AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಕ್ಕಿಜ್ವರದ ಎಚ್ 10 ಎನ್ 3 ತಳಿ ಇದೇ ಮೊದಲ ಬಾರಿಗೆ ಚೀನಾದ ವ್ಯಕ್ತಿಯೊಬ್ಬರಲ್ಲಿ ಪತ್ತೆ

H10 N3 in Human: ಸದ್ಯ ವ್ಯಕ್ತಿ ಆರೋಗ್ಯವಾಗಿದ್ದು, ಮರಳಿ ಮನೆಗೆ ತೆರಳಲು ಸನ್ನದ್ಧರಾಗಿದ್ದಾರೆ. ಅವರ ಸಂಪರ್ದಲ್ಲಿರುವ ವ್ಯಕ್ತಿಗಳಲ್ಲೂ ವೈರಸ್ ಪತ್ತೆಯಾಗಿಲ್ಲ ಎಂದು ಚೀನಾದ ಆರೋಗ್ಯ ಆಯೋಗ ತಿಳಿಸಿದೆ.

ಹಕ್ಕಿಜ್ವರದ ಎಚ್ 10 ಎನ್ 3 ತಳಿ ಇದೇ ಮೊದಲ ಬಾರಿಗೆ ಚೀನಾದ ವ್ಯಕ್ತಿಯೊಬ್ಬರಲ್ಲಿ ಪತ್ತೆ
ಸಾಂಕೇತಿಕ ಚಿತ್ರ
guruganesh bhat
|

Updated on: Jun 01, 2021 | 3:01 PM

Share

ಬೀಜಿಂಗ್: ಸದ್ಯ ಕೊವಿಡ್ ಸೋಂಕಿನಿಂದ ತಲ್ಲಣಿಸಿರುವ ವಿಶ್ವ ಮತ್ತೆ ದೃಢ ವಿಶ್ವಾಸದಿಂದ ಹೋರಾಡುತ್ತಿರುವ ಹೊತ್ತಲ್ಲೇ ಚೀನಾದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಚೀನಾದ ಜಿಯಾಂಗ್ಸು ಪ್ರಾಂತ್ಯದಲ್ಲಿ ಹಕ್ಕಿಜ್ಚರದ ರೂಪಾಂತರಿ ತಳಿ H10 N3 ವೈರಸ್ ಇದೇ ಮೊದಲ ಬಾರಿಗೆ ಮಾನವನಲ್ಲಿ ಪತ್ತೆಯಾಗಿದ್ದು ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗ ಈ ಮಾಹಿತಿಯನ್ನು ಖಚಿತಪಡಿಸಿದೆ.

ಏಪ್ರಿಲ್ 28ರಂದು ಜ್ವರ ಮತ್ತು ಇನ್ನಿತರ ಆರೋಗ್ಯ ಸಂಬಂಧಿ ಸಮಸ್ಯೆಗಳು ಕಂಡುಬಂದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವ್ಯಕ್ತಿಗೆ ಹಕ್ಕಿಜ್ಚರದ ರೂಪಾಂತರಿ ತಳಿ H10 N3 ಇರುವುದು ದೃಢಪಟ್ಟಿದೆ. ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗ ಈ ಕುರಿತು ಪ್ರಕಟಣೆ ನೀಡಿದ್ದರೂ, ಹಕ್ಕಿಜ್ವರದ ರೂಪಾಂತರಿ ತಳಿ ವೈರಸ್ ವ್ಯಕ್ತಿಗೆ ತಗುಲಿದ್ದು ಹೇಗೆ ಎಂಬ ಕುರಿತು ಯಾವುದೇ ಮಾಹಿತಿ ನೀಡಿಲ್ಲ.

ಎಚ್ 10 ಎನ್ 3 ವೈರಸ್ ಕಡಿಮೆ ರೋಗಕಾರಕ ಗುಣಗಳನ್ನು ಹೊಂದಿದ್ದು ಇತರ ರೋಗಕಾರಕ ವೈರಸ್​ಗಳಿಗೆ ಹೋಲಿಸಿದರೆ ಅಷ್ಟೇನೂ ತೀವ್ರತರವಾದುದ್ದಲ್ಲ. ಕೋಳಿಮಾಂಸದಲ್ಲಿ ಕಂಡುಬರುವ ವೈರಸ್​ ತಳಿ ಇದಾಗಿದ್ದು ವ್ಯಾಪಕವಾಗಿ ಹರಡುವ ಸಾಧ್ಯತೆ ತೀರಾ ಕಡಿಮೆಯಿದೆ ಎಂದು ಹೇಳಲಾಗಿದೆ. ಸದ್ಯ ವ್ಯಕ್ತಿ ಆರೋಗ್ಯವಾಗಿದ್ದು, ಮರಳಿ ಮನೆಗೆ ತೆರಳಲು ಸನ್ನದ್ಧರಾಗಿದ್ದಾರೆ. ಅವರ ಸಂಪರ್ದಲ್ಲಿರುವ ವ್ಯಕ್ತಿಗಳಲ್ಲೂ ವೈರಸ್ ಪತ್ತೆಯಾಗಿಲ್ಲ ಎಂದು ಚೀನಾದ ಆರೋಗ್ಯ ಆಯೋಗ ತಿಳಿಸಿದೆ. ಆದರೆ ಹಕ್ಕಿಜ್ವರದ ಎಚ್7 ಎನ್ 7 ತಳಿ 2016-17ನೇ ಸಾಲಿನಲ್ಲಿ ವಿಶ್ವದಾದ್ಯಂತ ಒಟ್ಟು 300 ಜನರ ಸಾವಿಗೆ ಕಾರಣವಾಗಿತ್ತು ಎಂಬುದನ್ನು ಇಲ್ಲಿ ಉಲ್ಲೇಖಿಸಬಹುದು.

ಇದನ್ನೂ ಓದಿ: ಕೊವಿಡ್ ತಡೆಗೆ ಮೈಸೂರಿನಲ್ಲಿ ಮತ್ತೊಂದು ಪ್ರಯೋಗ; ರಿವರ್ಸ್ ಐಸೋಲೇಷನ್​ ಮೂಲಕ ಸೋಂಕಿತರ ಕಾಳಜಿ

ಡಿಮ್ಹಾನ್ಸ್‌ನ ಮಾನಸಿಕ ತಜ್ಞರಿಂದ ಟೆಲಿ ಕೌನ್ಸೆಲಿಂಗ್; ಕೊವಿಡ್​ನಿಂದ ಖಿನ್ನತೆಗೊಳಗಾದ 3000 ಜನರೊಂದಿಗೆ ಆಪ್ತ ಸಮಾಲೋಚನೆ

(Worlds first H10N3 Bird flu found in China man)

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು