AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಾಯಿತಿ ಬೆಲೆಯಲ್ಲಿ ರಷ್ಯಾ ತೈಲ ಮಾರಾಟ ಮಾಡಲು ಕಾರಣವೇನು?

ರಷ್ಯಾ ಮತ್ತು ಉಕ್ರೇನ್​ಗಳ ನಡುವಿನ ಯುದ್ಧದಿಂದ ಈಗಾಗಲೇ ಅನೇಕ ರಾಷ್ಟ್ರಗಳ ವಿರೋಧ ಕಟ್ಟಿಕೊಂಡಿರುವ ರಷ್ಯಾ ಇದೀಗ ಕಡಿಮೆ ಬೆಲೆಯಲ್ಲಿ ತೈಲ ಪೂರೈಕೆ ಮಾಡಲು ಮುಂದಾಗಿರಲು ಕಾರಣವೇನು?

ರಿಯಾಯಿತಿ ಬೆಲೆಯಲ್ಲಿ ರಷ್ಯಾ ತೈಲ ಮಾರಾಟ ಮಾಡಲು ಕಾರಣವೇನು?
ರಷ್ಯಾ ಅಧ್ಯಕ್ಷ
TV9 Web
| Edited By: |

Updated on: Mar 16, 2022 | 4:16 PM

Share

ನವದೆಹಲಿ: ರಷ್ಯಾದ ಮೇಲೆ ಆರ್ಥಿಕ ನಿರ್ಬಂಧಗಳ ಸುರಿಮಳೆಯ ಮೂಲಕ ರಷ್ಯಾವನ್ನು (Russia) ಪ್ರತ್ಯೇಕಿಸಲು ಅಮೆರಿಕಾ (United States)  ಮತ್ತು ಇಂಗ್ಲೆಂಡ್ ಸೇರಿದಂತೆ ಅನೇಕ ರಾಷ್ಟ್ರಗಳ ಪ್ರಯತ್ನಗಳ ಮಧ್ಯೆ ರಷ್ಯಾ ತೈಲ ಮತ್ತು ಇತರ ಸರಕುಗಳನ್ನು ಭಾರೀ ರಿಯಾಯಿತಿಯಲ್ಲಿ ನೀಡುತ್ತಿದೆ. ಫೆಬ್ರವರಿಯಲ್ಲಿ ವ್ಲಾಡಿಮಿರ್ ಪುಟಿನ್ ಉಕ್ರೇನ್ ಮೇಲೆ ಆಕ್ರಮಣ ನಡೆಸಲು ತನ್ನ ದೇಶದ ಸೇನೆಗೆ ಆದೇಶ ನೀಡಿದ ಬೆನ್ನಲ್ಲೇ ಇದೀಗ ಇತರೆ ದೇಶಗಳಿಗೆ ಅಗ್ಗದ ಬೆಲೆಯಲ್ಲಿ ರಷ್ಯಾ ತೈಲ ಪೂರೈಕೆ ಮಾಡುತ್ತಿದೆ. ಈ ರಿಯಾಯಿತಿಯಲ್ಲಿ ಕಚ್ಚಾ ತೈಲ ನೀಡುವ ರಷ್ಯಾದ ಪ್ರಸ್ತಾಪವನ್ನು ಭಾರತ ಕೂಡ ಸ್ವೀಕರಿಸಬಹುದು. ಅಂದಹಾಗೆ, ರಷ್ಯಾ ಮತ್ತು ಉಕ್ರೇನ್​ಗಳ ನಡುವಿನ ಯುದ್ಧದಿಂದ ಈಗಾಗಲೇ ಅನೇಕ ರಾಷ್ಟ್ರಗಳ ವಿರೋಧ ಕಟ್ಟಿಕೊಂಡಿರುವ ರಷ್ಯಾ ಇದೀಗ ಕಡಿಮೆ ಬೆಲೆಯಲ್ಲಿ ತೈಲ ಪೂರೈಕೆ ಮಾಡಲು ಮುಂದಾಗಿರಲು ಕಾರಣವೇನು? ಎಂಬ ಕುತೂಹಲ ಮೂಡುವುದು ಸಹಜ. ಆ ಕುರಿತು ಮಾಹಿತಿ ಇಲ್ಲಿದೆ.

  1. ಉಕ್ರೇನ್‌ನಲ್ಲಿ ರಷ್ಯಾ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ಮುಂದುವರೆಸುತ್ತಿದ್ದಂತೆ ಅಮೆರಿಕಾದ ಅಧ್ಯಕ್ಷ ಜೋ ಬೈಡೆನ್ ಮಾಸ್ಕೋವನ್ನು ಜಾಗತಿಕ ಆರ್ಥಿಕ ಪರಿಯಾ ಟ್ಯಾಗ್‌ನೊಂದಿಗೆ ಮೂಲೆಗುಂಪು ಮಾಡುವ ಸಲುವಾಗಿ ಆಮದು ಮಾಡಿಕೊಂಡ ರಷ್ಯಾದ ತೈಲದ ಮೇಲೆ ಅಮೆರಿಕದಲ್ಲಿ ನಿಷೇಧವನ್ನು ಘೋಷಿಸಿದರು.
  2. ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಉಕ್ರೇನ್‌ನೊಂದಿಗಿನ ಸಂಘರ್ಷದ ವಿರುದ್ಧ ಪ್ರತಿಭಟಿಸಿ ರಷ್ಯಾದ ವಿರುದ್ಧ ಅಂತಾರಾಷ್ಟ್ರೀಯ ಒಕ್ಕೂಟವನ್ನು ನಿರ್ಮಿಸಲು ಮತ್ತು ಅದರ ತೈಲ ಮತ್ತು ಅನಿಲ ರಫ್ತುಗಳ ಮೇಲಿನ ಅವಲಂಬನೆಯನ್ನು ದೂರವಿಡುವ ಉದ್ದೇಶವನ್ನು ಘೋಷಿಸಿದ್ದರು.
  3. ಇದರ ನಡುವೆ ರಿಯಾಯಿತಿ ದರದಲ್ಲಿ ಕಚ್ಚಾ ತೈಲದ ರಷ್ಯಾದ ಪ್ರಸ್ತಾಪವನ್ನು ಭಾರತ ಪರಿಗಣಿಸುವುದು ಅಮೆರಿಕದ ನಿರ್ಬಂಧಗಳ ಉಲ್ಲಂಘನೆಯಾಗುವುದಿಲ್ಲ ಎಂದು ಅಮೆರಿಕ ಹೇಳಿದೆ.
  4. ಇನ್ನೊಂದೆಡೆ ರಷ್ಯಾದ ತೈಲವನ್ನು ರಿಯಾಯಿತಿ ದರದಲ್ಲಿ ಖರೀದಿಸಲು ಭಾರತ ಚಿಂತನೆ ನಡೆಸುತ್ತಿದೆ ಎಂಬ ವರದಿಗಳ ಬಗ್ಗೆ ಭಾರತೀಯ- ಅಮೆರಿಕನ್ ಕಾಂಗ್ರೆಸ್ ಸದಸ್ಯ ಡಾ. ಅಮಿ ಬೆರಾ ಬೇಸರ ವ್ಯಕ್ತಪಡಿಸಿದ್ದಾರೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಮತ್ತು ಕ್ವಾಡ್‌ನ ನಾಯಕನಾಗಿ, ಪುಟಿನ್ ಮತ್ತು ಅವರ ಆಕ್ರಮಣವನ್ನು ನೇರವಾಗಿ ಅಥವಾ ಪರೋಕ್ಷವಾಗಿ ಬೆಂಬಲಿಸುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸುವ ಜವಾಬ್ದಾರಿ ಭಾರತದ್ದಾಗಿದೆ ಎಂದು ಅವರು ಹೇಳಿದ್ದಾರೆ.
  5. ರಷ್ಯಾದ ತೈಲ ರಫ್ತಿನ ಒಂದು ಸಣ್ಣ ಪಾಲನ್ನು ಅಮೆರಿಕಾ ಆಮದು ಮಾಡಿಕೊಳ್ಳುವುದರಿಂದ ಮತ್ತು ಅದರ ಯಾವುದೇ ನೈಸರ್ಗಿಕ ಅನಿಲವನ್ನು ಖರೀದಿಸುವುದಿಲ್ಲವಾದ್ದರಿಂದ ರಷ್ಯಾದ ಮೇಲೆ ಅಮೆರಿಕಾದ ವ್ಯವಹಾರದ ಪ್ರಭಾವವು ಕಡಿಮೆ ಇರುತ್ತದೆ.
  6. ಹೋಂ ಹೀಟಿಂಗ್, ವಿದ್ಯುತ್ ಮತ್ತು ಉದ್ಯಮದ ಬಳಕೆಗಾಗಿ ಯುರೋಪ್​ನ ನೈಸರ್ಗಿಕ ಅನಿಲದ ಸುಮಾರು ಶೇ. 40ರಷ್ಟನ್ನು ರಷ್ಯಾ ಒದಗಿಸುತ್ತದೆ ಮತ್ತು ಯುರೋಪ್​ನ ತೈಲದ ಕಾಲು ಭಾಗವನ್ನು ರಷ್ಯಾ ಪೂರೈಕೆ ಮಾಡುತ್ತದೆ.
  7. ಸೌದಿ ಅರೇಬಿಯಾದ ನಂತರ ವಿಶ್ವದ ಎರಡನೇ ಅತಿದೊಡ್ಡ ಕಚ್ಚಾ ತೈಲ ರಫ್ತುದಾರ ದೇಶವಾಗಿರುವ ರಷ್ಯಾ ಚೀನಾ ಅಥವಾ ಭಾರತ ಸೇರಿದಂತೆ ಬೇರೆ ಕಡೆಗಳಲ್ಲಿ ತೈಲವನ್ನು ಮಾರಾಟ ಮಾಡಬಹುದು. ಅಸೋಸಿಯೇಟೆಡ್ ಪ್ರೆಸ್ ವರದಿಯ ಪ್ರಕಾರ, ಕಡಿಮೆ ಖರೀದಿದಾರರು ರಷ್ಯಾದ ತೈಲವನ್ನು ಸ್ವೀಕರಿಸುತ್ತಿರುವ ಕಾರಣ ರಷ್ಯಾ ತೈಲವನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡಬೇಕಾಗಬಹುದು.
  8. ರಾಯಿಟರ್ಸ್‌ನ ವರದಿಯ ಪ್ರಕಾರ, ಶೇ. 80ರಷ್ಟು ತೈಲವನ್ನು ಬೇರೆ ದೇಶಗಳಿಂದ ಆಮದು ಮಾಡಿಕೊಳ್ಳುವ ಭಾರತವು ಸಾಮಾನ್ಯವಾಗಿ ರಷ್ಯಾದಿಂದ ಕೇವಲ ಶೇ. 2-3ರಷ್ಟು ತೈಲವನ್ನು ಮಾತ್ರ ಖರೀದಿಸುತ್ತದೆ. ಆದರೆ ಈ ವರ್ಷ ಇಲ್ಲಿಯವರೆಗೆ ತೈಲ ಬೆಲೆಗಳು ಶೇ. 40ರಷ್ಟು ಏರಿಕೆಯಾಗಿರುವುದರಿಂದ, ಏರುತ್ತಿರುವ ಇಂಧನ ಬಿಲ್ ಅನ್ನು ಕಡಿಮೆ ಮಾಡಲು ತೈಲದ ಆಮದನ್ನು ಭಾರತ ಹೆಚ್ಚಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ರಷ್ಯಾ-ಉಕ್ರೇನ್​ ಯುದ್ಧದಲ್ಲಿ ಅಫ್ಘಾನಿಸ್ತಾನವನ್ನು ಮರೆಯಬೇಡಿ, ಅದು ಅಪಾಯಕ್ಕೆ ಕಾರಣವಾಗಬಹುದು: ವಿಶ್ವಸಂಸ್ಥೆ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ