AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sergio Gor: ಭಾರತಕ್ಕೆ ಅಮೆರಿಕದ ಹೊಸ ರಾಯಭಾರಿಯಾಗಿ ಆಪ್ತನನ್ನೇ ಆರಿಸಿದ ಡೊನಾಲ್ಡ್ ಟ್ರಂಪ್! ಯಾರು ಈ ಸೆರ್ಗಿಯೊ ಗೋರ್

Who Is Sergio Gor? ಡೊನಾಲ್ಡ್ ಟ್ರಂಪ್ ತಮ್ಮ ಆಪ್ತ ಸಲಹೆಗಾರ ಸೆರ್ಗಿಯೊ ಗೋರ್ ಅವರನ್ನು ಭಾರತದಲ್ಲಿನ ಮುಂದಿನ ಅಮೆರಿಕದ ರಾಯಭಾರಿಯಾಗಿ ಆಯ್ಕೆ ಮಾಡಿದ್ದಾರೆ. ಭಾರತ ಮತ್ತು ಅಮೆರಿಕದ ನಡುವೆ ಹೆಚ್ಚುತ್ತಿರುವ ವ್ಯಾಪಾರ ಭಿನ್ನಾಭಿಪ್ರಾಯಗಳ ನಡುವೆಯೇ ಈ ಘೋಷಣೆ ಮೂಡಿಬಂದಿದೆ. ಗೋರ್ ಅವರು ದಕ್ಷಿಣ ಮತ್ತು ಮಧ್ಯ ಏಷ್ಯಾ ವ್ಯವಹಾರಗಳ ವಿಶೇಷ ರಾಯಭಾರಿಯಾಗಿಯೂ ಕಾರ್ಯ ನಿರ್ವಹಿಸಲಿದ್ದಾರೆ.

Sergio Gor: ಭಾರತಕ್ಕೆ ಅಮೆರಿಕದ ಹೊಸ ರಾಯಭಾರಿಯಾಗಿ ಆಪ್ತನನ್ನೇ ಆರಿಸಿದ ಡೊನಾಲ್ಡ್ ಟ್ರಂಪ್! ಯಾರು ಈ ಸೆರ್ಗಿಯೊ ಗೋರ್
ಡೊನಾಲ್ಡ್ ಟ್ರಂಪ್ ಹಾಗೂ ಸೆರ್ಗಿಯೊ ಗೋರ್
ಗಣಪತಿ ಶರ್ಮಾ
|

Updated on:Aug 23, 2025 | 11:43 AM

Share

ವಾಷಿಂಗ್ಟನ್, ಆಗಸ್ಟ್ 23: ಹೆಚ್ಚುತ್ತಿರುವ ಭಿನ್ನಾಭಿಪ್ರಾಯಗಳು ಹಾಗೂ ಸುಂಕ ಸಮರದ ನಡುವೆಯೇ ಭಾರತಕ್ಕೆ ಅಮೆರಿಕದ ಮುಂದಿನ ರಾಯಭಾರಿಯಾಗಿ ಡೊನಾಲ್ಡ್ ಟ್ರಂಪ್ (Donald Trump) ಅತ್ಯಂತ ಆಪ್ತ, ಸದ್ಯ ಶ್ವೇತ ಭವನದಲ್ಲಿ ಟ್ರಂಪ್ ಸಲಹೆಗಾರರಾಗಿರುವ ಸೆರ್ಗಿಯೊ ಗೋರ್ (Sergio Gor) ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಹಿತಿ ನೀಡಿದ್ದು, ಸೆರ್ಗಿಯೊ ಗೋರ್ ಅವರು ಭಾರತಕ್ಕೆ ಮುಂದಿನ ಅಮೆರಿಕದ ರಾಯಭಾರಿ ಹಾಗೂ ದಕ್ಷಿಣ ಮತ್ತು ಮಧ್ಯ ಏಷ್ಯಾ ವ್ಯವಹಾರಗಳ ವಿಶೇಷ ರಾಯಭಾರಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ಸೆರ್ಗಿಯೊ ಗೋರ್ ಯಾರು?

ಡೊನಾಲ್ಡ್ ಟ್ರಂಪ್ ಅವರ ಅತ್ಯಂತ ಆಪ್ತರಲ್ಲೊಬ್ಬರು ಸೆರ್ಗಿಯೊ ಗೋರ್ ಪ್ರಸ್ತುತ ಶ್ವೇತಭವನದಲ್ಲಿ ಅಧ್ಯಕ್ಷೀಯ ಕಚೇರಿಯ ಮುಖ್ಯಸ್ಥರಾಗಿದ್ದು, ಟ್ರಂಪ್​ ಆಪ್ತ ಸಲಹೆಗಾರರೂ ಆಗಿದ್ದಾರೆ. ಖುದ್ದು ಡೊನಾಲ್ಡ್ ಟ್ರಂಪ್ ಅವರೇ, ಸೆರ್ಗಿಯೊ ಗೋರ್ ತಮ್ಮ ಅತ್ಯುತ್ತಮ ಸ್ನೇಹಿತ ಎಂದು ಹೇಳಿಕೊಂಡಿದ್ದಾರೆ. ಅಲ್ಲದೆ, ಸೆರ್ಗಿಯೊ ಗೋರ್ ಗುಣಗಾನ ಮಾಡಿದ್ದಾರೆ.

ಡೊನಾಲ್ಡ್ ಟ್ರಂಪ್ ಹೇಳಿದ್ದೇನು?

ಸೆರ್ಗಿಯೊ ಗೋರ್ ಅವರನ್ನು ಭಾರತಕ್ಕೆ ನಮ್ಮ ಮುಂದಿನ ಅಮೆರಿಕದ ರಾಯಭಾರಿಯಾಗಿ, ದಕ್ಷಿಣ ಮತ್ತು ಮಧ್ಯ ಏಷ್ಯಾ ವ್ಯವಹಾರಗಳ ವಿಶೇಷ ರಾಯಭಾರಿಯಾಗಿ ಬಡ್ತಿ ನೀಡಿ ಘೋಷಣೆ ಮಾಡುವುದಕ್ಕೆ ಸಂತೋಷವಾಗಿದೆ ಎಂದು ಡೊನಾಲ್ಡ್ ಟ್ರಂಪ್ ಸಾಮಾಜಿಕ ಮಾಧ್ಯಮ ಸಂದೇಶದಲ್ಲಿ ತಿಳಿಸಿದ್ದಾರೆ. ಪ್ರಸ್ತುತ ಭಾರತದಲ್ಲಿ ಅಮೆರಿಕದ ರಾಯಭಾರಿಯಾಗಿ ಎರಿಕ್ ಗಾರ್ಸೆಟ್ಟಿ ಇದ್ದು, ಅವರ ಬದಲಿಗೆ ಸೆರ್ಗಿಯೊ ಗೋರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಅಮೆರಿಕ ಸರ್ಕಾರದ ಅಧ್ಯಕ್ಷೀಯ ಸಿಬ್ಬಂದಿ ನಿರ್ದೇಶಕರಾಗಿ ಸೆರ್ಗಿಯೊ ಮತ್ತು ಅವರ ತಂಡವು ಸರ್ಕಾರದ ಪ್ರತಿಯೊಂದು ಇಲಾಖೆಯಲ್ಲಿ ದಾಖಲೆಯ ಸಮಯದಲ್ಲಿ ಸುಮಾರು 4000 ದೇಶಪ್ರೇಮಿಗಳನ್ನು ನೇಮಿಸಿದೆ ಎಂದು ಟ್ರಂಪ್ ಬಣ್ಣಿಸಿದ್ದಾರೆ. ಅಲ್ಲದೆ, ಶ್ವೇತಭವನಕ್ಕೆ ಸೆರ್ಗಿಯೊ ಗೋರ್ ನೀಡಿದ ಕೊಡುಗೆಗಳನ್ನು ಸ್ಮರಿಸಿದ್ದಾರೆ.

ಡೊನಾಲ್ಡ್ ಟ್ರಂಪ್ ಅಚ್ಚರಿಯ ಆಯ್ಕೆ

ಸದ್ಯ ಒಂದೆಡೆ ಭಾರತ ಮತ್ತು ಅಮೆರಿಕ ನಡುವಣ ಬಾಂಧವ್ಯ ಹಳಸುವತ್ತ ಸಾಗಿದೆ. ಆಪರೇಷನ್ ಸಿಂದೂರ್ ನಂತರ, ‘ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ’ ಎಂದು ಟ್ರಂಪ್ ಪದೇಪದೆ ಹೇಳಿಕೆ ನೀಡಿದ್ದರಿಂದ ತೊಡಗಿ ಸುಂಕ ಸಮರದ ವರೆಗೆ ಭಿನ್ನಾಭಿಪ್ರಾಯಗಳು ಹೆಚ್ಚಾಗಿವೆ. ಇಂಥ ಸಂದರ್ಭದಲ್ಲೇ ಟ್ರಂಪ್ ಅತ್ಯಾಪ್ತನನ್ನೇ ಭಾರತದ ರಾಯಭಾರಿಯಾಗಿ ನೇಮಿಸಿರುವುದು ಅಚ್ಚರಿಗೆ ಕಾರಣವಾಗಿದೆ. ಭಾರತ ಮತ್ತು ಏಷ್ಯಾ ಪ್ರದೇಶದಲ್ಲಿ ಅಮೆರಿಕದ ಕಾರ್ಯಸೂಚಿಯನ್ನು ಅನುಷ್ಠಾನಗೊಳಿಸುವಲ್ಲಿ ಸೆರ್ಗಿಯೊ ಗೋರ್ ಸಹಾಯ ಮಾಡುತ್ತಾರೆ ಎಂಬ ವಿಶ್ವಾಸ ಟ್ರಂಪ್​​ಗಿದೆ ಎನ್ನಲಾಗಿದೆ.

ಸದ್ಯದ ಮಟ್ಟಿಗೆ ಸೆರ್ಗಿಯೊ ಗೋರ್ ಅವರ ಹೆಸರನ್ನು ಟ್ರಂಪ್ ಘೋಷಿಸಿದ್ದರೂ ಸಹ, ಸೆನೆಟ್ ಅನುಮೋದನೆ ಇನ್ನಷ್ಟೇ ದೊರೆಯಬೇಕಿದೆ. ಸೆನೆಟ್ ಅನುಮೋದನೆ ಪಡೆಯುವವರೆಗೆ, ಗೋರ್ ಅವರ ಪ್ರಸ್ತುತ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:38 am, Sat, 23 August 25

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ