AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಸಂಶೋಧನೆ: ಹೀಗೆ ಮಾಡುವುದರಿಂದ ಕೊರೊನಾ ವೇಗವಾಗಿ ಹರಡುತ್ತದೆ!

ಹುಟ್ಟುಹಬ್ಬದ ಆಚರಣೆ ಸಮಯದಲ್ಲಿ ಜನ್ಮದಿನದ ಶುಭಾಶಯಗಳು ಹಾಡನ್ನು ಹಾಡುವುದರಿಂದ ಕೊರೊನಾ ವೈರಸ್​ ಬಹು ಬೇಗನೆ ಹರಡುತ್ತದೆ ಎಂದು ಹೊಸ ಅಧ್ಯಯನದಿಂದ ತಿಳಿದುಬಂದಿದೆ. ಸ್ವೀಡನ್‌ನ ಲುಂಡ್ ವಿಶ್ವವಿದ್ಯಾಲಯದ ಏರೋಸಾಲ್ ಸಂಶೋಧಕರು ನಾವು ಜನ್ಮದಿನದ ಶುಭಾಶಯಗಳು ಹಾಡನ್ನು ಹಾಡುವಾಗ ಹೊರಸೂಸುವ ಕಣಗಳ ಪ್ರಮಾಣವನ್ನು ಅಧ್ಯಯನ ಮಾಡಿದ್ದು,  ಅದು ಕೋವಿಡ್-19 ರ ಹರಡುವಿಕೆಯ ಮೇಲೆ ಹೆಚ್ಚು ಪ್ರಭಾವ ಬೀರುತ್ತದೆ ಎಂದು ಕಂಡು ಬಂದಿದೆ. ನಾವು ಹಾಡುವಾಗ ಎಷ್ಟು ವೈರಸ್ ಕಣಗಳು ಹೊರಸೂಸಲ್ಪಡುತ್ತವೆ ಎಂಬುದನ್ನು ಅರ್ಥಮಾಡಿಕೊಳ್ಳಲು, ಸಂಶೋಧಕರು 12 ಆರೋಗ್ಯವಂತ ಗಾಯಕರು ಮತ್ತು […]

ಹೊಸ ಸಂಶೋಧನೆ: ಹೀಗೆ ಮಾಡುವುದರಿಂದ ಕೊರೊನಾ ವೇಗವಾಗಿ ಹರಡುತ್ತದೆ!
ಸಾಧು ಶ್ರೀನಾಥ್​
|

Updated on:Sep 10, 2020 | 2:51 PM

Share

ಹುಟ್ಟುಹಬ್ಬದ ಆಚರಣೆ ಸಮಯದಲ್ಲಿ ಜನ್ಮದಿನದ ಶುಭಾಶಯಗಳು ಹಾಡನ್ನು ಹಾಡುವುದರಿಂದ ಕೊರೊನಾ ವೈರಸ್​ ಬಹು ಬೇಗನೆ ಹರಡುತ್ತದೆ ಎಂದು ಹೊಸ ಅಧ್ಯಯನದಿಂದ ತಿಳಿದುಬಂದಿದೆ.

ಸ್ವೀಡನ್‌ನ ಲುಂಡ್ ವಿಶ್ವವಿದ್ಯಾಲಯದ ಏರೋಸಾಲ್ ಸಂಶೋಧಕರು ನಾವು ಜನ್ಮದಿನದ ಶುಭಾಶಯಗಳು ಹಾಡನ್ನು ಹಾಡುವಾಗ ಹೊರಸೂಸುವ ಕಣಗಳ ಪ್ರಮಾಣವನ್ನು ಅಧ್ಯಯನ ಮಾಡಿದ್ದು,  ಅದು ಕೋವಿಡ್-19 ರ ಹರಡುವಿಕೆಯ ಮೇಲೆ ಹೆಚ್ಚು ಪ್ರಭಾವ ಬೀರುತ್ತದೆ ಎಂದು ಕಂಡು ಬಂದಿದೆ.

ನಾವು ಹಾಡುವಾಗ ಎಷ್ಟು ವೈರಸ್ ಕಣಗಳು ಹೊರಸೂಸಲ್ಪಡುತ್ತವೆ ಎಂಬುದನ್ನು ಅರ್ಥಮಾಡಿಕೊಳ್ಳಲು, ಸಂಶೋಧಕರು 12 ಆರೋಗ್ಯವಂತ ಗಾಯಕರು ಮತ್ತು ಕೋವಿಡ್-19 ಹೊಂದಿರುವ ಇಬ್ಬರು ವ್ಯಕ್ತಿಗಳನ್ನು ಈ ಅಧ್ಯಯನದಲ್ಲಿ ಬಳಸಿಕೊಂಡು ಹಾಡಲು ವ್ಯವಸ್ಥೆ ಮಾಡಿದ್ದರು. ಮೇಣದ ಬತ್ತಿಗಳನ್ನು ಊದುವುದು ಭಾರಿ ಅಪಾಯಕಾರಿ.. ಜನ್ಮದಿನದ ಶುಭಾಶಯಗಳಂತಹ ಹಾಡುಗಳ ಹಾಡುವಿಕೆಯಲ್ಲಿ ವಿಶೇಷವಾಗಿ ಜೋರಾಗಿ ಮತ್ತು ಸ್ವರಭರಿತವಾಗಿ ಹಾಡುವುದರಿಂದ ಸುತ್ತಮುತ್ತಲಿನ ಗಾಳಿಯಲ್ಲಿ ಸಾಕಷ್ಟು ಹನಿಗಳು ಹರಡುತ್ತವೆ ಎಂದು ಅಧ್ಯಯನ ತೋರಿಸುತ್ತಿದೆ.

ಗಾಯಕರು ಫೇಸ್ ಮಾಸ್ಕ್ ಧರಿಸಿದರೆ ಮತ್ತು ಹಾಡುವ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡಿದ್ದರೆ ಹಾಡುವಿಕೆಯಿಂದಾಗುವ ಅಪಾಯವನ್ನು ಕಡಿಮೆ ಮಾಡಬಹುದು ಎಂದು ಸಂಶೋಧಕರು ಹೇಳುತ್ತಾರೆ. ಜೊತೆಗೆ ಕೇಕ್ ಮೇಲೆ ಮೇಣದಬತ್ತಿಗಳನ್ನು ಊದುವುದು ವೈರಸ್​ ಕಣಗಳು ವೇಗವಾಗಿ ಹರಡಲು ಇನ್ನಷ್ಟು ಸಹಾಯ ಮಾಡಿದಂತಾಗುತ್ತದೆ ಎಂದು ಸಂಶೋಧನೆಯಲ್ಲಿ ತಿಳಿದುಬಂದಿದೆ.

Published On - 2:46 pm, Thu, 10 September 20

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ