AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Cough Syrup: ಉಜ್ಬೇಕಿಸ್ತಾನದಲ್ಲಿ ಭಾರತದ 2 ಕೆಮ್ಮಿನ ಸಿರಪ್​ಗಳನ್ನು ಬಳಸದಂತೆ WHO ಶಿಫಾರಸು

ಉಜ್ಬೇಕಿಸ್ತಾನದಲ್ಲಿ ಭಾರತದ 2 ಕೆಮ್ಮಿನ ಸಿರಪ್​ಗಳನ್ನು ಬಳಸದಂತೆ WHO ಶಿಫಾರಸು ಮಾಡಿದೆ. ನೋಯ್ಡಾ ಮೂಲದ ಕಂಪನಿ ಮರಿಯನ್ ಬಯೋಟೆಕ್ ತಯಾರಿಸಿದ ಎರಡು ಕೆಮ್ಮಿನ ಸಿರಪ್‌ಗಳನ್ನು ಉಜ್ಬೇಕಿಸ್ತಾನ್‌ನಲ್ಲಿರುವ ಮಕ್ಕಳಿಗೆ ಬಳಸಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಶಿಫಾರಸು ಮಾಡಿದೆ.

Indian Cough Syrup: ಉಜ್ಬೇಕಿಸ್ತಾನದಲ್ಲಿ ಭಾರತದ 2 ಕೆಮ್ಮಿನ ಸಿರಪ್​ಗಳನ್ನು ಬಳಸದಂತೆ WHO ಶಿಫಾರಸು
ಕೆಮ್ಮಿನ ಸಿರಪ್
Follow us
TV9 Web
| Updated By: ನಯನಾ ರಾಜೀವ್

Updated on:Jan 12, 2023 | 7:21 AM

ಉಜ್ಬೇಕಿಸ್ತಾನದಲ್ಲಿ ಭಾರತದ 2 ಕೆಮ್ಮಿನ ಸಿರಪ್​ಗಳನ್ನು ಬಳಸದಂತೆ WHO ಶಿಫಾರಸು ಮಾಡಿದೆ. ನೋಯ್ಡಾ ಮೂಲದ ಕಂಪನಿ ಮರಿಯನ್ ಬಯೋಟೆಕ್ ತಯಾರಿಸಿದ ಎರಡು ಕೆಮ್ಮಿನ ಸಿರಪ್‌ಗಳನ್ನು ಉಜ್ಬೇಕಿಸ್ತಾನ್‌ನಲ್ಲಿರುವ ಮಕ್ಕಳಿಗೆ ಬಳಸಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಶಿಫಾರಸು ಮಾಡಿದೆ. ವೈದ್ಯಕೀಯ ಉತ್ಪನ್ನದ ಕುರಿತು ಎಚ್ಚರಿಕೆ ನೀಡಿದ ವಿಶ್ವ ಆರೋಗ್ಯ ಸಂಸ್ಥೆ ಮೆರಿಯನ್ ಬಯೋಟೆಕ್‌ನಿಂದ ತಯಾರಿಸಲ್ಪಟ್ಟ ಗುಣಮಟ್ಟದ ವೈದ್ಯಕೀಯ ಉತ್ಪನ್ನಗಳು ಗುಣಮಟ್ಟದ ಮಾನದಂಡಗಳು ಅಥವಾ ವಿಶೇಷಣಗಳನ್ನು ಪೂರೈಸಲು ವಿಫಲವಾದ ಉತ್ಪನ್ನಗಳಾಗಿವೆ ಮತ್ತು ಹಾಗಾಗಿ ನಿರ್ದಿಷ್ಟತೆಯಿಂದ ಹೊರಗಿದೆ ಎಂದು ಹೇಳಲಾಗಿದೆ.

ಮತ್ತಷ್ಟು ಓದಿ: Cough Syrup: ಭಾರತದಲ್ಲಿ ತಯಾರಾದ ಶೀತ-ಕೆಮ್ಮಿನ ಔಷಧಿ ಸೇವಿಸಿ ಆಫ್ರಿಕಾದಲ್ಲಿ 66 ಮಕ್ಕಳ ಸಾವು

ಗ್ಯಾಂಬಿಯಾದಲ್ಲಿ ಭಾರತ ಮೂಲದ ಔಷಧಿ ಕಂಪನಿ ತಯಾರಿಸಿದ ಕೆಮ್ಮಿನ ಔಷಧಿ ಕುಡಿದು ಮಕ್ಕಳು ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ, ಉಜ್ಬೇಕಿಸ್ತಾನ್‌ನಲ್ಲಿ 18 ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಉಜ್ಬೇಕಿಸ್ತಾನ್‌ನ ಆರೋಗ್ಯ ಸಚಿವಾಲಯವು ಭಾರತೀಯ ಔಷಧೀಯ ಕಂಪನಿಯೊಂದು ತಯಾರಿಸಿದ ಔಷಧಿಗಳನ್ನು ಸೇವಿಸಿ ದೇಶದಲ್ಲಿ 18 ಮಕ್ಕಳು ಸಾವನ್ನಪ್ಪಿರುವುದಾಗಿ ಹೇಳಿಕೊಂಡಿದೆ. ನೋಯ್ಡಾ ಮೂಲದ ಮರಿಯನ್ ಬಯೋಟೆಕ್ ತಯಾರಿಸಿದ ಕೆಮ್ಮಿನ ಸಿರಪ್ ಕುಡಿದು ತೀವ್ರ ಉಸಿರಾಟದ ಕಾಯಿಲೆಯಿಂದ ಬಳಲುತ್ತಿದ್ದ 18 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಉಜ್ಬೇಕಿಸ್ತಾನ್ ಆರೋಗ್ಯ ಸಚಿವಾಲಯ ಹೇಳಿತ್ತು.

ಡಾಕ್-1 ಮ್ಯಾಕ್ಸ್ ಔಷಧ ಉಸಿರಾಟದ ತೊಂದರೆ ಇರುವ ಮಕ್ಕಳಿಗೆ ಡಾಕ್-1 ಮ್ಯಾಕ್ಸ್ ಔಷಧವನ್ನು ನೀಡಲಾಗಿದೆ. ಈ ಔಷಧಿಯನ್ನು ಭಾರತದಲ್ಲಿ ತಯಾರಿಸಲಾಗುತ್ತದೆ. ಔಷಧಿ ನೀಡಿದ ಬಳಿಕ 21 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ 18 ಮಕ್ಕಳು ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗುವ ಮೊದಲು ಸತ್ತ ಮಕ್ಕಳು ಮನೆಯಲ್ಲಿ ಈ ಔಷಧಿಯನ್ನು 2 ರಿಂದ 7 ದಿನಗಳವರೆಗೆ ದಿನಕ್ಕೆ 3-4 ಬಾರಿ ತೆಗೆದುಕೊಂಡಿದ್ದಾರೆ.

ಮರಿಯನ್ ವೆಬ್​ಸೈಟ್​ ಕೆಮ್ಮು, ಕಟ್ಟಿದ ಮೂಗು, ಗಂಟಲು ನೋವು, ಸೈನಟಿಸ್, ತಲೆನೋವು, ದೇಹ-ನೋವು ಮತ್ತು ಜ್ವರಕ್ಕೆ ಡಾಕ್-1 ಮ್ಯಾಕ್ಸ್ ಮಾತ್ರೆಗಳನ್ನು ಸೂಚಿಸಲಾಗುತ್ತದೆ ಎಂದು ಮರಿಯನ್ ಬಯೋಟೆಕ್‌ನ ವೆಬ್‌ಸೈಟ್ ಹೇಳುತ್ತದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:20 am, Thu, 12 January 23

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ