AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ಯೆ ಯತ್ನವೋ ಅಥವಾ ರಾಜಕೀಯ ಸ್ಕಿಟ್? ಅಮೆರಿಕ ಘಟನೆಯ ಸುತ್ತ ಹರಿದಾಡುತ್ತಿದೆ ಆಧಾರರಹಿತ ಊಹೆಗಳ ಮಹಾಪೂರ

ವಾಷಿಂಗ್ಟನ್‌ನಲ್ಲಿ ನಡೆದ ಗುಂಡಿನ ಘಟನೆಯು ಹತ್ಯೆ ಯತ್ನವೋ ಅಥವಾ ರಾಜಕೀಯ ನಾಟಕವೋ ಎಂಬ ಚರ್ಚೆ ಹುಟ್ಟುಹಾಕಿದೆ. ಸಾಮಾಜಿಕ ಮಾಧ್ಯಮದಲ್ಲಿ ಆಧಾರರಹಿತ ಊಹೆಗಳು ಮತ್ತು ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹರಿದಾಡುತ್ತಿವೆ. ಅಧಿಕೃತ ಮಾಹಿತಿ ಕಾಯುವ ಬದಲು, ಜನರು ಸಿದ್ಧಾಂತಗಳಿಗೆ ಮಾರುಹೋಗುತ್ತಿದ್ದಾರೆ. ಈ ಘಟನೆಯು ಆಧುನಿಕ ಮಾಹಿತಿ ಯುಗದಲ್ಲಿ ಸತ್ಯಾಂಶಗಳನ್ನು ದೃಢೀಕರಿಸುವ ಸವಾಲನ್ನು ಎತ್ತಿಹಿಡಿಯುತ್ತದೆ.

ಹತ್ಯೆ ಯತ್ನವೋ ಅಥವಾ ರಾಜಕೀಯ ಸ್ಕಿಟ್? ಅಮೆರಿಕ ಘಟನೆಯ ಸುತ್ತ ಹರಿದಾಡುತ್ತಿದೆ ಆಧಾರರಹಿತ ಊಹೆಗಳ ಮಹಾಪೂರ
ಡೊನಾಲ್ಡ್​ ಟ್ರಂಪ್ Image Credit source: India Today
ನಯನಾ ರಾಜೀವ್
|

Updated on: Apr 27, 2026 | 10:25 AM

Share

ವಾಷಿಂಗ್ಟನ್, ಏಪ್ರಿಲ್ 27: ಅಮೆರಿಕದ ಶ್ವೇತಭವನ(WhiteHouse)ದಲ್ಲಿ ನಡೆದ ವರದಿಗಾರರ ಔತಣಕೂಟದ ಹೊರಗೆ ಗುಂಡಿನ ಸದ್ದು ಕೇಳಿಬಂದ ಎರಡನೇ ನಿಮಿಷಗಳಲ್ಲಿ ಅಮೆರಿಕದಲ್ಲಿ ಎರಡು ವಿಧವಾದ ಚರ್ಚೆ ಆರಂಭಗೊಂಡಿತ್ತು. ಒಂದು ಕಡೆ ಭದ್ರತಾ ಲೋಪದ ಬಗ್ಗೆ ಆತಂಕ ವ್ಯಕ್ತವಾದರೆ, ಮತ್ತೊಂದು ಕಡೆ ಇದು ಅವರೇ ಸೃಷ್ಟಿಸಿದ ನಾಟಕ ಎಂಬ ಮಾತುಗಳು ಕೇಳಿಬಂದಿತ್ತು. ಸಾಮಾಜಿಕ ಮಾಧ್ಯಮದ ಬಳಕೆದಾರರು ಪ್ರತಿಯೊಂದು ಚಲನವಲನವನ್ನೂ ಸೂಕ್ಷ್ಮವಾಗಿ ಗಮನಿಸಲು ಆರಂಭಿಸಿದರು. ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಅವರ ಮುಖಭಾವದಿಂದ ಹಿಡಿದು, ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅವರನ್ನು ಅಧ್ಯಕ್ಷರಿಗಿಂತ ಮೊದಲು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದರ ಬಗ್ಗೆ ತೀವ್ರ ಚರ್ಚೆಗಳು ನಡೆದವು.

ಘಟನೆಗೆ ಕೆಲವೇ ಕ್ಷಣಗಳ ಮೊದಲು ಅಧ್ಯಕ್ಷರ ಜೊತೆಗಿದ್ದ ಪ್ರಸಿದ್ಧ ಮಾನಸಿಕ ತಜ್ಞ ಓಜ್ ಪರ್ಲ್‌ಮನ್ ಅವರ ಉಪಸ್ಥಿತಿಯೂ ಅನುಮಾನದ ಸುಳಿಗೆ ಸಿಲುಕಿತು. ಅವರು ಹಿಡಿದಿದ್ದ ಕಾಗದದ ತುಣುಕು ಏನೋ ರಹಸ್ಯ ಸಂಕೇತವಾಗಿತ್ತು ಎಂಬ ಸುಳ್ಳು ಸುದ್ದಿಗಳು ಹರಿದಾಡಿದವು.

ಆರೋಪಿ ಅಲೆನ್‌ನನ್ನು ಗುಂಡು ಹಾರಿಸದೆ ಜೀವಂತವಾಗಿ ಸೆರೆಹಿಡಿದಿದ್ದು ಹೇಗೆ ಎಂಬ ಪ್ರಶ್ನೆ ಆನ್‌ಲೈನ್‌ನಲ್ಲಿ ಕೇಳಿಬಂತು. ಆತನನ್ನು ಶರ್ಟ್ ಇಲ್ಲದ ಸ್ಥಿತಿಯಲ್ಲಿ ಬಂಧಿಸಿರುವ ಚಿತ್ರಗಳು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟವು. ಆತ ಕಮಲಾ ಹ್ಯಾರಿಸ್ ಅವರ ಪ್ರಚಾರಕ್ಕೆ ಸಣ್ಣ ದೇಣಿಗೆ ನೀಡಿದ್ದ ಎಂಬ ವರದಿಗಳು ರಿಪಬ್ಲಿಕನ್ ಬೆಂಬಲಿಗರಿಗೆ ಅಸ್ತ್ರವಾದರೆ, ಆತ ಯಾವ ಪಕ್ಷಕ್ಕೂ ಸೇರಿಲ್ಲ ಎಂಬ ಅಧಿಕೃತ ದಾಖಲೆಗಳು ಗೊಂದಲವನ್ನು ಮತ್ತಷ್ಟು ಹೆಚ್ಚಿಸಿದವು.

ಮತ್ತಷ್ಟು ಓದಿ: ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಭಾಷಣ ನಿಲ್ಲಿಸಿ ಬಂಕರ್‌ನತ್ತ ಓಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಕೆಲವು ರಾಜಕೀಯ ವಿಮರ್ಶಕರು ಈ ಘಟನೆಯನ್ನು ಬೇರೆ ಆಯಾಮದಲ್ಲಿ ನೋಡಿದರು. ಇರಾನ್ ಜೊತೆಗಿನ ಉದ್ವಿಗ್ನತೆಯಿಂದ ಜನರ ಗಮನ ಬೇರೆಡೆಗೆ ಸೆಳೆಯಲು ಈ ನಾಟಕವಾಡಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದವು. ಇನ್ನು ಕೆಲವರು, ಹಳೆಯ ಹಿಲ್ಟನ್ ಹೋಟೆಲ್ ಬದಲಿಗೆ ಶ್ವೇತಭವನದಲ್ಲಿ ಹೊಸದಾದ, ಸುರಕ್ಷಿತವಾದ ‘ಬಾಲ್ ರೂಂ’ ನಿರ್ಮಿಸುವ ಟ್ರಂಪ್ ಅವರ ದೀರ್ಘಕಾಲದ ಹಠಕ್ಕೆ ಈ ಘಟನೆ ಬಲ ನೀಡಲಿದೆ ಎಂದು ವಿಶ್ಲೇಷಿಸಿದರು.

ಅಧಿಕೃತ ಸಂಸ್ಥೆಗಳು ಮತ್ತು ಸುದ್ದಿಗಳಿಗಿಂತ ಸೋಶಿಯಲ್ ಮೀಡಿಯಾ ಊಹೆಗಳಿಗೆ ಜನ ಮಾರುಹೋಗುತ್ತಿದ್ದಾರೆ.ಒಂದೇ ಘಟನೆಯನ್ನು ಎರಡು ಪಕ್ಷಗಳು ತಮ್ಮ ಲಾಭಕ್ಕೆ ತಕ್ಕಂತೆ ವಿಶ್ಲೇಷಿಸುತ್ತಿವೆ. ಸತ್ಯಾಂಶಗಳು ದೃಢೀಕರಣಗೊಳ್ಳುವ ಮೊದಲೇ ಸುಳ್ಳು ಸುದ್ದಿಗಳು ಜಾಗತಿಕ ಮಟ್ಟದಲ್ಲಿ ತಲುಪುತ್ತಿವೆ.

ವಾಷಿಂಗ್ಟನ್‌ನ ಈ ಘಟನೆಯು ಕೇವಲ ಒಬ್ಬ ವ್ಯಕ್ತಿಯ ಹತ್ಯೆ ಯತ್ನವಾಗಿ ಉಳಿಯದೆ, ಆಧುನಿಕ ಜಗತ್ತಿನಲ್ಲಿ ಮಾಹಿತಿ ಮತ್ತು ಸಂವಹನವು ಎದುರಿಸುತ್ತಿರುವ ಅತಿದೊಡ್ಡ ಸವಾಲಾಗಿ ಪರಿಣಮಿಸಿದೆ. ಸತ್ಯಾಂಶಗಳಿಗಿಂತ ಸಿದ್ಧಾಂತಗಳೇ ಮೇಲುಗೈ ಸಾಧಿಸುತ್ತಿರುವ ಈ ಕಾಲದಲ್ಲಿ ಜಾಗರೂಕತೆ ಅತ್ಯಗತ್ಯ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ