AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋ ಬೈಡನ್ ಅಮೆರಿಕ ಅಧ್ಯಕ್ಷರಾದರೆ ಭಾರತಕ್ಕೆ ಲಾಭವಾಗುತ್ತಾ?

ಅಮೆರಿಕ ಅಧ್ಯಕ್ಷೀಯ ಚುನಾವಣೆ ಫಲಿತಾಂಶ ಕ್ಷಣಕ್ಷಣಕ್ಕೂ ತಿರುವು ಪಡೆಯುತ್ತಿದೆ. ಈ ಬಾರಿ ಬಹುಮತ ಗಳಿಸುವ ಸನಿಹಕ್ಕೆ ಮಾಜಿ ಉಪಾಧ್ಯಕ್ಷ ಜೋ ಬೈಡನ್ ತಲುಪಿದ್ದು, ಸೋಲು-ಗೆಲುವಿನ ಲೆಕ್ಕಾಚಾರ ಶುರುವಾಗಿದೆ. ಆದರೆ ಈ ಹೊತ್ತಲ್ಲೇ ಬೈಡನ್ ಅಧ್ಯಕ್ಷರಾದರೆ ಭಾರತಕ್ಕೇನು ಲಾಭ ಎಂಬ ಲೆಕ್ಕಾಚಾರ ಶುರುವಾಗಿದೆ. ಒಬಾಮಾ ಅವಧಿಯಲ್ಲಿ ಉಪಾಧ್ಯಕ್ಷರಾಗಿ. ಹತ್ತಾರು ವರ್ಷಗಳಿಂದಲೂ ಅಮೆರಿಕದ ರಾಜಕೀಯದಲ್ಲಿ ಛಾಪು ಮೂಡಿಸಿರುವ ಜೋ ಬೈಡನ್ ಅಧ್ಯಕ್ಷರಾಗೋದು ಬಹುತೇಕ ಪಕ್ಕಾ ಆಗಿದೆ. ಹಲವಾರು ಕಾರಣಗಳಿಂದ ಟ್ರಂಪ್ ಈ ಬಾರಿ ಸಾಕಷ್ಟು ಹಿನ್ನಡೆ ಅನುಭವಿಸಿದ್ದು, ವೈಟ್​ಹೌಸ್ ಬಿಟ್ಟು […]

ಜೋ ಬೈಡನ್ ಅಮೆರಿಕ ಅಧ್ಯಕ್ಷರಾದರೆ ಭಾರತಕ್ಕೆ ಲಾಭವಾಗುತ್ತಾ?
ಆಯೇಷಾ ಬಾನು
ಆಯೇಷಾ ಬಾನು|

Updated on: Nov 06, 2020 | 6:33 AM

Share

ಅಮೆರಿಕ ಅಧ್ಯಕ್ಷೀಯ ಚುನಾವಣೆ ಫಲಿತಾಂಶ ಕ್ಷಣಕ್ಷಣಕ್ಕೂ ತಿರುವು ಪಡೆಯುತ್ತಿದೆ. ಈ ಬಾರಿ ಬಹುಮತ ಗಳಿಸುವ ಸನಿಹಕ್ಕೆ ಮಾಜಿ ಉಪಾಧ್ಯಕ್ಷ ಜೋ ಬೈಡನ್ ತಲುಪಿದ್ದು, ಸೋಲು-ಗೆಲುವಿನ ಲೆಕ್ಕಾಚಾರ ಶುರುವಾಗಿದೆ. ಆದರೆ ಈ ಹೊತ್ತಲ್ಲೇ ಬೈಡನ್ ಅಧ್ಯಕ್ಷರಾದರೆ ಭಾರತಕ್ಕೇನು ಲಾಭ ಎಂಬ ಲೆಕ್ಕಾಚಾರ ಶುರುವಾಗಿದೆ.

ಒಬಾಮಾ ಅವಧಿಯಲ್ಲಿ ಉಪಾಧ್ಯಕ್ಷರಾಗಿ. ಹತ್ತಾರು ವರ್ಷಗಳಿಂದಲೂ ಅಮೆರಿಕದ ರಾಜಕೀಯದಲ್ಲಿ ಛಾಪು ಮೂಡಿಸಿರುವ ಜೋ ಬೈಡನ್ ಅಧ್ಯಕ್ಷರಾಗೋದು ಬಹುತೇಕ ಪಕ್ಕಾ ಆಗಿದೆ. ಹಲವಾರು ಕಾರಣಗಳಿಂದ ಟ್ರಂಪ್ ಈ ಬಾರಿ ಸಾಕಷ್ಟು ಹಿನ್ನಡೆ ಅನುಭವಿಸಿದ್ದು, ವೈಟ್​ಹೌಸ್ ಬಿಟ್ಟು ಹೋಗುವುದು 99 ಪರ್ಸೆಂಟ್ ಗ್ಯಾರಂಟಿ ಆಗಿದೆ. ಆದ್ರೆ ಈ ಬಾರಿ ಬೈಡನ್ ಅಧ್ಯಕ್ಷರಾದರೆ ಭಾರತಕ್ಕೇನು ಲಾಭ ಎಂಬ ಲೆಕ್ಕಾಚಾರ ಶುರುವಾಗಿದೆ.

ಬೈಡನ್ ಕಾಲದಲ್ಲಿ ಸುಧಾರಿಸುತ್ತಾ ಭಾರತ-ಅಮೆರಿಕ ಸಂಬಂಧ? ಹೌದು ಮೇಲ್ನೋಟಕ್ಕೆ ಭಾರತ-ಟ್ರಂಪ್ ಸಂಬಂಧ ಚೆನ್ನಾಗೇ ಇದ್ದರೂ ಸಾಕಷ್ಟು ಕಿರಿಕ್​ಗಳು ನಡೆದಿತ್ತು. ಇದು ಉಭಯ ದೇಶಗಳ ಬಾಂಧವ್ಯದ ಮೇಲೆ ಸಾಕಷ್ಟು ಪರಿಣಾಮ ಬೀರಿತ್ತು. ಅದರಲ್ಲೂ ಭಾರತದ ಪ್ರಮುಖ ಕ್ಷೇತ್ರಗಳಲ್ಲಿ ಟ್ರಂಪ್ ಕಠಿಣ ಕ್ರಮ ಕೈಗೊಂಡಿದ್ದರು. ಇದೀಗ ಬೈಡನ್ ಅಮೆರಿಕ ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದ್ದು, ಈ ಬಾರಿ ಭಾರತಕ್ಕೆ ಆಗುವ ಲಾಭವೇನು ಎಂಬುದು ಯಕ್ಷಪ್ರಶ್ನೆಯಾಗಿದೆ. ಹಾಗಾದ್ರೆ ಟ್ರಂಪ್ ಭಾರತದ ಬಗ್ಗೆ ಕೈಗೊಂಡ ವಿವಾದಾತ್ಮಕ ನಿರ್ಣಯಗಳು ಯಾವುವು ಅನ್ನೋದನ್ನ ಇಲ್ಲಿ ಓದಿ.

ಭಾರತದ ಮೇಲೆ ಟ್ರಂಪ್ ಪ್ರಹಾರ ಭಾರತೀಯರಿಗೆ ಅನುಕೂಲವಾಗಿದ್ದ ಹೆಚ್​1ಬಿ ವೀಸಾ ಮೇಲೆ ಟ್ರಂಪ್ ಹಲವು ನಿರ್ಬಂಧ ಹೇರಿದ್ದರು. ಅಲ್ಲದೆ ಭಾರತದ ವಸ್ತುಗಳನ್ನು ಅಮೆರಿಕಗೆ ರಫ್ತು ಮಾಡುವುದರ ಮೇಲೆ ಕಡಿವಾಣ ಹಾಕಿ ಸಂಕಷ್ಟ ಉಂಟುಮಾಡಿದ್ರು. ಬಳಿಕ ಕೊರೊನಾ ಕಂಟಕ ಎದರಾದಾಗ HCQC ಮಾತ್ರೆಗಳನ್ನು ರಫ್ತು ಮಾಡದಿದ್ದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆಂದು ವಾರ್ನಿಂಗ್ ಕೊಟ್ಟಿದ್ದರು. ಅಮೆರಿಕದ ಉತ್ಪನ್ನಗಳಿಗೆ ಭಾರತದಲ್ಲಿ ತೆರಿಗೆ ಇಳಿಸಲು ಟ್ರಂಪ್ ಒತ್ತಡ ಹೇರಿದ್ದರು. ಭಾರತ ಟ್ಯಾಕ್ಸ್ ಟೆರರಿಸಂ ಮಾಡ್ತ್ತಿದೆ ಎಂದು ಡೊನಾಲ್ಡ್ ಟ್ರಂಪ್ ಆರೋಪ ಮಾಡಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು. ಇಷ್ಟೇ ಅಲ್ಲ ಅಮೆರಿಕನ್ನರಿಗೆ ಉದ್ಯೋಗ ನೀಡಲು ಟ್ರಂಪ್ ಮೊದಲ ಆದ್ಯತೆ ಕೊಟ್ಟಿದ್ದು ಭಾರತಕ್ಕೆ ಪೆಟ್ಟು ಕೊಟ್ಟಿತ್ತು.

ಡೆಮಾಕ್ರಟಿಕ್-ರಿಪಬ್ಲಿಕನ್ಸ್ ಇಬ್ಬರೂ ಒಂದೇ ನಾಣ್ಯದ 2 ಮುಖಗಳು: ಹೌದು, ಅಮೆರಿಕದಲ್ಲಿ ಯಾರೇ ಅಧಿಕಾರಕ್ಕೆ ಬಂದರೂ ಭಾರತವೇ ಟಾರ್ಗೆಟ್. ಅದ್ರಲ್ಲೂ ರಿಪಬ್ಲಿಕನ್ಸ್ ಹಿಂದೆ ಹಲವು ಸಂದರ್ಭಗಳಲ್ಲಿ ಭಾರತಕ್ಕೆ ಸಮಸ್ಯೆಯಾಗುವ ನಿರ್ಣಯಗಳನ್ನೇ ಕೈಗೊಂಡಿದ್ದಾರೆ. ಇನ್ನು ಡೆಮಾಕ್ರಟಿಕ್ ಪಕ್ಷ ಕೂಡ ಅಷ್ಟೇ, ಸದ್ದೇ ಇಲ್ಲದೆ ಭಾರತೀಯರ ವಿರುದ್ಧದ ನಿರ್ಣಯಗಳನ್ನ ಕೈಗೊಳ್ಳುತ್ತದೆ. ಹೀಗಾಗಿ ಈ ಬಾರಿ ಬೈಡನ್ ಗೆದ್ದು ಬಂದರೆ ಭಾರತಕ್ಕೆ ಯಾವ ರೀತಿ ಲಾಭವಾಗುತ್ತೆ ಎಂಬುದು ಟ್ರಿಲಿಯನ್ ಡಾಲರ್ ಪ್ರಶ್ನೆಯಾಗಿದೆ.

ಒಟ್ನಲ್ಲಿ ಈ ಬಾರಿ ಬೈಡನ್ ಗೆಲುವು ಪಕ್ಕಾ ಆಗಿದ್ದು, ಭಾರತ ಹಾಗೂ ಅಮೆರಿಕ ಸಂಬಂಧ ಇನ್ನೆಷ್ಟು ಸುಧಾರಣೆ ಕಾಣಲಿದೆ ಎಂಬುದನ್ನ ಕಾದು ನೋಡಬೇಕಿದೆ. ಒಂದ್ಕಡೆ ಕೊರೊನಾ ಮತ್ತೊಂದ್ಕಡೆ ಚೀನಾ ಭಾರತವನ್ನು ಕಾಡುತ್ತಿವೆ. ಹೀಗಾಗಿ ಅಮೆರಿಕದ ಬೆಂಬಲ ಭಾರತಕ್ಕೆ ಅತ್ಯಗತ್ಯವಾಗಿದ್ದು, ಬೈಡನ್ ತಾವು ಚುನಾವಣೆಗೆ ಮುಂಚೆ ಕೊಟ್ಟಿದ್ದ ಮಾತು ಉಳಿಸಿಕೊಳ್ಳುತ್ತಾರಾ ಎಂಬುದನ್ನ ಕಾದು ನೋಡಬೇಕಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?