AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೇಜರ್​, ವಾಕಿ-ಟಾಕಿ ಸ್ಫೋಟದ ಹಿಂದಿದೆ ಇಸ್ರೇಲ್​ನ ಅಪಾಯಕಾರಿ ಸೈಬರ್ ಯುನಿಟ್ 8200 ಬಗ್ಗೆ ನಿಮಗೆಷ್ಟು ಗೊತ್ತು?

ಲೆಬನಾನ್‌ನಲ್ಲಿ ನಡೆದ ಪೇಜರ್ ದಾಳಿಯಿಂದ ಹಿಜ್ಬುಲ್ಲಾ ಮಾತ್ರವಲ್ಲದೆ ಇಡೀ ವಿಶ್ವವೇ ಬೆಚ್ಚಿಬಿದ್ದಿದೆ. ಸಣ್ಣದಾಗಿ ಕಾಣುವ ಪೇಜರ್ ಅನ್ನು ಬಾಂಬ್ ಆಗಿ ಬಳಸಬಹುದೇ ಎಂಬುದೇ ಪ್ರಶ್ನೆಯಾಗಿದೆ. ಇಸ್ರೇಲ್ ಈ ಘಟನೆಯನ್ನು ಒಪ್ಪಿಕೊಳ್ಳದಿದ್ದರೂ, ಯುದ್ಧದ ನಡುವೆ, ಇಸ್ರೇಲ್ ಹೊರತುಪಡಿಸಿ ಬೇರೆ ಯಾವುದೇ ದೇಶವು ಈ ಕೃತ್ಯವನ್ನು ನಡೆಸಲು ಸಾಧ್ಯವಿಲ್ಲ ಎಂಬುದು ಇಡೀ ಜಗತ್ತಿಗೇ ತಿಳಿದಿದೆ.

ಪೇಜರ್​, ವಾಕಿ-ಟಾಕಿ ಸ್ಫೋಟದ ಹಿಂದಿದೆ ಇಸ್ರೇಲ್​ನ ಅಪಾಯಕಾರಿ ಸೈಬರ್ ಯುನಿಟ್ 8200 ಬಗ್ಗೆ ನಿಮಗೆಷ್ಟು ಗೊತ್ತು?
ಲೆಬನಾನ್
ನಯನಾ ರಾಜೀವ್
|

Updated on: Sep 19, 2024 | 3:33 PM

Share

ಲೆಬನಾನ್​ನಲ್ಲಿ ಪೇಜರ್​ಗಳು, ವಾಕಿ-ಟಾಕಿಗಳ ಸ್ಫೋಟದಿಂದ ಹಿಜ್ಬುಲ್ಲಾ ಸಂಘಟನೆಯ ಸದಸ್ಯರಲ್ಲಿ ನಡುಕ ಹುಟ್ಟಿದೆ. ಸ್ಪೋಟದಲ್ಲಿ 20ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 3 ಸಾವಿರಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಸೌರ ವ್ಯವಸ್ಥೆಗಳು, ಎಲೆಕ್ಟ್ರಿಕ್ ಸ್ಕೂಟರ್‌ಗಳು ಮತ್ತು ಅನೇಕ ಕಾರುಗಳಲ್ಲಿ ಸ್ಫೋಟಗಳು ಸಂಭವಿಸಿರುವ ಕುರಿತು ವರದಿಯಾಗಿದೆ.

ಈಗ ಹಿಜ್ಬುಲ್ಲಾದ ನಾಯಕರಿಗೆ ಅವರು ಯಾವ ಎಲೆಕ್ಟ್ರಾನಿಕ್​ ಸಾಧನಗಳನ್ನು ಮುಟ್ಟಬೇಕು ಮತ್ತು ಯಾವುದರಿಂದ ದೂರವಿರಬೇಕು ಎಂಬುದು ಅರ್ಥವಾಗುತ್ತಿಲ್ಲ. ಇಸ್ರೇಲ್‌ನ ವಾರ್​ಫೇರ್ ಘಟಕ 8200 ಎಂದರೇನು, ಅದು ಹೇಗೆ ಕೆಲಸ ಮಾಡುತ್ತದೆ ಎಂಬುದನ್ನು ತಿಳಿಯೋಣ.

ಯುನಿಟ್ 8200 ಇಸ್ರೇಲ್‌ನ ಅತ್ಯಂತ ರಹಸ್ಯ ಮಿಲಿಟರಿ ಘಟಕವಾಗಿದೆ. ಇದು ಇಸ್ರೇಲ್ ಡಿಫೆನ್ಸ್ ಫೋರ್ಸ್ (IDF) ಭಾಗವಾಗಿದೆ. ಇದನ್ನು ಅತ್ಯಂತ ಹೈಟೆಕ್ ಘಟಕ ಎಂದು ಕರೆಯಲಾಗುತ್ತದೆ. ಏಕೆಂದರೆ ಇದು ತಂತ್ರಜ್ಞಾನದ ಮೂಲಕ ಯುದ್ಧಗಳನ್ನು ಮಾಡುತ್ತದೆ ಮತ್ತು ಆ ದೇಶದ  ಸೈಬರ್ ರಕ್ಷಣೆಗಾಗಿ ಕೆಲಸ ಮಾಡುತ್ತದೆ.

ಅದರ ಕೆಲಸ ಮಾಡುವ ವಿಧಾನವು ವಿಭಿನ್ನವಾಗಿದೆ ಮತ್ತು ಅತ್ಯಾಧುನಿಕ ಮಟ್ಟದ ತಂತ್ರಜ್ಞಾನವನ್ನು ಬಳಸುತ್ತದೆ. ಸೈಬರ್ ದಾಳಿಯಿಂದ ಇಸ್ರೇಲ್ ಅನ್ನು ರಕ್ಷಿಸಲು ಇದು ಕೆಲಸ ಮಾಡುತ್ತದೆ. ಇದು ತಂತ್ರಜ್ಞಾನದ ಮೂಲಕ ಗುಪ್ತಚರ ಮಾಹಿತಿಯನ್ನು ಸಂಗ್ರಹಿಸುತ್ತದೆ.

ಮತ್ತಷ್ಟು ಓದಿ: Video: ಹಿಜ್ಬುಲ್ಲಾ ಸದಸ್ಯರ ಅಂತ್ಯಕ್ರಿಯೆ ವೇಳೆ ವಾಕಿ-ಟಾಕಿಗಳು ಸ್ಫೋಟ

ಯುನಿಟ್ 8200 ರ ಕೆಲಸವನ್ನು US ನ್ಯಾಷನಲ್ ಸೆಕ್ಯುರಿಟಿ ಏಜೆನ್ಸಿ (NSA) ಗೆ ಹೋಲಿಸಲಾಗುತ್ತದೆ. ಇದು ಭಯೋತ್ಪಾದಕ ಬೆದರಿಕೆಗಳನ್ನು ಎದುರಿಸುವುದರಿಂದ ಹಿಡಿದು ಸೈಬರ್ ದಾಳಿಗಳನ್ನು ನಡೆಸುವವರೆಗೆ ಸಾಮರ್ಥ್ಯಗಳನ್ನು ಹೊಂದಿದೆ. ಇಸ್ರೇಲ್‌ನ ಈ ರಹಸ್ಯ ಘಟಕದ ಭಾಗವಾಗುವುದು ಸುಲಭವಲ್ಲ. ಇದರಲ್ಲಿ ತಾಂತ್ರಿಕ ಕ್ಷೇತ್ರದ ಅತ್ಯಂತ ಬುದ್ಧಿವಂತ ತಜ್ಞರನ್ನು ನೇಮಿಸಿಕೊಳ್ಳಲಾಗುತ್ತದೆ.

ಈ ಘಟಕವು ವಿಭಿನ್ನ ಚಿಂತನೆ, ತಾಂತ್ರಿಕ ಪರಿಣತಿ ಮತ್ತು ಹೊಸದನ್ನು ಮಾಡುವುದರ ಮೇಲೆ ಕೇಂದ್ರೀಕರಿಸುತ್ತದೆ. ಇದರ ಯುವ ಘಟಕವು ಹ್ಯಾಕಿಂಗ್, ಎನ್‌ಕ್ರಿಪ್ಶನ್ ಮತ್ತು ಕಣ್ಗಾವಲು ಸೇರಿದಂತೆ ಕಠಿಣ ಗುಪ್ತಚರ ಕಾರ್ಯಗಳನ್ನು ನಿರ್ವಹಿಸಲು ತರಬೇತಿ ಪಡೆದಿದೆ.

ದೇಶದ ಸೈಬರ್ ಭದ್ರತಾ ವಲಯದ ಮೇಲೆ ಪ್ರಭಾವ ಬೀರಿದ ಓರ್ಕಾ ಸೆಕ್ಯುರಿಟಿಯಂತಹ ಕಂಪನಿಗಳನ್ನು ಇಲ್ಲಿ ಸ್ಥಾಪಿಸಲಾಯಿತು. ಘಟಕದ ಚಟುವಟಿಕೆಗಳು ಇಸ್ರೇಲ್‌ನ ಗಡಿಗಳನ್ನು ಮೀರಿ ವಿಸ್ತರಿಸುತ್ತವೆ. ಇರಾನ್‌ನ ಮೇಲೆ ತೀವ್ರ ಪರಿಣಾಮ ಬೀರಿದ ಸ್ಟಕ್ಸ್‌ನೆಟ್ ವೈರಸ್ ದಾಳಿ ಸೇರಿದಂತೆ ಹಲವಾರು ಹೈ-ಪ್ರೊಫೈಲ್ ಸೈಬರ್ ಕಾರ್ಯಾಚರಣೆ ಹಿಂದೆ  ಇದರ ಹೆಸರು ಕಾಣಿಸಿಕೊಂಡಿದೆ.

ಯುನಿಟ್ 8200 ಅಕ್ಟೋಬರ್ 7, 2023 ರಂದು ಇಸ್ರೇಲ್ ಮೇಲೆ ಹಮಾಸ್ ದಾಳಿಯನ್ನು ಪತ್ತೆಹಚ್ಚಲು ವಿಫಲವಾದ ಹಿನ್ನೆಲೆಯಲ್ಲಿ ಟೀಕೆಗಳನ್ನು ಎದುರಿಸಿತು. ಘಟಕದ ನ್ಯೂನತೆಗಳನ್ನು ಒಪ್ಪಿಕೊಂಡು ಅದರ ಕಮಾಂಡರ್ ರಾಜೀನಾಮೆ ನೀಡಿದ್ದರು.

ಅದೇನೇ ಇದ್ದರೂ, ಯುನಿಟ್ 8200 ಇಸ್ರೇಲ್‌ನ ರಕ್ಷಣಾ ವ್ಯವಸ್ಥೆಯ ಭಾಗವಾಗಿ ಉಳಿದಿದೆ, ಇದು ಸೈಬರ್ ವಾರ್‌ಫೇರ್‌ನ ನಿರಂತರವಾಗಿ ವಿಕಸನಗೊಳ್ಳುತ್ತಿರುವ ಕ್ಷೇತ್ರದಲ್ಲಿ ಹೊಸ ಸವಾಲುಗಳನ್ನು ಎದುರಿಸುತ್ತಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!