Lok Sabha Election Results 2024: ಚುನಾವಣಾ ಗೆಲುವಿಗೆ ಪ್ರಧಾನಿ ಮೋದಿಯನ್ನು ಅಭಿನಂದಿಸಿದ ವಿಶ್ವ ನಾಯಕರು

2024ರ ಲೋಕಸಭಾ ಚುನಾವಣೆಯಲ್ಲಿ ಎನ್​ಡಿಎ ಗೆಲುವಿಗೆ ವಿಶ್ವ ನಾಯಕರು ಪ್ರಧಾನಿ ಮೋದಿಯನ್ನು ಅಭಿನಂದಿಸಿದ್ದಾರೆ.

Lok Sabha Election Results 2024: ಚುನಾವಣಾ ಗೆಲುವಿಗೆ ಪ್ರಧಾನಿ ಮೋದಿಯನ್ನು ಅಭಿನಂದಿಸಿದ ವಿಶ್ವ ನಾಯಕರು
ನರೇಂದ್ರ ಮೋದಿ
Follow us
|

Updated on:Jun 05, 2024 | 11:06 AM

ಲೋಕಸಭೆ ಚುನಾವಣೆ 2024ರ ಫಲಿತಾಂಶದಲ್ಲಿ ಎನ್‌ಡಿಎ ಮೈತ್ರಿಕೂಟ ಸಂಪೂರ್ಣ ಬಹುಮತ ಪಡೆದಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರನ್ನು ವಿದೇಶಿ ನಾಯಕರು ಅಭಿನಂದಿಸಿದ್ದಾರೆ. ನಾಯಕರಲ್ಲಿ ಶ್ರೀಲಂಕಾದ ವಿರೋಧ ಪಕ್ಷದ ನಾಯಕ ಸಜಿತ್ ಪ್ರೇಮದಾಸ, ಶ್ರೀಲಂಕಾದ ಅಧ್ಯಕ್ಷೀಯ ಅಭ್ಯರ್ಥಿ ಶರತ್ ಫೊನ್ಸೆಕಾ, ಮಹಿಂದಾ ರಾಜಪಕ್ಸೆ, ಶ್ರೀಲಂಕಾದ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ, ನೇಪಾಳದ ಪ್ರಧಾನಿ ಪ್ರಚಂಡ ಮತ್ತು ಭೂತಾನ್‌ನ ಪ್ರಧಾನಿ ಶೆರಿಂಗ್ ತೊಬ್ಗೆ ಸೇರಿದ್ದಾರೆ. ಐತಿಹಾಸಿಕ ಮೂರನೇ ಅವಧಿಗೆ ನಿಮ್ಮ ಶ್ಲಾಘನೀಯ ವಿಜಯಕ್ಕಾಗಿ ಪ್ರಧಾನಿ ಮೋದಿ ಜಿ ಅವರಿಗೆ ಅಭಿನಂದನೆಗಳು ಎಂದು ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನಾಥ್ ಹೇಳಿದ್ದಾರೆ.

ಭೂತಾನ್ ಪ್ರಧಾನಿ ಹೇಳಿದ್ದೇನು? ವಿಶ್ವದ ಅತಿದೊಡ್ಡ ಚುನಾವಣೆಯಲ್ಲಿ ಸತತ ಮೂರನೇ ಬಾರಿಗೆ ಐತಿಹಾಸಿಕ ಜಯ ಸಾಧಿಸಿದ ನನ್ನ ಸ್ನೇಹಿತ ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್‌ಡಿಎಗೆ ಅಭಿನಂದನೆಗಳು ಎಂದು ಶೆರಿಂಗ್ ತೊಬ್ಗೆ ಹೇಳಿದ್ದಾರೆ. ಅವರು ಭಾರತವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತಿದ್ದಂತೆ, ನಮ್ಮ ಎರಡು ದೇಶಗಳ ನಡುವಿನ ಬಾಂಧವ್ಯವನ್ನು ಇನ್ನಷ್ಟು ಬಲಪಡಿಸಲು ಅವರೊಂದಿಗೆ ನಿಕಟವಾಗಿ ಕೆಲಸ ಮಾಡಲು ಬಯಸುತ್ತೇವೆ ಎಂದಿದ್ದಾರೆ.

ಆತ್ಮೀಯ ಶುಭಾಶಯಗಳಿಗಾಗಿ ನನ್ನ ಸ್ನೇಹಿತ ಪ್ರಧಾನಿ ಶೆರಿಂಗ್ ತೊಬ್ಗೆ ಅವರಿಗೆ ಧನ್ಯವಾದಗಳು ಎಂದು ಪ್ರಧಾನಿ ಮೋದಿ ರಿಪ್ಲೇ ಮಾಡಿದ್ದಾರೆ. ಭಾರತ-ಭೂತಾನ್ ಸಂಬಂಧಗಳು ಬಲಗೊಳ್ಳುತ್ತಲೇ ಇರುತ್ತವೆ ಎಂದರು.

ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಪ್ರಧಾನಿ ನರೇಂದ್ರ ಮೋದಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಅವರು X ನಲ್ಲಿ ಪೋಸ್ಟ್ ಮಾಡಿ, ಚುನಾವಣಾ ಗೆಲುವು ಮತ್ತು ಉತ್ತಮ ಕೆಲಸಕ್ಕಾಗಿ ಶುಭಾಶಯಗಳು. ಇಟಲಿ ಮತ್ತು ಭಾರತವನ್ನು ಒಂದುಗೂಡಿಸುವ ಸ್ನೇಹವನ್ನು ಬಲಪಡಿಸಲು ಮತ್ತು ನಮ್ಮ ರಾಷ್ಟ್ರಗಳು ಮತ್ತು ನಮ್ಮ ಜನರ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳಲ್ಲಿ ನಾವು ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ

ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರು ಪ್ರಧಾನಿ ಮೋದಿಯವರನ್ನು ಅಭಿನಂದಿಸಿದರು ಮತ್ತು ತಮ್ಮ ದೇಶವು ನೆರೆಯ ರಾಷ್ಟ್ರವಾಗಿ, ಭಾರತದೊಂದಿಗೆ ಬಾಂಧವ್ಯವನ್ನು ಬಲಪಡಿಸಲು ಎದುರು ನೋಡುತ್ತಿದೆ ಎಂದು ಹೇಳಿದರು.

ನಾನು ಬಿಜೆಪಿ ನೇತೃತ್ವದ ಎನ್​ಡಿಎಗೆ ನನ್ನ ಆತ್ಮೀಯ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ಪ್ರಧಾನಿ  ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಪ್ರಗತಿ ಮತ್ತಷ್ಟು ಹೆಚ್ಚಲಿದೆ. ನೆರೆಯ ಶ್ರೀಲಂಕಾ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಎದುರು ನೋಡುತ್ತಿದೆ ಎಂದು ವಿಕ್ರಮಸಿಂಘೆ ಟ್ವೀಟ್ ಮಾಡಿದ್ದಾರೆ.

ಮತ್ತಷ್ಟು ಓದಿ: ಉತ್ತರ ಪ್ರದೇಶದಲ್ಲಿ ಪಕ್ಷಾಂತರಿ ನಾಯಕರಿಂದ ಬಿಜೆಪಿಗೆ ನಷ್ಟವೇ ಹೆಚ್ಚು! ಎಡವಿದ್ದು ಎಲ್ಲೆಲ್ಲಿ? ಇಲ್ಲಿದೆ ನೋಡಿ

ಇದಕ್ಕೆ ಪ್ರತಿಕ್ರಿಯೆಯಾಗಿ, ಭಾರತ-ಶ್ರೀಲಂಕಾ ಪಾಲುದಾರಿಕೆಯು ಹೊಸ ಗಡಿಗಳನ್ನು ರೂಪಿಸಿದಂತೆ ಮತ್ತು ಅವರ ನಿರಂತರ ಬೆಂಬಲವನ್ನು ಎದುರು ನೋಡುತ್ತಿದ್ದೇನೆ ಎಂದು ವಿಕ್ರಮಸಿಂಘೆಗೆ ಪ್ರಧಾನಿ ಮೋದಿ ಹೇಳಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:22 am, Wed, 5 June 24

ತಾಜಾ ಸುದ್ದಿ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!