AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಸ್ತ್ರೀ ಜೊತೆ ಗಂಡನನ್ನು ಕಂಡು ಚಾಕುವಿನಿಂದ ಇರಿದ ಹೆಂಡತಿ; ಕ್ಲೈಮ್ಯಾಕ್ಸ್​ನಲ್ಲಿ ಸಿಕ್ತು ಬಿಗ್​ ಟ್ವಿಸ್ಟ್​

ಆಕೆ ನೋಡಿದ ಫೋಟೊ, ಆಕೆ ಹಾಗೂ ಆಕೆಯ ಗಂಡ ಮದುವೆಗೂ ಮುನ್ನ ಪ್ರಣಯ ಪಕ್ಷಿಗಳಾಗಿ ಸುತ್ತುದಿದ್ದ ಸಮಯದಲ್ಲಿ ತೆಗೆದುಕೊಂಡಿದ್ದ ಫೋಟೊ ಎಂಬುದು ಆಕೆಗೆ ತಡವಾಗಿ ಅರಿವಿಗೆ ಬಂದಿದೆ.

ಪರಸ್ತ್ರೀ ಜೊತೆ ಗಂಡನನ್ನು ಕಂಡು ಚಾಕುವಿನಿಂದ ಇರಿದ ಹೆಂಡತಿ; ಕ್ಲೈಮ್ಯಾಕ್ಸ್​ನಲ್ಲಿ ಸಿಕ್ತು ಬಿಗ್​ ಟ್ವಿಸ್ಟ್​
ಪೃಥ್ವಿಶಂಕರ
| Edited By: |

Updated on:Jan 29, 2021 | 7:24 PM

Share

ತನ್ನ ಗಂಡ ಬೇರೊಬ್ಬ ಮಹಿಳೆಯೊಂದಿಗಿರುವ ಫೋಟೋವನ್ನು ಆತನ ಮೊಬೈಲಿನಲ್ಲಿ ನೋಡಿದ ಮೆಕ್ಸಿಕನ್ ಮಹಿಳೆಯೊಬ್ಬಳು ಕೋಪಗೊಂಡು ತನ್ನ ಗಂಡನ ಕೈ ಕಾಲುಗಳ ಮೇಲೆ ಚಾಕುವಿನಿಂದ ಹಲವು ಬಾರಿ ಇರಿದಿರುವ ಘಟನೆ ನಡೆದಿದೆ.

ಸೋನೊರಾದ ಕ್ಯಾಜೆಮ್‌ನಲ್ಲಿರುವ ದಂಪತಿಗಳ ಮನೆಯಲ್ಲಿ ಈ ಘಟನೆ ನಡೆದಿದೆ. ದಂಪತಿಗಳು ಮನೆಯೊಳಗೆ ಕಿರುಚುವುದು ಮತ್ತು ಕೂಗುವುದು ಕೇಳಿದ ನೆರೆಹೊರೆಯವರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಗೊಂಡ ಗಂಡನನ್ನು ಆಸ್ಪತ್ರೆಗೆ ಸೇರಿಸಿ, ಆ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ.

ತಮಾಷೆಯ ವಿಚಾರವೆಂದರೆ. ಆಕೆ ನೋಡಿದ ಫೋಟೊ, ಆಕೆ ಹಾಗೂ ಆಕೆಯ ಗಂಡ ಮದುವೆಗೂ ಮುನ್ನ ಪ್ರಣಯ ಪಕ್ಷಿಗಳಾಗಿ ಸುತ್ತುತ್ತಿದ್ದ ಸಮಯದಲ್ಲಿ ತೆಗೆದುಕೊಂಡಿದ್ದ ಫೋಟೊ ಎಂಬುದು ಆಕೆಗೆ ತಡವಾಗಿ ಅರಿವಿಗೆ ಬಂದಿದೆ. ಪತ್ನಿಯಿಂದ ಹಲ್ಲೆಗೊಳಗಾದ ಪತಿ ಜುವಾನ್ ಎನ್ ಎಂದು ಗುರುತಿಸಲಾಗಿದೆ. ಆತನ ಪತ್ನಿ ಲಿಯೊನೊರಾ ಎ ಎಂದು ತಿಳಿದುಬಂದಿದೆ.

ತನ್ನ ಗಂಡನ ಮೊಬೈಲ್​ನಲ್ಲಿ ಆಕೆ ನೋಡಿದ ಫೋಟೋಗಳ ಬಗ್ಗೆ ಅವನನ್ನು ಕೇಳದೆ, ಆತನ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದಾಳೆ. ಅಂತಿಮವಾಗಿ ಅವಳ ಕೈಯಿಂದ ಚಾಕುವನ್ನು ಕಿತ್ತುಕೊಳ್ಳುವಲ್ಲಿ ಯಶಸ್ವಿಯಾದ ಆತ, ಪತ್ನಿಯನ್ನು ಯಾವ ಫೋಟೋಗಳ ಬಗ್ಗೆ ಮಾತನಾಡುತ್ತಿದ್ದಾಳೆ ಎಂಬುದರ ಬಗ್ಗೆ ಕೇಳಿದ್ದಾನೆ. ಆಗ ಆಕೆ ತೋರಿಸಿದ ಫೋಟೊ ನೋಡಿ ಆತನಿಗೆ ಶಾಕ್​ ಆಗಿದೆ.

ಕೂಡಲೇ ಆ ಫೋಟೋದಲ್ಲಿ ಇರುವುದು ಅವನ ಹೆಂಡತಿಯಲ್ಲದೆ ಬೇರೆ ಯಾರೂ ಅಲ್ಲ ಎಂಬುದನ್ನು ಆಕೆಗೆ ಮನವರಿಕೆ ಮಾಡಿದ್ದಾನೆ. ಈ ದಂಪತಿಗಳು ಪ್ರೇಮಿಸುತ್ತಿದ್ದಾಗ ಈ ಫೋಟೋಗಳನ್ನು ತೆಗೆದುಕೊಳ್ಳಲಾಗಿದ್ದು ಆ ಸಮಯದಲ್ಲಿ ಆಕೆ ತೀರ ಸಣ್ಣಗಿದ್ದಳು ಹಾಗೂ ಮೇಕಪ್​ ಮಾಡಿಕೊಂಡಿದ್ದರಿಂದ ಆಕೆ ತನ್ನನ್ನು ತಾನೇ ಪತ್ತೆ ಹಚ್ಚುವಲ್ಲಿ ವಿಫಲಳಾಗಿದ್ದಳು ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.

Budget 2021: ಬಜೆಟ್ ಮೊಬೈಲ್ ಆ್ಯಪ್​ನಲ್ಲಿ ಏನಿದೆ?

Published On - 7:20 pm, Fri, 29 January 21

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು