AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಸಂಶೋಧನೆ: ಹೀಗೆ ಮಾಡುವುದರಿಂದ ಕೊರೊನಾ ವೇಗವಾಗಿ ಹರಡುತ್ತದೆ!

ಹುಟ್ಟುಹಬ್ಬದ ಆಚರಣೆ ಸಮಯದಲ್ಲಿ ಜನ್ಮದಿನದ ಶುಭಾಶಯಗಳು ಹಾಡನ್ನು ಹಾಡುವುದರಿಂದ ಕೊರೊನಾ ವೈರಸ್​ ಬಹು ಬೇಗನೆ ಹರಡುತ್ತದೆ ಎಂದು ಹೊಸ ಅಧ್ಯಯನದಿಂದ ತಿಳಿದುಬಂದಿದೆ. ಸ್ವೀಡನ್‌ನ ಲುಂಡ್ ವಿಶ್ವವಿದ್ಯಾಲಯದ ಏರೋಸಾಲ್ ಸಂಶೋಧಕರು ನಾವು ಜನ್ಮದಿನದ ಶುಭಾಶಯಗಳು ಹಾಡನ್ನು ಹಾಡುವಾಗ ಹೊರಸೂಸುವ ಕಣಗಳ ಪ್ರಮಾಣವನ್ನು ಅಧ್ಯಯನ ಮಾಡಿದ್ದು,  ಅದು ಕೋವಿಡ್-19 ರ ಹರಡುವಿಕೆಯ ಮೇಲೆ ಹೆಚ್ಚು ಪ್ರಭಾವ ಬೀರುತ್ತದೆ ಎಂದು ಕಂಡು ಬಂದಿದೆ. ನಾವು ಹಾಡುವಾಗ ಎಷ್ಟು ವೈರಸ್ ಕಣಗಳು ಹೊರಸೂಸಲ್ಪಡುತ್ತವೆ ಎಂಬುದನ್ನು ಅರ್ಥಮಾಡಿಕೊಳ್ಳಲು, ಸಂಶೋಧಕರು 12 ಆರೋಗ್ಯವಂತ ಗಾಯಕರು ಮತ್ತು […]

ಹೊಸ ಸಂಶೋಧನೆ: ಹೀಗೆ ಮಾಡುವುದರಿಂದ ಕೊರೊನಾ ವೇಗವಾಗಿ ಹರಡುತ್ತದೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 10, 2020 | 2:51 PM

Share

ಹುಟ್ಟುಹಬ್ಬದ ಆಚರಣೆ ಸಮಯದಲ್ಲಿ ಜನ್ಮದಿನದ ಶುಭಾಶಯಗಳು ಹಾಡನ್ನು ಹಾಡುವುದರಿಂದ ಕೊರೊನಾ ವೈರಸ್​ ಬಹು ಬೇಗನೆ ಹರಡುತ್ತದೆ ಎಂದು ಹೊಸ ಅಧ್ಯಯನದಿಂದ ತಿಳಿದುಬಂದಿದೆ.

ಸ್ವೀಡನ್‌ನ ಲುಂಡ್ ವಿಶ್ವವಿದ್ಯಾಲಯದ ಏರೋಸಾಲ್ ಸಂಶೋಧಕರು ನಾವು ಜನ್ಮದಿನದ ಶುಭಾಶಯಗಳು ಹಾಡನ್ನು ಹಾಡುವಾಗ ಹೊರಸೂಸುವ ಕಣಗಳ ಪ್ರಮಾಣವನ್ನು ಅಧ್ಯಯನ ಮಾಡಿದ್ದು,  ಅದು ಕೋವಿಡ್-19 ರ ಹರಡುವಿಕೆಯ ಮೇಲೆ ಹೆಚ್ಚು ಪ್ರಭಾವ ಬೀರುತ್ತದೆ ಎಂದು ಕಂಡು ಬಂದಿದೆ.

ನಾವು ಹಾಡುವಾಗ ಎಷ್ಟು ವೈರಸ್ ಕಣಗಳು ಹೊರಸೂಸಲ್ಪಡುತ್ತವೆ ಎಂಬುದನ್ನು ಅರ್ಥಮಾಡಿಕೊಳ್ಳಲು, ಸಂಶೋಧಕರು 12 ಆರೋಗ್ಯವಂತ ಗಾಯಕರು ಮತ್ತು ಕೋವಿಡ್-19 ಹೊಂದಿರುವ ಇಬ್ಬರು ವ್ಯಕ್ತಿಗಳನ್ನು ಈ ಅಧ್ಯಯನದಲ್ಲಿ ಬಳಸಿಕೊಂಡು ಹಾಡಲು ವ್ಯವಸ್ಥೆ ಮಾಡಿದ್ದರು. ಮೇಣದ ಬತ್ತಿಗಳನ್ನು ಊದುವುದು ಭಾರಿ ಅಪಾಯಕಾರಿ.. ಜನ್ಮದಿನದ ಶುಭಾಶಯಗಳಂತಹ ಹಾಡುಗಳ ಹಾಡುವಿಕೆಯಲ್ಲಿ ವಿಶೇಷವಾಗಿ ಜೋರಾಗಿ ಮತ್ತು ಸ್ವರಭರಿತವಾಗಿ ಹಾಡುವುದರಿಂದ ಸುತ್ತಮುತ್ತಲಿನ ಗಾಳಿಯಲ್ಲಿ ಸಾಕಷ್ಟು ಹನಿಗಳು ಹರಡುತ್ತವೆ ಎಂದು ಅಧ್ಯಯನ ತೋರಿಸುತ್ತಿದೆ.

ಗಾಯಕರು ಫೇಸ್ ಮಾಸ್ಕ್ ಧರಿಸಿದರೆ ಮತ್ತು ಹಾಡುವ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡಿದ್ದರೆ ಹಾಡುವಿಕೆಯಿಂದಾಗುವ ಅಪಾಯವನ್ನು ಕಡಿಮೆ ಮಾಡಬಹುದು ಎಂದು ಸಂಶೋಧಕರು ಹೇಳುತ್ತಾರೆ. ಜೊತೆಗೆ ಕೇಕ್ ಮೇಲೆ ಮೇಣದಬತ್ತಿಗಳನ್ನು ಊದುವುದು ವೈರಸ್​ ಕಣಗಳು ವೇಗವಾಗಿ ಹರಡಲು ಇನ್ನಷ್ಟು ಸಹಾಯ ಮಾಡಿದಂತಾಗುತ್ತದೆ ಎಂದು ಸಂಶೋಧನೆಯಲ್ಲಿ ತಿಳಿದುಬಂದಿದೆ.

Published On - 2:46 pm, Thu, 10 September 20

Follow Us
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ