AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shahbaz Sharif ಇಮ್ರಾನ್ ಖಾನ್ ರಾಜೀನಾಮೆ ನೀಡಿದ ನಂತರ ಪಾಕ್ ಪ್ರಧಾನಿಯಾಗಲಿರುವ ಶಹಬಾಜ್ ಷರೀಫ್ ಯಾರು? ಇಲ್ಲಿದೆ ಪರಿಚಯ

ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಸಹೋದರ ಶಹಬಾಜ್ ಷರೀಫ್ ಅವರು ಆಗಸ್ಟ್ 2018 ರಿಂದ ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಪಾಕಿಸ್ತಾನ್ ಮುಸ್ಲಿಂ ಲೀಗ್-ಎನ್ (ಪಿಎಂಎಲ್-ಎನ್) ಅಧ್ಯಕ್ಷರು.

Shahbaz Sharif ಇಮ್ರಾನ್ ಖಾನ್ ರಾಜೀನಾಮೆ ನೀಡಿದ ನಂತರ ಪಾಕ್ ಪ್ರಧಾನಿಯಾಗಲಿರುವ ಶಹಬಾಜ್ ಷರೀಫ್ ಯಾರು? ಇಲ್ಲಿದೆ ಪರಿಚಯ
ಶಹಬಾಜ್ ಷರೀಫ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Mar 30, 2022 | 9:31 PM

Share

ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (PPP) ಅಧ್ಯಕ್ಷ ಬಿಲಾವಲ್ ಭುಟ್ಟೊ ಜರ್ದಾರಿ (Bilawal Bhutto Zardari) ಅವರು ಬುಧವಾರ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಇಮ್ರಾನ್ ಖಾನ್ (Imran Khan) “ಈಗ ಬಹುಮತವನ್ನು ಕಳೆದುಕೊಂಡಿರುವುದರಿಂದ” ವಿರೋಧ ಪಕ್ಷದ ನಾಯಕ ಶಹಬಾಜ್ ಷರೀಫ್ ಶೀಘ್ರದಲ್ಲೇ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ನಡೆಯಲಿರುವ ವಿಶ್ವಾಸ ಮತದ ಮುನ್ನ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಭುಟ್ಟೋ, ಮುತ್ತಹಿದಾ ಕ್ವಾಮಿ ಮೂವ್‌ಮೆಂಟ್-ಪಾಕಿಸ್ತಾನ (MQM-P) ವಿರೋಧ ಪಕ್ಷಗಳೊಂದಿಗೆ ಕೈಜೋಡಿಸಿ ಮತ್ತು ಅವರನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸಲು ಅವಿಶ್ವಾಸ ಮತದಲ್ಲಿ ಅವರನ್ನು ಬೆಂಬಲಿಸಲು ನಿರ್ಧರಿಸಿದ್ದಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು. ಗುರುವಾರವೇ ಮತದಾನ ನಡೆಯಬೇಕು ಎಂದಿದ್ದಾರೆ ಭುಟ್ಟೊ. ಖಾನ್ ಅವರ ಪ್ರಮುಖ ಸಂಸದೀಯ ಮಿತ್ರ, ಎಂಕ್ಯುಎಂನ ನಾಯಕ, ಖಾಲಿದ್ ಮಕ್ಬೂಲ್ ಸಿದ್ದಿಕಿ ಅವರು ಎರಡು ಪಕ್ಷಗಳ ನಡುವಿನ ಲಿಖಿತ ಒಪ್ಪಂದದ ನಂತರ ಖಾನ್ ಅವರನ್ನು ಪದಚ್ಯುತಗೊಳಿಸಲು ತಮ್ಮ ಪಕ್ಷವನ್ನು ಸೇರುತ್ತಿದ್ದಾರೆ ಎಂದು ಘೋಷಿಸಿದರು. ಇಮ್ರಾನ್ ಖಾನ್ ಈಗ ಬಹುಮತ ಕಳೆದುಕೊಂಡಿದ್ದಾರೆ. ಅವರು ಇನ್ನು ಮುಂದೆ ಪ್ರಧಾನಿ ಅಲ್ಲ. ನಾಳೆ ಸಂಸತ್ ಅಧಿವೇಶನ. ನಾಳೆ ಮತದಾನ ಮಾಡಿ ಈ ವಿಷಯವನ್ನು ಇತ್ಯರ್ಥಗೊಳಿಸೋಣ. ನಂತರ ನಾವು ಪಾರದರ್ಶಕ ಚುನಾವಣೆಗಳಲ್ಲಿ ಕೆಲಸ ಮಾಡಲು ಪ್ರಾರಂಭಿಸಬಹುದು ಮತ್ತು ಪ್ರಜಾಪ್ರಭುತ್ವದ ಮರುಸ್ಥಾಪನೆ ಮತ್ತು ಆರ್ಥಿಕ ಬಿಕ್ಕಟ್ಟಿನ ಅಂತ್ಯದ ಕಡೆಗೆ ಪ್ರಯಾಣವನ್ನು ಪ್ರಾರಂಭಿಸಬಹುದು ಎಂದು ಪಿಪಿಪಿ ಅಧ್ಯಕ್ಷರು ಹೇಳಿದ್ದಾರೆ. ಪಾಕಿಸ್ತಾನ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡುವಂತೆ ಷರೀಫ್ ಸವಾಲು ಹಾಕಿದ್ದಾರೆ ಎಂದು ಪಿಪಿಪಿ ಅಧ್ಯಕ್ಷರು ತಿಳಿಸಿದ್ದಾರೆ.

ಶಹಬಾಜ್ ಷರೀಫ್ ಯಾರು? ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಸಹೋದರ ಶಹಬಾಜ್ ಷರೀಫ್ ಅವರು ಆಗಸ್ಟ್ 2018 ರಿಂದ ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಪಾಕಿಸ್ತಾನ್ ಮುಸ್ಲಿಂ ಲೀಗ್-ಎನ್ (ಪಿಎಂಎಲ್-ಎನ್) ಅಧ್ಯಕ್ಷರು. ಈ ಹಿಂದೆ ಪಂಜಾಬ್‌ನ ಮುಖ್ಯಮಂತ್ರಿಯಾಗಿ ಮೂರು ಬಾರಿ ಸೇವೆ ಸಲ್ಲಿಸಿದ್ದಾರೆ. ಅವರು ಪ್ರಾಂತ್ಯದ ಸುದೀರ್ಘ ಅವಧಿಯ ಮುಖ್ಯಮಂತ್ರಿಯಾಗಿದ್ದಾರೆ.

ಅವರು 1988 ರಲ್ಲಿ ಪಂಜಾಬ್ ಪ್ರಾಂತೀಯ ಅಸೆಂಬ್ಲಿಗೆ ಮತ್ತು 1990 ರಲ್ಲಿ ರಾಷ್ಟ್ರೀಯ ಅಸೆಂಬ್ಲಿಗೆ ಚುನಾಯಿತರಾದರು. ಅವರು ಮತ್ತೆ 1993 ರಲ್ಲಿ ಪಂಜಾಬ್ ಅಸೆಂಬ್ಲಿಗೆ ಆಯ್ಕೆಯಾದರು ಮತ್ತು ವಿರೋಧ ಪಕ್ಷದ ನಾಯಕರಾಗಿ ನೇಮಕಗೊಂಡರು. 1997ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾದರು. 1999 ರಲ್ಲಿ ಮಿಲಿಟರಿ ದಂಗೆಯ ನಂತರ ಸರ್ಕಾರವನ್ನು ಪದಚ್ಯುತಗೊಳಿಸಿದ ನಂತರ, ಶೆಹಬಾಜ್ ತನ್ನ ಕುಟುಂಬದೊಂದಿಗೆ ಸೌದಿ ಅರೇಬಿಯಾದಲ್ಲಿ ಸ್ವಯಂ ಗಡಿಪಾರು ಆಗಿದ್ದು 2007 ರಲ್ಲಿ ಪಾಕಿಸ್ತಾನಕ್ಕೆ ಮರಳಿದರು. 2008 ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಾಂತ್ಯದಲ್ಲಿ ಪಿಎಂಎಲ್- ಎನ್ ನ ಗೆಲುವು ನಂತರ ಅವರನ್ನು ಎರಡನೇ ಅವಧಿಗೆ ಪಂಜಾಬ್‌ನ ಸಿಎಂ ಆಗಿ ನೇಮಿಸಲಾಯಿತು.

ಅವರು 2013 ರಲ್ಲಿ ಮೂರನೇ ಬಾರಿಗೆ ಪಂಜಾಬ್‌ನ ಸಿಎಂ ಆಗಿ ಆಯ್ಕೆಯಾದರು ಮತ್ತು 2018 ರ ಸಾರ್ವತ್ರಿಕ ಚುನಾವಣೆಯಲ್ಲಿ ಅವರ ಪಕ್ಷದ ಸೋಲಿನವರೆಗೂ ಅವರ ಅವಧಿಯನ್ನು ಪೂರೈಸಿದರು. ಅವರ ಸಹೋದರ ನವಾಜ್ ಷರೀಫ್ ಅವರನ್ನು ಅಧಿಕಾರದಿಂದ ಅನರ್ಹಗೊಳಿಸಿದ ನಂತರ ಅವರನ್ನು ಪಿಎಂಎಲ್-ಎನ್ ಅಧ್ಯಕ್ಷರಾಗಿ ನಾಮನಿರ್ದೇಶನ ಮಾಡಲಾಯಿತು. 2018 ರ ಚುನಾವಣೆಯ ನಂತರ ಅವರು ವಿರೋಧ ಪಕ್ಷದ ನಾಯಕರಾಗಿ ನಾಮನಿರ್ದೇಶನಗೊಂಡರು.

ಮಾರ್ಚ್ 28 ರಂದು ಶಹಬಾಜ್, ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಮಂಡಿಸಿದರು.

ಅಕ್ರಮ ಹಣ ವರ್ಗಾವಣೆ ಪ್ರಕರಣ ಡಿಸೆಂಬರ್ 2019 ರಲ್ಲಿ ನ್ಯಾಷನಲ್ ಅಕೌಂಟೆಬಿಲಿಟಿ ಬ್ಯೂರೋ (ಎನ್‌ಎಬಿ) ಶೆಹಬಾಜ್ ಮತ್ತು ಅವರ ಮಗ ಹಮ್ಜಾ ಷರೀಫ್ ಅವರ 23 ಆಸ್ತಿಗಳನ್ನು ವಶಪಡಿಸಿಕೊಂಡಿದೆ. ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪ ಇವರ ಮೇಲಿದೆ. ಸೆಪ್ಟೆಂಬರ್ 2020 ರಲ್ಲಿ ಎನ್‌ಎಬಿ ಲಾಹೋರ್ ಉಚ್ಚ ನ್ಯಾಯಾಲಯದಲ್ಲಿ ಶಹಬಾಜ್ ಅವರನ್ನು ಬಂಧಿಸಿತು ಮತ್ತು ಹಣ ವರ್ಗಾವಣೆಯ ಆರೋಪದ ಮೇಲೆ ಅವರನ್ನು ದೋಷಾರೋಪಣೆ ಮಾಡಿತು. ಕಳೆದ ವರ್ಷ ಏಪ್ರಿಲ್‌ನಲ್ಲಿ ಲಾಹೋರ್ ಹೈಕೋರ್ಟ್ ಅಕ್ರಮ ಹಣ ವ್ಯವಹಾರ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡಿತ್ತು.

ಇದನ್ನೂ ಓದಿ: Imran Khan ಇಮ್ರಾನ್ ಖಾನ್ ರಾಷ್ಟ್ರವನ್ನುದ್ದೇಶಿಸಿ ಮಾಡಲಿದ್ದ ಭಾಷಣ ರದ್ದು; ಶಹಬಾಜ್ ಷರೀಫ್ ಪಾಕಿಸ್ತಾನದ ಪ್ರಧಾನಿಯಾಗಲಿದ್ದಾರೆ ಎಂದ ಬಿಲಾವಲ್ ಭುಟ್ಟೋ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್