AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಸ್​-9 ಗ್ಲೋಬಲ್ ಸಮ್ಮಿಟ್: ವ್ಯಾಪಾರ, ರಾಜಕೀಯದಿಂದ ಸಿನಿಮಾವರೆಗೆ ವಿವಿಧ ರಂಗಗಳಲ್ಲಿ ಛಾಪು ಮೂಡಿಸಿರುವ ಮಹಿಳೆಯರಿಗೆ ವಿಶೇಷ ಗೌರವ

News9 Global Summit: ಯುಎಇಯಲ್ಲಿ ನ್ಯೂಸ್​​-9 ಗ್ಲೋಬಲ್ ಸಮ್ಮಿಟ್(News9 Global Summit) ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು. SHEconomy ಎಂಬ ವಿಷಯದ ಮೇಲೆ ಶೃಂಗಸಭೆ ಆಯೋಜಿಸಲಾಗಿತ್ತು. ಈ ಶೃಂಗಸಭೆಯಲ್ಲಿ ವ್ಯಾಪಾರ, ರಾಜಕೀಯದಿಂದ ಸಿನಿಮಾದವರೆಗೆ ವಿವಿಧ ರಂಗಗಳಲ್ಲಿ ತನ್ನ ಪ್ರತಿಭೆಯ ಮೂಲಕ ಛಾಪು ಮೂಡಿಸಿರುವ ಮಹಿಳೆಯರನ್ನು ಗೌರವಿಸಲಾಯಿತು.

ನ್ಯೂಸ್​-9 ಗ್ಲೋಬಲ್ ಸಮ್ಮಿಟ್: ವ್ಯಾಪಾರ, ರಾಜಕೀಯದಿಂದ ಸಿನಿಮಾವರೆಗೆ ವಿವಿಧ ರಂಗಗಳಲ್ಲಿ ಛಾಪು ಮೂಡಿಸಿರುವ ಮಹಿಳೆಯರಿಗೆ ವಿಶೇಷ ಗೌರವ
ನ್ಯೂಸ್​9 ಗ್ಲೋಬಲ್ ಸಮ್ಮಿಟ್
ನಯನಾ ರಾಜೀವ್
|

Updated on:Aug 28, 2025 | 12:26 PM

Share

ಅಬುಧಾಮಿ, ಆಗಸ್ಟ್​ 28: ಯುಎಇಯಲ್ಲಿ ನ್ಯೂಸ್​​-9 ಗ್ಲೋಬಲ್ ಸಮ್ಮಿಟ್(News9 Global Summit) ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು. SHEconomy ಎಂಬ ವಿಷಯದ ಮೇಲೆ ಶೃಂಗಸಭೆ ಆಯೋಜಿಸಲಾಗಿತ್ತು. ಈ ಶೃಂಗಸಭೆಯಲ್ಲಿ ವ್ಯಾಪಾರ, ರಾಜಕೀಯದಿಂದ ಸಿನಿಮಾದವರೆಗೆ ವಿವಿಧ ರಂಗಗಳಲ್ಲಿ ತನ್ನ ಪ್ರತಿಭೆಯ ಮೂಲಕ ಛಾಪು ಮೂಡಿಸಿರುವ ಮಹಿಳೆಯರನ್ನು ಗೌರವಿಸಲಾಯಿತು.

ಮಹಿಳೆಯರು ಇನ್ನು ಮುಂದೆ ಕೇವಲ ಅಭಿವೃದ್ಧಿಯ ಭಾಗವಾಗಿ ನೋಡುವುದಿಲ್ಲ, ಬದಲಿಗೆ ಅಭವೃದ್ಧಿ ಪಥದಲ್ಲಿ ಎಲ್ಲರ ಸರಿಸಮಾನರಾಗಿ ಮಹಿಳೆ ಇರಲಿದ್ದಾಳೆ ಎಂಬ ಕಲ್ಪನೆಯನ್ನು ಕಾರ್ಯಕ್ರಮವು ಒತ್ತಿಹೇಳಿತು. ಈ ಕಾರ್ಯಕ್ರಮದಲ್ಲಿ ಇದರಲ್ಲಿ Shunya.ai, FICCI, IPF ಮತ್ತು GCC ಯ ಹಾರ್ವರ್ಡ್ ಬಿಸಿನೆಸ್ ಸ್ಕೂಲ್ ಕ್ಲಬ್ ಸೇರಿದಂತೆ ಪ್ರಮುಖ ಕಂಪನಿಗಳು ಪಾಲ್ಗೊಂಡಿದ್ದವು.

ಟಿವಿ9 ನೆಟ್‌ವರ್ಕ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಬರುಣ್ ದಾಸ್ ಮಾತನಾಡಿ, ಜಗತ್ತಿಗೆ ಸಂದೇಶ ಸಾರುವ ಇಂತಹ ಜಾಗತಿಕ ಕಾರ್ಯಕ್ರಮಗಳು ಮತ್ತಷ್ಟು ನಡೆಯಬೇಕೆಂದರು. ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಖುದ್ದಾಗಿ ಕಾರ್ಯಕ್ರಮಕ್ಕೆ ಆಗಮಿಸಲು ಸಾಧ್ಯವಾಗದ ಕಾರಣ ಸಂದೇಶವನ್ನು ಕಳುಹಿಸಿದ್ದರು. ಅದರಲ್ಲಿ ಆಡಳಿತ ಮತ್ತು ಸುಧಾರಣೆಯಲ್ಲಿ ಮಹಿಳಾ ನಾಯಕತ್ವವನ್ನು ಒತ್ತಿ ಹೇಳಿದರು.

ಯುಎಇಯಲ್ಲಿ ಭಾರತದ ರಾಯಭಾರಿ ಸಂಜಯ್ ಸುಧೀರ್ ಅವರು ರಾಜತಾಂತ್ರಿಕತೆಯು ಭಾರತ-ಯುಎಇ ಸಂಬಂಧದಂತಹ ಅಂತರ್ಗತ ಪಾಲುದಾರಿಕೆಗಳನ್ನು ಹೇಗೆ ಬಲಪಡಿಸುತ್ತದೆ ಎಂಬುದರ ಬಗ್ಗೆ ಬೆಳಕು ಚೆಲ್ಲಿದರು.

ಮತ್ತಷ್ಟು ಓದಿ: ಮಹಿಳೆಯರು ಮುಂದೆ ಬಂದಾಗ ಮಾನವೀಯತೆಯೂ ಮೇಲಕ್ಕೇರುತ್ತದೆ; ನ್ಯೂಸ್ 9 ಗ್ಲೋಬಲ್ ಶೃಂಗಸಭೆಯಲ್ಲಿ ಟಿವಿ 9 ನೆಟ್‌ವರ್ಕ್ ಎಂಡಿ ಬರುಣ್ ದಾಸ್

ನಟಿ ರಿಚಾ ಚಡ್ಡಾ ಅವರು ತಮ್ಮ ಸಿನಿಮಾ ಪ್ರಯಾಣದ ಬಗ್ಗೆ ಚರ್ಚಿಸುವ ಒಂದು ಫೈರ್‌ಸೈಡ್ ಚಾಟ್‌ನಲ್ಲಿ ಭಾಗವಹಿಸಿದ್ದರು, ಗಾಯಕಿ ಸೋನಾ ಮೊಹಾಪಾತ್ರ ಕೂಡ ಸ್ಪೂರ್ತಿದಾಯಕ ಸಂವಾದದಲ್ಲಿ ಭಾಗವಹಿಸಿದ್ದರು.

ಮನ್ ದೇಶಿ ಫೌಂಡೇಶನ್‌ನ ಚೇತನಾ ಗಾಲಾ ಸಿನ್ಹಾ, ಜೆಟ್‌ಸೆಟ್‌ಗೋದ ಕನಿಕಾ ಟೆಕ್ರಿವಾಲ್, ಫ್ರಾಂಟಿಯರ್ ಮಾರ್ಕೆಟ್ಸ್‌ನ ಅಜಯ್ತಾ ಶಾ, ಡಾ. ಸುದ್ ಅಲ್ ಶಮ್ಸಿ ಮತ್ತು ಡಾ. ಸೋನಾಲಿ ದತ್ತಾ ಸೇರಿದಂತೆ ಹಲವಾರು ಪ್ಯಾನೆಲ್ ಚರ್ಚೆಗಳಲ್ಲಿ ಮಹಿಳಾ ಉದ್ಯಮಿಗಳು ಮತ್ತು ವ್ಯಾಪಾರ ಮುಖಂಡರು ಭಾಗವಹಿಸಿದ್ದರು.

ಹಲವು ಸಾಧಕರನ್ನು ಸನ್ಮಾನಿಸಲಾಯಿತು. ಪ್ರಶಸ್ತಿ ಪುರಸ್ಕೃತರಲ್ಲಿ ಕನಿಕಾ ಟೆಕ್ರಿವಾಲ್, ಅಜೈತಾ ಶಾ, ಶಫೀನಾ ಯೂಸುಫ್ ಅಲಿ, ಲಾವಣ್ಯ ನಲಿ, ಚೇತನ ಗಲಾ ಸಿನ್ಹಾ, ಡಾ ಸನಾ ಸಜನ್, ಡಾ ಸುವಾದ್ ಅಲ್ ಶಮ್ಸಿ, ನೈಲಾ ಅಲ್ ಬಲೂಶಿ, ವಕೀಲ ಬಿಂದು ಚೆಟ್ಟೂರ್ ಮತ್ತು ಸೋನಾ ಮೊಹಾಪಾತ್ರ ಸೇರಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:23 pm, Thu, 28 August 25

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಮನೆ ಬಾಗಿಲಲ್ಲೇ ಮಲಗಿತ್ತು 10 ಅಡಿ ಕಾಳಿಂಗ ಸರ್ಪ!
ಮನೆ ಬಾಗಿಲಲ್ಲೇ ಮಲಗಿತ್ತು 10 ಅಡಿ ಕಾಳಿಂಗ ಸರ್ಪ!