AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವೈರಾಣುವಿನ ಮೂಲ ಜಾಲಾಡಲು ಕೊನೆಗೂ ಚೀನಾಕ್ಕೆ ತೆರಳಲಿದೆ ವಿಶ್ವ ಆರೋಗ್ಯ ಸಂಸ್ಥೆ!

ಚೀನಾ ಇದುವರೆಗೂ ಅಂತಾರಾಷ್ಟ್ರೀಯ ಮಟ್ಟದ ನಿಯೋಗದ ಭೇಟಿಗೆ ಅನುಮತಿ ನೀಡದೇ ಇರುವುದು ಬೇಸರದ ಸಂಗತಿ. ಕೊರೊನಾ ವೈರಾಣುವಿನ ಮೂಲಕ್ಕೆ ಸಂಬಂಧಿಸಿದಂತೆ ತನಿಖೆ ಆಗಬೇಕಿದೆ ಎಂದು ಟೆಡ್ರೋಸ್​ ಅಧಾನೊಮ್​ ಗೆಬ್ರಿಯೆಸಸ್ ತಿಳಿಸಿದ್ದಾರೆ.

ಕೊರೊನಾ ವೈರಾಣುವಿನ ಮೂಲ ಜಾಲಾಡಲು ಕೊನೆಗೂ ಚೀನಾಕ್ಕೆ ತೆರಳಲಿದೆ ವಿಶ್ವ ಆರೋಗ್ಯ ಸಂಸ್ಥೆ!
WHO ಮಹಾನಿರ್ದೇಶಕ ಟೆಡ್ರೋಸ್​ ಅಧಾನೊಮ್​ ಗೆಬ್ರಿಯೆಸಸ್
Skanda
|

Updated on:Jan 09, 2021 | 11:13 AM

Share

ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರಂತೆ ಎಂಬಂತಾಗಿದೆ ಕೊರೊನಾ ವಿಷಯದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ನಡಾವಳಿಗಳು. ಕೊರನಾ ಚೀನಾದಲ್ಲಿ ಉದ್ಭವವಾಗಿ ಒಂದು ವರ್ಷಕ್ಕೂ ಹೆಚ್ಚು ಕಾಲವಾಗಿದ್ದು ಇದೀಗ ವಿಶ್ವ ಆರೋಗ್ಯ ಸಂಸ್ಥೆಯು ಕೊರೊನಾ ಉಗಮದ ಬಗ್ಗೆ ಅಧ್ಯಯನ ಮಾಡಲು ತನ್ನ ನಿಯೋಗವೊಂದನ್ನು ಕಳಿಸಲು ಚಿಂತಿಸುತ್ತಿದೆ!

ಕೊರೊನಾ ವೈರಾಣುವಿನ ಜನಕ ಎಂಬ ಅಪಖ್ಯಾತಿಗೆ ತುತ್ತಾಗಿರುವ ಚೀನಾಕ್ಕೆ ಅತಿ ಶೀಘ್ರದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ನಿಯೋಗ ಭೇಟಿ ನೀಡಲಿದೆ. ಈ ಬಗ್ಗೆ WHO ಮಹಾನಿರ್ದೇಶಕ ಟೆಡ್ರೋಸ್​ ಅಧಾನೊಮ್​ ಗೆಬ್ರಿಯೆಸಸ್ ಮಾಹಿತಿ ನೀಡಿದ್ದಾರೆ. ಕೊರೊನಾ ವೈರಾಣುವಿನ ಉಗಮಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲು ಚೀನಾಕ್ಕೆ ಅತಿ ಶೀಘ್ರದಲ್ಲಿ ತೆರಳುವುದಾಗಿ ಹೇಳಿದ್ದಾರೆ.

ಚೀನಾ ಇದುವರೆಗೂ ಅಂತಾರಾಷ್ಟ್ರೀಯ ಮಟ್ಟದ ನಿಯೋಗದ ಭೇಟಿಗೆ ಅನುಮತಿ ನೀಡದೇ ಇರುವುದು ಬೇಸರದ ಸಂಗತಿ. ಕೊರೊನಾ ವೈರಾಣುವಿನ ಮೂಲಕ್ಕೆ ಸಂಬಂಧಿಸಿದಂತೆ ತನಿಖೆ ಆಗಬೇಕಿದೆ. ಆದ್ದರಿಂದ ನಾವು ಇನ್ನೊಂದು ವಾರದಲ್ಲಿ ದಿನಾಂಕ ನಿಗದಿಪಡಿಸಲಿದ್ದೇವೆ ಎಂದು ಟೆಡ್ರೋಸ್​ ಅಧಾನೊಮ್​ ಗೆಬ್ರಿಯೆಸಸ್ ತಿಳಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ ಪರಿಶೀಲನೆ ನಡೆಸಿದರೆ ಎಲ್ಲಿ ತನ್ನ ಗುಟ್ಟು ರಟ್ಟಾಗಬಹುದೋ ಎಂಬ ಕಾರಣಕ್ಕೂ ಚೀನಾ ಅವರ ಭೇಟಿಯನ್ನು ಮುಂದೂಡುತ್ತಿರುವ ಸಾಧ್ಯತೆ ಇದೆ ಎಂಬ ವಿಶ್ಲೇಷಣೆಗಳು ಇದೇ ಹೊತ್ತಿನಲ್ಲಿ ಕೇಳಿಬರುತ್ತಿವೆ.

ಚೀನಾದಲ್ಲಿ ಮತ್ತೆ ಸೋಂಕಿನ ಭೀತಿ.. ಕಠಿಣ ನಿಯಮಗಳ ಜಾರಿಗೆ ಮುಂದಾದ ಚೀನಾ ಸರ್ಕಾರ

Published On - 11:09 am, Sat, 9 January 21

Follow Us
Skanda
Skanda
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ