AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವಂತ ಕಾಡುಪ್ರಾಣಿ ಮಾರಾಟ ನಿಷೇಧಿಸಿದ ವಿಶ್ವ ಆರೋಗ್ಯ ಸಂಸ್ಥೆ: ವುಹಾನ್​ ಪ್ರಕರಣದಿಂದ ಪಾಠ ಕಲಿಯಲು ಸಲಹೆ

ಸಾಂಪ್ರದಾಯಿಕ ಮಾರುಕಟ್ಟೆಗಳಲ್ಲಿ ಜೀವಂತ ಪ್ರಾಣಿಗಳನ್ನು ಹಿಡಿದಿಟ್ಟುಕೊಳ್ಳುವುದು, ಹತ್ಯೆ ಮಾಡುವುದು ಕಾರ್ಮಿಕರು ಮತ್ತು ಗ್ರಾಹಕರಿಗೆ ರೋಗಗಳ ಹರಡುವಿಕೆಗೆ ಅಪಾಯವನ್ನು ಉಂಟುಮಾಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗದರ್ಶಿ ಸೂತ್ರಗಳು ತಿಳಿಸಿದೆ.

ಜೀವಂತ ಕಾಡುಪ್ರಾಣಿ ಮಾರಾಟ ನಿಷೇಧಿಸಿದ ವಿಶ್ವ ಆರೋಗ್ಯ ಸಂಸ್ಥೆ: ವುಹಾನ್​ ಪ್ರಕರಣದಿಂದ ಪಾಠ ಕಲಿಯಲು ಸಲಹೆ
ವುಹಾನ್​ನ ಮಾರುಕಟ್ಟೆಯೊಂದರ ಚಿತ್ರಣ
guruganesh bhat
|

Updated on:Apr 13, 2021 | 4:05 PM

Share

ಜಿನೇವಾ: ಇನ್ಮುಂದೆ ಯಾವುದೇ ದೇಶದ ಪ್ರಾಣಿ ಮಾರುಕಟ್ಟೆಯಲ್ಲಿ ಜೀವಂತ ಕಾಡುಪ್ರಾಣಿಗಳನ್ನು (ಸಸ್ತನಿಗಳು) ಮಾರಾಟ ಮಾಡುವಂತಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ಚೀನಾದ ವುಹಾನ್​ನಲ್ಲಿ ಇಂಥದ್ದೇ ಜೀವಂತ ಪ್ರಾಣಿಗಳ ಮಾರುಕಟ್ಟೆಯಿಂದ ಹಾರುವ ಸಸ್ತನಿಗಳಾದ ಬಾವಲಿಗಳಿಂದ ಕೊರೊನಾ ಸೋಂಕು ಮನುಷ್ಯರಿಗೆ ಹರಡಿತು ಎಂಬುದು ಈವರೆಗೆ ಜಗತ್ತು ನಂಬಿಕೊಂಡಿರುವ ಸತ್ಯ. ಈ ಹಿನ್ನೆಲೆಯಲ್ಲಿಯೇ ಮುಂದಿನ ದಿನಗಳಲ್ಲಿ ಹುಟ್ಟಿಕೊಳ್ಳಬಹುದಾದ ಹೊಸ ಸೋಂಕು ಅಥವಾ ಕಾಯಿಲೆಗಳನ್ನು ಗಮನದಲ್ಲಿಟ್ಟುಕೊಂಡು ವಿಶ್ವ ಆರೋಗ್ಯ ಸಂಸ್ಥೆ ಈ ಸೂಚನೆ ನೀಡಿರುವುದಾಗಿ ತಿಳಿಸಿದೆ. ವಿಶ್ವಸಂಸ್ಥೆಯ ಆದೇಶದಲ್ಲಿ ‘ಸಸ್ತನಿ’ ಎಂಬ ಉಲ್ಲೇಖ ಇರುವುದನ್ನು ಗಮನಿಸಬೇಕು.

ದೊಡ್ಡ ಸಂಖ್ಯೆಯ ಜನಸಾಮಾನ್ಯರಿಗೆ ಆಹಾರ ಮತ್ತು ದೈನಂದಿನ ಅಗತ್ಯಗಳನ್ನು ಪೂರೈಸುವಲ್ಲಿ ಸಂತೆಯಂಥ ಸ್ಥಳೀಯ ಮಾರುಕಟ್ಟೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಅಂತಹ ಸ್ಥಳೀಯ ಮಾರುಕಟ್ಟೆಗಳಲ್ಲಿ ಕೆಲಸ ನಿರ್ವಹಿಸುವ ಜನರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಜೀವಂತ (ಸಸ್ತನಿ) ವನ್ಯಜೀವಿಗಳನ್ನು ಮಾರಬಾರದು ಎಂದು ಡಬ್ಲ್ಯುಎಚ್​ಓ ಸೂಚನೆ ನೀಡಿದೆ. ಕೊರೊನಾ ಸೋಂಕು ಮೊದಲು ಪತ್ತೆಯಾದ ಚೀನಾ ದೇಶದ ವುಹಾನ್​ನ ಮಾಂಸದ ಮಾರುಕಟ್ಟೆಯ ಉದಾಹರಣೆಯನ್ನು ಗಮನದಲ್ಲಿಟ್ಟುಕೊಂಡು ವಿಶ್ವ ಆರೋಗ್ಯ ಸಂಸ್ಥೆ ಈ ನಿರ್ಣಯ ಕೈಗೊಂಡಿದೆ.

ವುಹಾನ್ ನಗರದ ಮಾಂಸದಂಗಡಿಗಳ ಮಾಲೀಕರಲ್ಲಿ, ಕೆಲಸ ಮಾಡುವವರಲ್ಲಿ ಮತ್ತು ಕಾಯಂ ಗ್ರಾಹಕರಲ್ಲಿ ಕೊರೊನಾ ಸೋಂಕು ಮೊದಲು ಪತ್ತೆಯಾಗಿತ್ತು. ಅಲ್ಲಿಂದಲೇ ಕೊವಿಡ್ ವೈರಾಣು ಜಗತ್ತಿನಾದ್ಯಂತ ಪ್ರಸಾರವಾಗಿತ್ತು ಎಂದು ನಂಬಲಾಗಿದೆ. ಈ ಕುರಿತು ಮಧ್ಯಂತರ ನಿಯಮಾವಳಿಗಳನ್ನು ಹೊರಡಿಸಿರುವ ವಿಶ್ವ ಆರೋಗ್ಯ ಸಂಸ್ಥೆ, ಎಲ್ಲಾ ದೇಶಗಳಿಗೂ ಆಹಾರ ಮಾರುಕಟ್ಟೆಯಲ್ಲಿ ಜೀವಂತ ಸಸ್ತನಿಗಳ ಮಾರಾಟವನ್ನು ನಿಷೇಧಿಸಲು ಮನವಿ ಮಾಡಿದೆ. ಪ್ರಾಣಿಗಳು, ಅದರಲ್ಲೂ ವನ್ಯಜೀವಿಗಳು ಮನುಷ್ಯರಲ್ಲಿ ಉದ್ಭವಿಸುವ ಶೇ 70ರಷ್ಟು ಸೋಂಕುಗಳಿಗೆ ಮೂಲವಾಗಿವೆ. ಒಬ್ಬರಿಂದ ಒಬ್ಬರಿಗೆ ಹರಡುವ ಲಕ್ಷಣಗಳಿರುವ ಸೋಂಕುಗಳು ಪ್ರಾಣಿಜನ್ಯವಾಗಿರುತ್ತವೆ. ಮುಂದೆ ಹೊಸ ಕಾಯಿಲೆ ಅಥವಾ ರೋಗಗಳು ಹುಟ್ಟುವ ಅಪಾಯವೂ ಸಹ ಜೀವಂತ ಸಸ್ತನಿಗಳಿಂದ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಅಭಿಪ್ರಾಯಪಟ್ಟಿದೆ.

ಸಾಂಪ್ರದಾಯಿಕ ಮಾರುಕಟ್ಟೆಗಳಲ್ಲಿ ಜೀವಂತ ಪ್ರಾಣಿಗಳನ್ನು ಹಿಡಿದಿಟ್ಟುಕೊಳ್ಳುವುದು, ಹತ್ಯೆ ಮಾಡುವುದು ಕಾರ್ಮಿಕರು ಮತ್ತು ಗ್ರಾಹಕರಿಗೆ ರೋಗಗಳ ಹರಡುವಿಕೆಗೆ ಅಪಾಯವನ್ನು ಉಂಟುಮಾಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗದರ್ಶಿ ಸೂತ್ರಗಳು ತಿಳಿಸಿದೆ. ಇಷ್ಟೇ ಅಲ್ಲದೇ ಮುಂಜಾಗರೂಕತೆ ಮತ್ತು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಜೀವಂತ ವನ್ಯಜೀವಿಗಳನ್ನು ಮಾರುವ ಮಾರುಕಟ್ಟೆಗಳನ್ನು ಮುಚ್ಚಲು ಸಹ ವಿಶ್ವ ಆರೋಗ್ಯ ಸಂಸ್ಥೆ ಸೂಚಿಸಿದೆ.

ಭಾರತದಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಜಾರಿಯಲ್ಲಿರುವುದರಿಂದ ಯಾವುದೇ ಕಾಡುಪ್ರಾಣಿಗಳನ್ನು ಜೀವಂತ ಅಥವಾ ನಿರ್ಜೀವ ಸ್ಥಿತಿಯಲ್ಲಿ ಮಾರಾಟ ಮಾಡುವುದು, ಮಾಂಸ ಸೇವನೆ, ಕೊಲ್ಲುವುದು, ಬೇಟೆಯಾಡುವುದು, ಅದರ ಭಾಗಗಳನ್ನು ತುಂಡರಿಸುವುದು ಶಿಕ್ಷಾರ್ಹ ಅಪರಾಧವಾಗುತ್ತದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯು ಸಸ್ತನಿಗಳ ಜೊತೆಗೆ ಸರಿಸೃಪಗಳು, ಪಕ್ಷಿಗಳಿಗೂ ಅನ್ವಯಿಸುತ್ತದೆ.

ಇದನ್ನೂ ಓದಿ: ಕೊವಿಶೀಲ್ಡ್​, ಕೊವ್ಯಾಕ್ಸಿನ್​ ಜೊತೆಗೆ ಭಾರತದಲ್ಲಿ ಸಿಗಲಿದೆ ಸ್ಪುಟ್ನಿಕ್​-ವಿ ಕೊರೊನಾ ಲಸಿಕೆ; ಮೂರರಲ್ಲಿ ಯಾವುದು ಉತ್ತಮ?

ಕೊರೊನಾ ಹೆಚ್ಚಳ: ತಾಂತ್ರಿಕ ಸಲಹಾ ಸಮಿತಿಯಿಂದ ರಾಜ್ಯ ಸರ್ಕಾರಕ್ಕೆ 16 ಅಂಶಗಳ ಶಿಫಾರಸು

(WHO bans on sale of Wil Live Mammals to avoid new disease)

Published On - 4:04 pm, Tue, 13 April 21

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ