AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೊಬೆಲ್ ಪ್ರಶಸ್ತಿ ಪಡೆದ ದಕ್ಷಿಣ ಕೊರಿಯಾದ ಲೇಖಕಿ ಹಾನ್ ಕಾಂಗ್ ಯಾರು?

ದಕ್ಷಿಣ ಕೊರಿಯಾದ ಲೇಖಕಿ ಹಾನ್ ಕಾಂಗ್ ಅವರಿಗೆ ಇಂದು (ಅಕ್ಟೋಬರ್ 10) ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ನೊಬೆಲ್ ಪ್ರಶಸ್ತಿಯನ್ನು ನೀಡಲಾಯಿತು. ಕವಯಿತ್ರಿಯಾಗಿದ್ದ ಹಾನ್ ಕಾಂಗ್ ಬಳಿಕ ಕಾದಂಬರಿಗಾರ್ತಿಯಾದರು. ಹಲವು ಕಥಾ ಸಂಕಲಗಳನ್ನು ಹೊರತಂದಿರುವ ಇವರು ಸಾಹಿತ್ಯ ಕ್ಷೇತ್ರದಲ್ಲಿ ಇತ್ತೀಚೆಗೆ ಬಹಳ ಹೆಸರು ಮಾಡುತ್ತಿದ್ದಾರೆ.

ನೊಬೆಲ್ ಪ್ರಶಸ್ತಿ ಪಡೆದ ದಕ್ಷಿಣ ಕೊರಿಯಾದ ಲೇಖಕಿ ಹಾನ್ ಕಾಂಗ್ ಯಾರು?
ಹಾನ್ ಕಾಂಗ್‌
ಸುಷ್ಮಾ ಚಕ್ರೆ
|

Updated on: Oct 10, 2024 | 6:32 PM

Share

ನವದೆಹಲಿ: ನೊಬೆಲ್ ಪ್ರಶಸ್ತಿಗೆ ಭಾಜನರಾಗಿರುವ ದಕ್ಷಿಣ ಕೊರಿಯಾದ ಸಾಹಿತಿ ಹಾನ್ ಕಾಂಗ್ ಸಾಹಿತ್ಯಿಕ ಹಿನ್ನೆಲೆಯಿರುವ ಕುಟುಂಬದಲ್ಲೇ ಹುಟ್ಟಿದವರು. ನೊಬೆಲ್ ಗೌರವವನ್ನು ಪಡೆದ ಕೊರಿಯಾದ ಮೊದಲ ಲೇಖಕಿ ಮತ್ತು 18ನೇ ಮಹಿಳೆಯಾಗಿದ್ದಾರೆ. 2016ರಲ್ಲಿ ಅವರು ತಮ್ಮ ಕಾದಂಬರಿ ದಿ ವೆಜಿಟೇರಿಯನ್‌ಗಾಗಿ ಮ್ಯಾನ್ ಬೂಕರ್ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿದ್ದರು. ಆ ಪ್ರಶಸ್ತಿಯನ್ನು ಗೆದ್ದ ಮೊದಲ ಕೊರಿಯನ್ ಎಂಬ ಹೆಗ್ಗಳಿಕೆ ಅವರದ್ದು.

1970ರಲ್ಲಿ ದಕ್ಷಿಣ ಕೊರಿಯಾದ ಗ್ವಾಂಗ್ಜುದಲ್ಲಿ ಜನಿಸಿದ ಹಾನ್ ಕಾಂಗ್ ಅವರ ತಂದೆ ಹೆಸರಾಂತ ಕಾದಂಬರಿಕಾರರು. ಹಾನ್ ಕಾಂಗ್ 1993ರಲ್ಲಿ ಮುನ್ಹಕ್-ಗ್ವಾ-ಸಾಹೋ (ಸಾಹಿತ್ಯ ಮತ್ತು ಸಮಾಜ) ಚಳಿಗಾಲದ ಸಂಚಿಕೆಯಲ್ಲಿ “ವಿಂಟರ್ ಇನ್ ಸಿಯೋಲ್” ಸೇರಿದಂತೆ ಐದು ಕವನಗಳನ್ನು ಪ್ರಕಟಿಸುವ ಮೂಲಕ ಕವಯಿತ್ರಿಯಾಗಿ ತಮ್ಮ ಸಾಹಿತ್ಯಿಕ ಪ್ರವೇಶ ಮಾಡಿದರು. ನಂತರ ಅವರು ಕಾದಂಬರಿಕಾರರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಬಳಿಕ 1995ರಲ್ಲಿ Yeosu (ಮುಂಜಿ ಪಬ್ಲಿಷಿಂಗ್ ಕಂಪನಿ) ಎಂಬ ಶೀರ್ಷಿಕೆಯ ತನ್ನ ಮೊದಲ ಸಣ್ಣ ಕಥಾ ಸಂಕಲನವನ್ನು ಪ್ರಕಟಿಸಿದರು. ಅವರು ಆರ್ಟ್ಸ್ ಕೌನ್ಸಿಲ್ ಕೊರಿಯಾದ ಬೆಂಬಲದೊಂದಿಗೆ 1998ರಲ್ಲಿ 3 ತಿಂಗಳ ಕಾಲ ಅಯೋವಾ ವಿಶ್ವವಿದ್ಯಾನಿಲಯ ಅಂತಾರಾಷ್ಟ್ರೀಯ ಬರವಣಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಇದನ್ನೂ ಓದಿ: ರಸಾಯನಶಾಸ್ತ್ರದಲ್ಲಿ ಡೇವಿಡ್ ಬೇಕರ್ , ಡೆಮಿಸ್ ಹಸ್ಸಾಬಿಸ್, ಜಾನ್ ಎಂ. ಜಂಪರ್​​ಗೆ ನೊಬೆಲ್ ಪ್ರಶಸ್ತಿ

ಈ ಬಹುಮಾನವನ್ನು 53 ವರ್ಷದ ಹಾನ್ ಕಾಂಗ್‌ಗೆ ಸ್ವೀಡಿಷ್ ಅಕಾಡೆಮಿ ನೀಡಿತು. ಅವರ ಇತ್ತೀಚಿನ ಕಾದಂಬರಿ ‘ಐ ಡೋ ನಾಟ್ ಬಿಡ್ ಫೇರ್‌ವೆಲ್’ಗೆ 2023ರಲ್ಲಿ ಫ್ರಾನ್ಸ್‌ನಲ್ಲಿ ಮೆಡಿಸಿಸ್ ಪ್ರಶಸ್ತಿ ಮತ್ತು 2024ರಲ್ಲಿ ಎಮಿಲ್ ಗೈಮೆಟ್ ಪ್ರಶಸ್ತಿಯನ್ನು ನೀಡಲಾಯಿತು.

ಹಾನ್ ಕಾಂಗ್ 2016ರಲ್ಲಿ ‘ದಿ ವೆಜಿಟೇರಿಯನ್’ಗಾಗಿ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಪಡೆದರು. ಮಾಂಸಾಹಾರವನ್ನು ತಿನ್ನುವುದನ್ನು ನಿಲ್ಲಿಸುವ ಮಹಿಳೆಯ ನಿರ್ಧಾರವು ವಿನಾಶಕಾರಿ ಪರಿಣಾಮಗಳನ್ನು ಉಂಟುಮಾಡುವ ಕತೆಯುಳ್ಳ ಕಾದಂಬರಿ ಇದಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ವಿಜಯಲಕ್ಷ್ಮೀ ದರ್ಶನ್ಗೆ ಸಿನಿಮಾ ತೋರಿಸೋಕೆ ರೆಡಿ’; ‘ಬಾಸ್’ ನಿರ್ದೇಶಕ
‘ವಿಜಯಲಕ್ಷ್ಮೀ ದರ್ಶನ್ಗೆ ಸಿನಿಮಾ ತೋರಿಸೋಕೆ ರೆಡಿ’; ‘ಬಾಸ್’ ನಿರ್ದೇಶಕ
ಪೂಜೆ, ಪುನಸ್ಕಾರ ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತವಾ?
ಪೂಜೆ, ಪುನಸ್ಕಾರ ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತವಾ?
ಸುಬ್ರಹ್ಮಣ್ಯನ ಲಹರಿ ಇರುವ ಇಂದಿನ ದಿನ ಭವಿಷ್ಯ ಹೇಗಿದೆ ನೋಡಿ
ಸುಬ್ರಹ್ಮಣ್ಯನ ಲಹರಿ ಇರುವ ಇಂದಿನ ದಿನ ಭವಿಷ್ಯ ಹೇಗಿದೆ ನೋಡಿ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!