AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತವನ್ನು ವಿಶ್ವವೇ ನೋಡುತ್ತಿದೆ, ನಾವು ಹಣಕ್ಕಾಗಿ ಭಿಕ್ಷೆ ಬೇಡುತ್ತಿದ್ದೇವೆ: ಪಾಕ್​​ ಮಾಜಿ ಪ್ರಧಾನಿ

Nawaz Sharif: ಭಾರತವು ಚಂದ್ರನನ್ನು ತಲುಪಿದೆ ಮತ್ತು ಜಿ 20 ಶೃಂಗಸಭೆಯನ್ನು ಯಶಸ್ವಿಯಾಗಿ ಆಯೋಜಿಸಿದೆ. ಆದರೆ ಪಾಕಿಸ್ತಾನ ಹಣಕ್ಕಾಗಿ ಇತರ ರಾಷ್ಟ್ರಗಳಲ್ಲಿ ಬೇಡಿಕೊಳ್ಳುತ್ತಿದೆ ಎಂದು ಪಾಕ್​​ ಮಾಜಿ ಪ್ರಧಾನಿ ನವಾಜ್​​ ಷರೀಫ್ ಹೇಳಿದ್ದಾರೆ. ಲಾಹೋರ್‌ನಲ್ಲಿ ನಡೆದ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಷರೀಫ್, ಇಂದು, ಭಾರತವು ಚಂದ್ರನ ಮೇಲೆ ಕಾಲಿಡುತ್ತಿರುವಾಗ, ಜತೆಗೆ ಜಿ 20ನಲ್ಲಿ ವಿಶ್ವ ನಾಯಕರಿಗೆ ಆತಿಥ್ಯ ನೀಡುತ್ತಿರುವಾಗ ಪಾಕಿಸ್ತಾನದ ಪ್ರಧಾನಿ ನಿಧಿಗಾಗಿ ಭಿಕ್ಷೆ ಬೇಡಲು ವಿದೇಶಗಳಿಗೆ ಹೋಗುತ್ತಿದ್ದಾರೆ.

ಭಾರತವನ್ನು ವಿಶ್ವವೇ ನೋಡುತ್ತಿದೆ, ನಾವು ಹಣಕ್ಕಾಗಿ ಭಿಕ್ಷೆ ಬೇಡುತ್ತಿದ್ದೇವೆ: ಪಾಕ್​​ ಮಾಜಿ ಪ್ರಧಾನಿ
ಪಾಕ್​​ ಮಾಜಿ ಪ್ರಧಾನಿ ನವಾಜ್​​ ಷರೀಫ್
ಅಕ್ಷಯ್​ ಪಲ್ಲಮಜಲು​​
|

Updated on: Sep 20, 2023 | 1:16 PM

Share

ಇಸ್ಲಾಮಾಬಾದ್, ಸೆ.20: ಭಾರತ ಎಲ್ಲದರಲ್ಲೂ ಮುಂದೆ ಸಾಗುತ್ತಿದೆ. ಭಾರತ ಚಂದ್ರಯಾನ -3ಯನ್ನು (chandrayaan 3) ಯಶ್ವಸಿ ಮಾಡಿದೆ. ವಿಶ್ವವೇ ಭಾರತದತ್ತ ನೋಡುವಂತೆ ಜಿ-20 ಶೃಂಗಸಭೆ ನಡೆಸಿದೆ. ಆದರೆ  ಪಾಕಿಸ್ತಾನ ಏನು? ಮಾಡುತ್ತಿದೆ ಎಂದು ಅಚ್ಚರಿಯ ಹೇಳಿಕೆಯನ್ನು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್​​ ಷರೀಫ್ (Nawaz Sharif) ನೀಡಿದ್ದಾರೆ. ತಮ್ಮ ಪಕ್ಷದ ಪಿಎಂಎಲ್ (ಎನ್) ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಭಾರತವು ಚಂದ್ರನನ್ನು ತಲುಪಿದೆ ಮತ್ತು ಜಿ 20 ಶೃಂಗಸಭೆಯನ್ನು ಯಶಸ್ವಿಯಾಗಿ ಆಯೋಜಿಸಿದೆ. ಆದರೆ ಪಾಕಿಸ್ತಾನ ಹಣಕ್ಕಾಗಿ ಇತರ ರಾಷ್ಟ್ರಗಳಲ್ಲಿ ಬೇಡಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ.

ಲಾಹೋರ್‌ನಲ್ಲಿ ನಡೆದ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಷರೀಫ್, ಇಂದು, ಭಾರತವು ಚಂದ್ರನ ಮೇಲೆ ಕಾಲಿಡುತ್ತಿರುವಾಗ, ಜತೆಗೆ ಜಿ 20ನಲ್ಲಿ ವಿಶ್ವ ನಾಯಕರಿಗೆ ಆತಿಥ್ಯ ನೀಡುತ್ತಿರುವಾಗ ಪಾಕಿಸ್ತಾನದ ಪ್ರಧಾನಿ ನಿಧಿಗಾಗಿ ಭಿಕ್ಷೆ ಬೇಡಲು ವಿದೇಶಗಳಿಗೆ ಹೋಗುತ್ತಿದ್ದಾರೆ. ಪಾಕಿಸ್ತಾನಕ್ಕೆ ಏಕೆ ಅಂತಹ ಸಾಧನೆ ಮಾಡಲು ಸಾಧ್ಯವಾಗಲಿಲ್ಲ? ನಮ್ಮ ದೇಶದ ಈ ಸ್ಥಿತಿಗೆ ಯಾರು ಹೊಣೆ? ಎಂದು ಪ್ರಶ್ನಿಸಿದ್ದಾರೆ.

ಪಾಕಿಸ್ತಾನದಲ್ಲಿರುವ ಬಡವರು ಆಹಾರಕ್ಕಾಗಿ ಪರದಾಡುತ್ತಿದ್ದಾರೆ. ನಾವು ನಮ್ಮ ದೇಶಕ್ಕೆ ಏನು ಮಾಡಿದ್ದೇವೆ? ಎಂದು ಪ್ರಶ್ನಿಸಿಕೊಳ್ಳಬೇಕಿದೆ. ಪಾಕಿಸ್ತಾನದ ಪ್ರಸ್ತುತ ಆರ್ಥಿಕತೆಯ ಸ್ಥಿತಿಯ ಬಗ್ಗೆ ಟೀಕಿಸಿದ ಷರೀಫ್, ನಮ್ಮ ದೇಶಕ್ಕೆ ಇಂತಹ ಸ್ಥಿತಿ ತಂದವರು ದೊಡ್ಡ ಅಪರಾಧಿಗಳು ಎಂದು ಹೇಳಿದ್ದಾರೆ.

1990ರಲ್ಲಿ ಪಾಕಿಸ್ತಾನ್ ಮುಸ್ಲಿಂ ಲೀಗ್ ನೇತೃತ್ವದ ಸರ್ಕಾರ ಮಾಡಿದ ಆರ್ಥಿಕ ಸುಧಾರಣೆಗಳನ್ನು ಈಗಿನ ಸರ್ಕಾರ ಅನುಸರಿಸಬೇಕು ಎಂದು ಹೇಳಿದರು. ಅಟಲ್ ಬಿಹಾರಿ ವಾಜಪೇಯಿ ಅವರು ಭಾರತದ ಪ್ರಧಾನಿಯಾದಾಗ ಅವರ ಖಜಾನೆಯಲ್ಲಿ ಕೇವಲ ಒಂದು ಬಿಲಿಯನ್ ಡಾಲರ್ ಇತ್ತು. ಈಗ, ಅವರ ವಿದೇಶಿ ವಿನಿಮಯ ಸಂಗ್ರಹವು 600 ಶತಕೋಟಿಗೆ ಏರಿದೆ ಎಂದು ಷರೀಫ್ ಹೇಳಿದರು.

ಆದರೆ ಪಾಕಿಸ್ತಾನ ಇನ್ನೂ ಒಂದು ಶತಕೋಟಿ ಡಾಲರ್‌ಗೆ ಇತರ ದೇಶಗಳ ಮುಂದೆ ಭಿಕ್ಷೆ ಬೇಡಬೇಕಾಗಿದೆ. ನಮ್ಮ ಸ್ಥಿತಿ ಎಲ್ಲಿಗೆ ಬಂದಿದೆ? ಭಾರತದ ಮುಂದೆ ಯಾವ ಹಂತಕ್ಕೆ ಬಂದು ನಿಲ್ಲಲಿದ್ದೇವೆ? ನಾವು ಇಂದಿಗೂ ಚೀನಾ ಮತ್ತು ಗಲ್ಫ್‌ನಿಂದ ಹಣವನ್ನು ಕೇಳುತ್ತಿದ್ದೇವೆ ಎಂದು ಖಡಕ್​​​ ಆಗಿ ಸರ್ಕಾರವನ್ನು ಟೀಕಿಸಿದರು.

ಇದನ್ನೂ ಓದಿ: ಮುಂಬೈ ದಾಳಿಯ ಉಗ್ರ ಅಜ್ಮಲ್ ಕಸಬ್ ಎಲ್ಲಿದ್ದಾನೆ ಎಂದು ಭಾರತಕ್ಕೆ ತಿಳಿಸಿದ್ದು ನವಾಜ್ ಷರೀಫ್: ಪಾಕ್ ಸಚಿವ

ಪಾಕ್​​ ಮಾಜಿ ಪ್ರಧಾನಿ ನವಾಜ್​​ ಷರೀಫ್ ಅವರು ಅಕ್ಟೋಬರ್ 21ರಂದು ಪಾಕಿಸ್ತಾನಕ್ಕೆ ಆಗಮಿಸಲಿದ್ದಾರೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ. ಇನ್ನು ಪಾಕಿಸ್ತಾನದ ಕೆಟ್ಟ ಆರ್ಥಿಕ ಸ್ಥಿತಿ ಮತ್ತು ರಾಜಕೀಯ ಬಿಕ್ಕಟ್ಟು ದೇಶ ಜನರ ಮೇಲೆ ಪರಿಣಾಮ ಉಂಟು ಮಾಡುತ್ತಿದೆ. ಈಗಾಗಲೇ ಪಾಕ್​​​ ಹಣದುಬ್ಬರ ಸಮಸ್ಯೆಯನ್ನು ಎದುರಿಸುತ್ತಿದೆ ಎಂದು ಡಾನ್​​ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇನ್ನಷ್ಟು ವಿದೇಶ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ