AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ವರ್ಷದ ಕಂದಮ್ಮನನ್ನು ಒಂಟಿಯಾಗಿ ಮನೆಯಲ್ಲಿ ಬಿಟ್ಟು 10 ದಿನಗಳ ಕಾಲ ಟ್ರಿಪ್​ಗೆ ಹೋದ ತಾಯಿ, ಹಸಿವಿನಿಂದ ಅತ್ತೂ ಅತ್ತೂ ಮಗು ಸಾವು

ಮಕ್ಕಳು ಕೆಟ್ಟವರಿರಬಹುದು ಆದರೆ ಎಂದೂ ಕೆಟ್ಟ ತಾಯಿ ಇರುವುದಿಲ್ಲ ಎನ್ನುವ ಮಾತು ಎಲ್ಲರೂ ಕೇಳಿರುತ್ತೀರಿ. ಆದರೆ ಈ ಸುದ್ದಿ ಕೇಳಿದರೆ ನಿಮ್ಮ ಕಣ್ಣಂಚಲ್ಲಿ ನೀರು ಬಾರದೇ ಇರದು.

ಒಂದು ವರ್ಷದ ಕಂದಮ್ಮನನ್ನು ಒಂಟಿಯಾಗಿ ಮನೆಯಲ್ಲಿ ಬಿಟ್ಟು 10 ದಿನಗಳ ಕಾಲ ಟ್ರಿಪ್​ಗೆ ಹೋದ ತಾಯಿ, ಹಸಿವಿನಿಂದ ಅತ್ತೂ ಅತ್ತೂ ಮಗು ಸಾವು
ಕ್ರಿಸ್ಟೆಲ್
Follow us
ನಯನಾ ರಾಜೀವ್
|

Updated on: Jun 26, 2023 | 2:16 PM

ಮಕ್ಕಳು ಕೆಟ್ಟವರಿರಬಹುದು ಆದರೆ ಎಂದೂ ಕೆಟ್ಟ ತಾಯಿ ಇರುವುದಿಲ್ಲ ಎನ್ನುವ ಮಾತು ಎಲ್ಲರೂ ಕೇಳಿರುತ್ತೀರಿ. ಆದರೆ ಈ ಸುದ್ದಿ ಕೇಳಿದರೆ ನಿಮ್ಮ ಕಣ್ಣಂಚಲ್ಲಿ ನೀರು ಬಾರದೇ ಇರದು. ತಾಯಿಯೊಬ್ಬಳು 16 ತಿಂಗಳ ಮಗುವನ್ನು ಮನೆಯಲ್ಲಿ ಬಿಟ್ಟು 10 ದಿನಗಳ ಪ್ರವಾಸಕ್ಕೆ ತೆರಳಿದ್ದಳು, ಆಕೆ ವಾಪಸ್ ಬರುವಷ್ಟರೊಳಗೆ ಹೆಣ್ಣು ಮಗು ಡಿಹೈಡ್ರೇಷನ್​ನಿಂದ ಸಾವನ್ನಪ್ಪಿರುವ ಘಟನೆ ಅಮೆರಿಕದಲ್ಲಿ ವರದಿಯಾಗಿದೆ. ತಾಯಿ ತ್ಯಾಗ ಮಯಿ ತನ್ನ ಮಕ್ಕಳ ಸುಖ ಸಂತೋಷಕ್ಕಾಗಿ ತನ್ನ ಸರ್ವಸ್ವವನ್ನೇ ತ್ಯಾಗ ಮಾಡುತ್ತಾಳೆ. ಯಾವುದೇ ಕಷ್ಟ ಬರಲಿ ತನ್ನ ಜೀವವನ್ನು ಪಣಕ್ಕಿಟ್ಟಾದರೂ ಮಗುವನ್ನು ರಕ್ಷಿಸಿಕೊಳ್ಳುತ್ತಾಳೆ ಆದರೆ ಈ ಮಹಿಳೆಗೆ ತಾಯಿ ಎಂದು ಕರೆಸಿಕೊಳ್ಳುವ ಅರ್ಹತೆಯೇ ಇಲ್ಲ.

ಓಹಿಯೋದ ಕ್ರಿಸ್ಟಲ್ ಎ. ಕ್ಯಾಂಡೆಲಾರಿಯೊ ತನ್ನ ಹೆಣ್ಣು ಮಗು ಜೈಲಿನ್ ಅನ್ನು ಮನೆಯಲ್ಲಿ ಒಬ್ಬಂಟಿಯಾಗಿ ಬಿಟ್ಟಿದ್ದಳು. ಕೆಲವು ಗಂಟೆಗಳ ಕಾಲ ಅಲ್ಲ, ಆದರೆ 10 ದಿನಗಳವರೆಗೆ ಆಕೆ ಮನೆಗೆ ಬರಲೇ ಇಲ್ಲ.

ಮತ್ತಷ್ಟು ಓದಿ: ಪ್ರೀತಿ ವಿರೋಧಿಸಿ ಯುವತಿ ತಂದೆಯಿಂದ ಯುವಕನ ಮೇಲೆ ಹಲ್ಲೆ; ಮನನೊಂದ ಯುವಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ತನ್ನ ಮಗುವನ್ನು ನೋಡಿಕೊಳ್ಳಿ ಎಂದು ಅಕ್ಕಪಕ್ಕದ ಮನೆಯವರನ್ನು ಕೇಳಿಕೊಂಡಿದ್ದಳು. ಆದರೆ ಮತ್ಯಾವತ್ತೂ ಯಾರಿಗೂ ಆಕೆ ಕರೆ ಮಾಡಲಿಲ್ಲ, ಹಾಗಾದರೆ ಮಗುವನ್ನು ಆಕೆ ಕರೆದುಕೊಂಡು ಹೋಗಿರಬಹುದು ಎಂದು ಎಲ್ಲರೂ ಸುಮ್ಮನಿದ್ದರು. ಹೊಟ್ಟೆಗೆ ಏನೂ ಇಲ್ಲದೆ ಮಗು ಮೃತಪಟ್ಟಿದೆ.

ತಾಯಿ ವಿರುದ್ಧ ಪ್ರಕರಣ ದಾಖಲು ಜೂನ್ 16 ರಂದು ಪೊಲೀಸರು ಜೆಲಿನ್ ಅವರ ಮನೆಗೆ ತಲುಪಿದಾಗ ಅಲ್ಲಿ ಮಗು ಶವವಾಗಿ ಪತ್ತೆಯಾಗಿದೆ. ಪೊಲೀಸರು  ಮನೆಗೆ ತಲುಪಿದಾಗ, ಕೊಳಕು ಹೊದಿಕೆಯ ಮೇಲೆ ಮಗು ಮಲಗಿರುವುದು ಕಂಡುಬಂದಿದೆ ಎಂದು ಪೊಲೀಸರು ವಿಚಾರಣೆಯ ಸಮಯದಲ್ಲಿ ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ತಾಯಿ ಕ್ರಿಸ್ಟಲ್ ಕ್ಯಾಂಡೆಲಾರಿಯೊ ವಿರುದ್ಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. ಯಾಕಾಗಿ ಮಗುವನ್ನು ಬಿಟ್ಟು ತಾಯಿ ಅಷ್ಟು ದೂರ ಹೋಗಿದ್ದು ಎನ್ನುವ ಕುರಿತು ಇನ್ನೂ ಮಾಹಿತಿ ತಿಳಿಯಬೇಕಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ