಗ ಬೈಡನ್ ಅಮೆರಿಕ ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದ್ದು, ಈ ಬಾರಿ ಭಾರತಕ್ಕೆ ಆಗುವ ಲಾಭವೇನು ಎಂಬುದು ಯಕ್ಷಪ್ರಶ್ನೆಯಾಗಿದೆ. ಹಾಗಾದ್ರೆ ಟ್ರಂಪ್ ಭಾರತದ ಬಗ್ಗೆ ಕೈಗೊಂಡ ವಿವಾದಾತ್ಮಕ ನಿರ್ಣಯಗಳು ಯಾವುವು ಅನ್ನೋದನ್ನ ಇಲ್ಲಿ ಓದಿ.

ಭಾರತದ ಮೇಲೆ ಟ್ರಂಪ್ ಪ್ರಹಾರ ಭಾರತೀಯರಿಗೆ ಅನುಕೂಲವಾಗಿದ್ದ ಹೆಚ್​1ಬಿ ವೀಸಾ ಮೇಲೆ ಟ್ರಂಪ್ ಹಲವು ನಿರ್ಬಂಧ ಹೇರಿದ್ದರು. ಅಲ್ಲದೆ ಭಾರತದ ವಸ್ತುಗಳನ್ನು ಅಮೆರಿಕಗೆ ರಫ್ತು ಮಾಡುವುದರ ಮೇಲೆ ಕಡಿವಾಣ ಹಾಕಿ ಸಂಕಷ್ಟ ಉಂಟುಮಾಡಿದ್ರು. ಬಳಿಕ ಕೊರೊನಾ ಕಂಟಕ ಎದರಾದಾಗ HCQC ಮಾತ್ರೆಗಳನ್ನು ರಫ್ತು ಮಾಡದಿದ್ದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆಂದು ವಾರ್ನಿಂಗ್ ಕೊಟ್ಟಿದ್ದರು. ಅಮೆರಿಕದ ಉತ್ಪನ್ನಗಳಿಗೆ ಭಾರತದಲ್ಲಿ ತೆರಿಗೆ ಇಳಿಸಲು ಟ್ರಂಪ್ ಒತ್ತಡ ಹೇರಿದ್ದರು. ಭಾರತ ಟ್ಯಾಕ್ಸ್ ಟೆರರಿಸಂ ಮಾಡ್ತ್ತಿದೆ ಎಂದು ಡೊನಾಲ್ಡ್ ಟ್ರಂಪ್ ಆರೋಪ ಮಾಡಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು. ಇಷ್ಟೇ ಅಲ್ಲ ಅಮೆರಿಕನ್ನರಿಗೆ ಉದ್ಯೋಗ ನೀಡಲು ಟ್ರಂಪ್ ಮೊದಲ ಆದ್ಯತೆ ಕೊಟ್ಟಿದ್ದು ಭಾರತಕ್ಕೆ ಪೆಟ್ಟು ಕೊಟ್ಟಿತ್ತು.

ಡೆಮಾಕ್ರಟಿಕ್-ರಿಪಬ್ಲಿಕನ್ಸ್ ಇಬ್ಬರೂ ಒಂದೇ ನಾಣ್ಯದ 2 ಮುಖಗಳು: ಹೌದು, ಅಮೆರಿಕದಲ್ಲಿ ಯಾರೇ ಅಧಿಕಾರಕ್ಕೆ ಬಂದರೂ ಭಾರತವೇ ಟಾರ್ಗೆಟ್. ಅದ್ರಲ್ಲೂ ರಿಪಬ್ಲಿಕನ್ಸ್ ಹಿಂದೆ ಹಲವು ಸಂದರ್ಭಗಳಲ್ಲಿ ಭಾರತಕ್ಕೆ ಸಮಸ್ಯೆಯಾಗುವ ನಿರ್ಣಯಗಳನ್ನೇ ಕೈಗೊಂಡಿದ್ದಾರೆ. ಇನ್ನು ಡೆಮಾಕ್ರಟಿಕ್ ಪಕ್ಷ ಕೂಡ ಅಷ್ಟೇ, ಸದ್ದೇ ಇಲ್ಲದೆ ಭಾರತೀಯರ ವಿರುದ್ಧದ ನಿರ್ಣಯಗಳನ್ನ ಕೈಗೊಳ್ಳುತ್ತದೆ. ಹೀಗಾಗಿ ಈ ಬಾರಿ ಬೈಡನ್ ಗೆದ್ದು ಬಂದರೆ ಭಾರತಕ್ಕೆ ಯಾವ ರೀತಿ ಲಾಭವಾಗುತ್ತೆ ಎಂಬುದು ಟ್ರಿಲಿಯನ್ ಡಾಲರ್ ಪ್ರಶ್ನೆಯಾಗಿದೆ.

ಒಟ್ನಲ್ಲಿ ಈ ಬಾರಿ ಬೈಡನ್ ಗೆಲುವು ಪಕ್ಕಾ ಆಗಿದ್ದು, ಭಾರತ ಹಾಗೂ ಅಮೆರಿಕ ಸಂಬಂಧ ಇನ್ನೆಷ್ಟು ಸುಧಾರಣೆ ಕಾಣಲಿದೆ ಎಂಬುದನ್ನ ಕಾದು ನೋಡಬೇಕಿದೆ. ಒಂದ್ಕಡೆ ಕೊರೊನಾ ಮತ್ತೊಂದ್ಕಡೆ ಚೀನಾ ಭಾರತವನ್ನು ಕಾಡುತ್ತಿವೆ. ಹೀಗಾಗಿ ಅಮೆರಿಕದ ಬೆಂಬಲ ಭಾರತಕ್ಕೆ ಅತ್ಯಗತ್ಯವಾಗಿದ್ದು, ಬೈಡನ್ ತಾವು ಚುನಾವಣೆಗೆ ಮುಂಚೆ ಕೊಟ್ಟಿದ್ದ ಮಾತು ಉಳಿಸಿಕೊಳ್ಳುತ್ತಾರಾ ಎಂಬುದನ್ನ ಕಾದು ನೋಡಬೇಕಿದೆ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ