AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತವನ್ನು ವಿಶ್ವವೇ ನೋಡುತ್ತಿದೆ, ನಾವು ಹಣಕ್ಕಾಗಿ ಭಿಕ್ಷೆ ಬೇಡುತ್ತಿದ್ದೇವೆ: ಪಾಕ್​​ ಮಾಜಿ ಪ್ರಧಾನಿ

Nawaz Sharif: ಭಾರತವು ಚಂದ್ರನನ್ನು ತಲುಪಿದೆ ಮತ್ತು ಜಿ 20 ಶೃಂಗಸಭೆಯನ್ನು ಯಶಸ್ವಿಯಾಗಿ ಆಯೋಜಿಸಿದೆ. ಆದರೆ ಪಾಕಿಸ್ತಾನ ಹಣಕ್ಕಾಗಿ ಇತರ ರಾಷ್ಟ್ರಗಳಲ್ಲಿ ಬೇಡಿಕೊಳ್ಳುತ್ತಿದೆ ಎಂದು ಪಾಕ್​​ ಮಾಜಿ ಪ್ರಧಾನಿ ನವಾಜ್​​ ಷರೀಫ್ ಹೇಳಿದ್ದಾರೆ. ಲಾಹೋರ್‌ನಲ್ಲಿ ನಡೆದ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಷರೀಫ್, ಇಂದು, ಭಾರತವು ಚಂದ್ರನ ಮೇಲೆ ಕಾಲಿಡುತ್ತಿರುವಾಗ, ಜತೆಗೆ ಜಿ 20ನಲ್ಲಿ ವಿಶ್ವ ನಾಯಕರಿಗೆ ಆತಿಥ್ಯ ನೀಡುತ್ತಿರುವಾಗ ಪಾಕಿಸ್ತಾನದ ಪ್ರಧಾನಿ ನಿಧಿಗಾಗಿ ಭಿಕ್ಷೆ ಬೇಡಲು ವಿದೇಶಗಳಿಗೆ ಹೋಗುತ್ತಿದ್ದಾರೆ.

ಭಾರತವನ್ನು ವಿಶ್ವವೇ ನೋಡುತ್ತಿದೆ, ನಾವು ಹಣಕ್ಕಾಗಿ ಭಿಕ್ಷೆ ಬೇಡುತ್ತಿದ್ದೇವೆ: ಪಾಕ್​​ ಮಾಜಿ ಪ್ರಧಾನಿ
ಪಾಕ್​​ ಮಾಜಿ ಪ್ರಧಾನಿ ನವಾಜ್​​ ಷರೀಫ್
ಅಕ್ಷಯ್​ ಪಲ್ಲಮಜಲು​​
|

Updated on: Sep 20, 2023 | 1:16 PM

Share

ಇಸ್ಲಾಮಾಬಾದ್, ಸೆ.20: ಭಾರತ ಎಲ್ಲದರಲ್ಲೂ ಮುಂದೆ ಸಾಗುತ್ತಿದೆ. ಭಾರತ ಚಂದ್ರಯಾನ -3ಯನ್ನು (chandrayaan 3) ಯಶ್ವಸಿ ಮಾಡಿದೆ. ವಿಶ್ವವೇ ಭಾರತದತ್ತ ನೋಡುವಂತೆ ಜಿ-20 ಶೃಂಗಸಭೆ ನಡೆಸಿದೆ. ಆದರೆ  ಪಾಕಿಸ್ತಾನ ಏನು? ಮಾಡುತ್ತಿದೆ ಎಂದು ಅಚ್ಚರಿಯ ಹೇಳಿಕೆಯನ್ನು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್​​ ಷರೀಫ್ (Nawaz Sharif) ನೀಡಿದ್ದಾರೆ. ತಮ್ಮ ಪಕ್ಷದ ಪಿಎಂಎಲ್ (ಎನ್) ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಭಾರತವು ಚಂದ್ರನನ್ನು ತಲುಪಿದೆ ಮತ್ತು ಜಿ 20 ಶೃಂಗಸಭೆಯನ್ನು ಯಶಸ್ವಿಯಾಗಿ ಆಯೋಜಿಸಿದೆ. ಆದರೆ ಪಾಕಿಸ್ತಾನ ಹಣಕ್ಕಾಗಿ ಇತರ ರಾಷ್ಟ್ರಗಳಲ್ಲಿ ಬೇಡಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ.

ಲಾಹೋರ್‌ನಲ್ಲಿ ನಡೆದ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಷರೀಫ್, ಇಂದು, ಭಾರತವು ಚಂದ್ರನ ಮೇಲೆ ಕಾಲಿಡುತ್ತಿರುವಾಗ, ಜತೆಗೆ ಜಿ 20ನಲ್ಲಿ ವಿಶ್ವ ನಾಯಕರಿಗೆ ಆತಿಥ್ಯ ನೀಡುತ್ತಿರುವಾಗ ಪಾಕಿಸ್ತಾನದ ಪ್ರಧಾನಿ ನಿಧಿಗಾಗಿ ಭಿಕ್ಷೆ ಬೇಡಲು ವಿದೇಶಗಳಿಗೆ ಹೋಗುತ್ತಿದ್ದಾರೆ. ಪಾಕಿಸ್ತಾನಕ್ಕೆ ಏಕೆ ಅಂತಹ ಸಾಧನೆ ಮಾಡಲು ಸಾಧ್ಯವಾಗಲಿಲ್ಲ? ನಮ್ಮ ದೇಶದ ಈ ಸ್ಥಿತಿಗೆ ಯಾರು ಹೊಣೆ? ಎಂದು ಪ್ರಶ್ನಿಸಿದ್ದಾರೆ.

ಪಾಕಿಸ್ತಾನದಲ್ಲಿರುವ ಬಡವರು ಆಹಾರಕ್ಕಾಗಿ ಪರದಾಡುತ್ತಿದ್ದಾರೆ. ನಾವು ನಮ್ಮ ದೇಶಕ್ಕೆ ಏನು ಮಾಡಿದ್ದೇವೆ? ಎಂದು ಪ್ರಶ್ನಿಸಿಕೊಳ್ಳಬೇಕಿದೆ. ಪಾಕಿಸ್ತಾನದ ಪ್ರಸ್ತುತ ಆರ್ಥಿಕತೆಯ ಸ್ಥಿತಿಯ ಬಗ್ಗೆ ಟೀಕಿಸಿದ ಷರೀಫ್, ನಮ್ಮ ದೇಶಕ್ಕೆ ಇಂತಹ ಸ್ಥಿತಿ ತಂದವರು ದೊಡ್ಡ ಅಪರಾಧಿಗಳು ಎಂದು ಹೇಳಿದ್ದಾರೆ.

1990ರಲ್ಲಿ ಪಾಕಿಸ್ತಾನ್ ಮುಸ್ಲಿಂ ಲೀಗ್ ನೇತೃತ್ವದ ಸರ್ಕಾರ ಮಾಡಿದ ಆರ್ಥಿಕ ಸುಧಾರಣೆಗಳನ್ನು ಈಗಿನ ಸರ್ಕಾರ ಅನುಸರಿಸಬೇಕು ಎಂದು ಹೇಳಿದರು. ಅಟಲ್ ಬಿಹಾರಿ ವಾಜಪೇಯಿ ಅವರು ಭಾರತದ ಪ್ರಧಾನಿಯಾದಾಗ ಅವರ ಖಜಾನೆಯಲ್ಲಿ ಕೇವಲ ಒಂದು ಬಿಲಿಯನ್ ಡಾಲರ್ ಇತ್ತು. ಈಗ, ಅವರ ವಿದೇಶಿ ವಿನಿಮಯ ಸಂಗ್ರಹವು 600 ಶತಕೋಟಿಗೆ ಏರಿದೆ ಎಂದು ಷರೀಫ್ ಹೇಳಿದರು.

ಆದರೆ ಪಾಕಿಸ್ತಾನ ಇನ್ನೂ ಒಂದು ಶತಕೋಟಿ ಡಾಲರ್‌ಗೆ ಇತರ ದೇಶಗಳ ಮುಂದೆ ಭಿಕ್ಷೆ ಬೇಡಬೇಕಾಗಿದೆ. ನಮ್ಮ ಸ್ಥಿತಿ ಎಲ್ಲಿಗೆ ಬಂದಿದೆ? ಭಾರತದ ಮುಂದೆ ಯಾವ ಹಂತಕ್ಕೆ ಬಂದು ನಿಲ್ಲಲಿದ್ದೇವೆ? ನಾವು ಇಂದಿಗೂ ಚೀನಾ ಮತ್ತು ಗಲ್ಫ್‌ನಿಂದ ಹಣವನ್ನು ಕೇಳುತ್ತಿದ್ದೇವೆ ಎಂದು ಖಡಕ್​​​ ಆಗಿ ಸರ್ಕಾರವನ್ನು ಟೀಕಿಸಿದರು.

ಇದನ್ನೂ ಓದಿ: ಮುಂಬೈ ದಾಳಿಯ ಉಗ್ರ ಅಜ್ಮಲ್ ಕಸಬ್ ಎಲ್ಲಿದ್ದಾನೆ ಎಂದು ಭಾರತಕ್ಕೆ ತಿಳಿಸಿದ್ದು ನವಾಜ್ ಷರೀಫ್: ಪಾಕ್ ಸಚಿವ

ಪಾಕ್​​ ಮಾಜಿ ಪ್ರಧಾನಿ ನವಾಜ್​​ ಷರೀಫ್ ಅವರು ಅಕ್ಟೋಬರ್ 21ರಂದು ಪಾಕಿಸ್ತಾನಕ್ಕೆ ಆಗಮಿಸಲಿದ್ದಾರೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ. ಇನ್ನು ಪಾಕಿಸ್ತಾನದ ಕೆಟ್ಟ ಆರ್ಥಿಕ ಸ್ಥಿತಿ ಮತ್ತು ರಾಜಕೀಯ ಬಿಕ್ಕಟ್ಟು ದೇಶ ಜನರ ಮೇಲೆ ಪರಿಣಾಮ ಉಂಟು ಮಾಡುತ್ತಿದೆ. ಈಗಾಗಲೇ ಪಾಕ್​​​ ಹಣದುಬ್ಬರ ಸಮಸ್ಯೆಯನ್ನು ಎದುರಿಸುತ್ತಿದೆ ಎಂದು ಡಾನ್​​ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇನ್ನಷ್ಟು ವಿದೇಶ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​