AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವೈರಾಣು ಮೂಲ ಪತ್ತೆಗೆ ಚೀನಾದ ವುಹಾನ್​ ಪ್ರಯೋಗಾಲಯಕ್ಕೆ ಕಾಲಿಟ್ಟ WHO ತಂಡ

Coronavirus ಮೂಲ ಪತ್ತೆಹಚ್ಚುವ ವಿಚಾರದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ತಂಡದ ಮೇಲೆ ಅತ್ಯಂತ ದೊಡ್ಡ ಜವಾಬ್ದಾರಿ ಇದ್ದು, ಚೀನಾದ ಒಳಗೆ ಮತ್ತು ಹೊರಗಿನಿಂದಲೂ ಕೊರೊನಾ ಮೂಲವನ್ನು ಬಹಿರಂಗಪಡಿಸುವಂತೆ ರಾಜಕೀಯ ಒತ್ತಡಗಳು ಬರುತ್ತಿವೆ ಎನ್ನಲಾಗಿದೆ.

ಕೊರೊನಾ ವೈರಾಣು ಮೂಲ ಪತ್ತೆಗೆ ಚೀನಾದ ವುಹಾನ್​ ಪ್ರಯೋಗಾಲಯಕ್ಕೆ ಕಾಲಿಟ್ಟ WHO ತಂಡ
ಪ್ರಾತಿನಿಧಿಕ ಚಿತ್ರ
Follow us
Skanda
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 03, 2021 | 3:08 PM

ಕೊರೊನಾ ವೈರಾಣುವಿನ ಜನ್ಮಭೂಮಿ ಎಂಬ ಅಪಖ್ಯಾತಿಗೆ ತುತ್ತಾಗಿರುವ ಚೀನಾದ ವುಹಾನ್​ನಲ್ಲಿರುವ ಪ್ರಯೋಗಾಲಯಕ್ಕೆ ವಿಶ್ವ ಆರೋಗ್ಯ ಸಂಸ್ಥೆಯ ತಂಡ ಭೇಟಿ ನೀಡಿದೆ. ಇಂದು ಮುಂಜಾನೆ ಪ್ರಯೋಗಾಲಯಕ್ಕೆ ತೆರಳಿರುವ ತಜ್ಞರ ತಂಡ ಕೊರೊನಾ ವೈರಾಣುವಿನ ಉಗಮಕ್ಕೆ ಕಾರಣವಾದ ಅಂಶಗಳನ್ನು ಪತ್ತೆಹಚ್ಚುವ ಪ್ರಯತ್ನದಲ್ಲಿದೆ.

ವೈರಾಣು ತಜ್ಞ ಪೀಟರ್ ಬೆನ್​ ಎಂಬರೆಕ್​ ನೇತೃತ್ವದಲ್ಲಿ ರೂಪುಗೊಂಡಿರುವ ವಿಶ್ವ ಆರೋಗ್ಯ ಸಂಸ್ಥೆಯ ತಂಡ, ಇಂದು ಬೆಳಗ್ಗೆಯೇ ವುಹಾನ್​ ನಗರದಲ್ಲಿರುವ ಪ್ರಯೋಗಾಲಯಕ್ಕೆ ಕಾಲಿಟ್ಟಿದೆ. ಸದ್ಯ ಇಡೀ ಜಗತ್ತು ಕೊರೊನಾಕ್ಕೆ ಕಾರಣ ಚೀನಾ ಎಂದು ಬೊಟ್ಟು ಮಾಡುತ್ತಿದ್ದರೂ ಡ್ರ್ಯಾಗನ್ ದೇಶ ಮಾತ್ರ ಈ ಆರೋಪವನ್ನು ತಿರಸ್ಕರಿಸುತ್ತಲೇ ಇದೆ. ಆದರೆ, ಇಂದು ಭೇಟಿ ನೀಡಿರುವ ತಂಡ ಕೊರೊನಾದ ಹಿಂದಿನ ರಹಸ್ಯವನ್ನು ಬಯಲು ಮಾಡಲಿದೆಯಾ ಎಂಬ ಕುತೂಹಲ ಜಗತ್ತಿನಾದ್ಯಂತ ಗರಿಗೆದರಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ತಂಡದ ಸದಸ್ಯ ಮತ್ತು ಎಕೋ ಹೆಲ್ತ್ ಅಲಯನ್ಸ್ ಮುಖ್ಯಸ್ಥ ಪೀಟರ್​ ದಾಸ್​ಝಕ್​, ಇವತ್ತು ನಮ್ಮ ಪಾಲಿಗೆ ಅತ್ಯಂತ ಮಹತ್ವಪೂರ್ಣ ದಿನವಾಗಲಿದೆ ಎಂಬ ನಂಬಿಕೆಯಲ್ಲಿ ಆಗಮಿಸಿದ್ದೇವೆ. ಇಲ್ಲಿನ ಪ್ರಮುಖ ವ್ಯಕ್ತಿಗಳನ್ನು ಭೇಟಿ ಮಾಡಿ ನಮ್ಮಲ್ಲಿರುವ ಸಂದೇಹ ಮತ್ತು ಪ್ರಶ್ನೆಗಳನ್ನು ಮುಂದಿಡಲಿದ್ದೇವೆ. ಕೇಳಬೇಕಾದ ವಿಚಾರಗಳನ್ನು ಕೇಳಲಿದ್ದೇವೆ ಎಂದು ತಿಳಿಸಿದ್ದಾರೆ.

ಕೆಲದಿನಗಳ ಹಿಂದೆಯೇ ಚೀನಾಕ್ಕೆ ಆಗಮಿಸಿದ್ದ ಈ ವಿಶೇಷ ತಂಡ ಇದೀಗ 14 ದಿನಗಳ ಕ್ವಾರಂಟೈನ್​ ಅವಧಿ ಮುಗಿಸಿ, ಕೆಲ ರಾಜತಾಂತ್ರಿಕ ನಿಯಮಗಳನ್ನು ಪಾಲಿಸಿದ ನಂತರ ಅಧ್ಯಯನಕ್ಕೆ ಮುಂದಾಗಿದೆ. ಸದ್ಯ ವಿಶ್ವ ಆರೋಗ್ಯ ಸಂಸ್ಥೆಯ ತಂಡದ ಮೇಲೆ ಅತ್ಯಂತ ದೊಡ್ಡ ಜವಾಬ್ದಾರಿ ಇದ್ದು, ಚೀನಾದ ಒಳಗೆ ಮತ್ತು ಹೊರಗಿನಿಂದಲೂ ಕೊರೊನಾ ಮೂಲವನ್ನು ಬಹಿರಂಗಪಡಿಸುವಂತೆ ರಾಜಕೀಯ ಒತ್ತಡಗಳು ಬರುತ್ತಿವೆ ಎನ್ನಲಾಗಿದೆ.

ಈಗ ಸ್ಮಾರ್ಟ್​ಫೋನ್​ ಮೂಲಕವೇ ಕೊರೊನಾ ವೈರಸ್​ ಪತ್ತೆ ಹಚ್ಚಬಹುದು!

ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ