AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೋಟ್ ಬ್ಯಾಂಕ್ ರಾಜಕಾರಣದಿಂದ ಖಲಿಸ್ತಾನಿ ಭಯೋತ್ಪಾದಕರ ವಿರುದ್ಧ ಕ್ರಮಕೈಗೊಂಡಿಲ್ಲ ಎಂದು ಹೇಳುವುದು ಸರಿಯಲ್ಲ: ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ

ಅವರು ಹೇಳಿದ್ದು ತಪ್ಪು . ಕೆನಡಾ ಯಾವಾಗಲೂ ಹಿಂಸಾಚಾರ ಮತ್ತು ಹಿಂಸಾಚಾರದ ಬೆದರಿಕೆಗಳನ್ನು ಅತ್ಯಂತ ಗಂಭೀರವಾಗಿ ತೆಗೆದುಕೊಂಡಿದೆ. ನಾವು ಯಾವಾಗಲೂ ಭಯೋತ್ಪಾದನೆಯ ವಿರುದ್ಧ ಗಂಭೀರ ಕ್ರಮಗಳನ್ನು ತೆಗೆದುಕೊಂಡಿದ್ದೇವೆ, ಅದನ್ನು ನಾವು ಮಾಡಿಯೇ ಮಾಡುತ್ತೇವೆ ಎಂದ ಟ್ರುಡೊ

ವೋಟ್ ಬ್ಯಾಂಕ್ ರಾಜಕಾರಣದಿಂದ ಖಲಿಸ್ತಾನಿ ಭಯೋತ್ಪಾದಕರ ವಿರುದ್ಧ ಕ್ರಮಕೈಗೊಂಡಿಲ್ಲ ಎಂದು ಹೇಳುವುದು ಸರಿಯಲ್ಲ: ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ
ಜಸ್ಟಿನ್ ಟ್ರುಡೊ
ರಶ್ಮಿ ಕಲ್ಲಕಟ್ಟ
|

Updated on: Jul 06, 2023 | 5:40 PM

Share

ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ (Justin Trudeau) ಅವರು ದೇಶದಲ್ಲಿ ಖಲಿಸ್ತಾನ್ ಪರ( pro-Khalistan) ಕೂಟಗಳು ಮತ್ತು ಭಯೋತ್ಪಾದಕರ ವಿರುದ್ಧ ಕಾರ್ಯನಿರ್ವಹಿಸಲು ತಮ್ಮ ಸರ್ಕಾರ ಹಿಂಜರಿಯುತ್ತಿದೆ ಎಂದು ಹೇಳುತ್ತಿರುವುದು ‘ತಪ್ಪು’ ಎಂದಿದ್ದಾರೆ. ಕೆನಡಾ (Canada) ‘ಯಾವಾಗಲೂ ಭಯೋತ್ಪಾದನೆಯ ವಿರುದ್ಧ ಗಂಭೀರ ಕ್ರಮ ತೆಗೆದುಕೊಂಡಿದೆ, ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ. ಕಳೆದ ತಿಂಗಳು ಕೆನಡಾದ ಗ್ರೇಟರ್ ಟೊರೊಂಟೊ ಪ್ರದೇಶದ ಬ್ರಾಂಪ್ಟನ್‌ನಲ್ಲಿ ಭಾರತದ ಮಾಜಿ ಪ್ರಧಾನಿ ಇಂದಿರಾಗಾಂಧಿ ಹತ್ಯೆಯನ್ನು ಬಿಂಬಿಸುವ ಪರೇಡ್ ಫ್ಲೋಟ್ ಕುರಿತು ಕೇಳಿದಾಗ ಟ್ರುಡೊ ಈ ರೀತಿ ಉತ್ತರಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಜುಲೈ 8 ರಂದು ಒಟ್ಟಾವಾದಲ್ಲಿನ ಭಾರತೀಯ ಹೈಕಮಿಷನ್ ಮತ್ತು ಟೊರೊಂಟೊ ಮತ್ತು ವ್ಯಾಂಕೋವರ್‌ನಲ್ಲಿರುವ ಕಾನ್ಸುಲೇಟ್‌ಗಳ ಹೊರಗೆ ಖಲಿಸ್ತಾನ್ ಪರ ಭಯೋತ್ಪಾದಕ ಸಂಘಟನೆಗಳ ಉದ್ದೇಶಿತ ಪ್ರತಿಭಟನೆಗಳ ಕುರಿತು ಕೆನಡಾಕ್ಕೆ ಭಾರತ ತನ್ನ ಪ್ರತಿಭಟನೆ ದಾಖಲಿಸಿದ ಎರಡು ದಿನಗಳ ನಂತರ ಟ್ರೂಡೊ ಅವರ ಪ್ರತಿಕ್ರಿಯೆ ಬಂದಿದೆ.

ಸಿಖ್ ಸಮುದಾಯದ ಮತಗಳನ್ನು ಅವಲಂಬಿಸಿರುವ ಕಾರಣ ಖಲಿಸ್ತಾನಿ ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳಲು ಅವರು ಸಿದ್ಧರಿಲ್ಲ ಎಂಬ ವರದಿಗಳ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆಯಾಗಿ ಟ್ರುಡೊ ಈ ಮಾತನ್ನಾಡಿದ್ದಾರೆ. ಅವರು ಹೇಳಿದ್ದು ತಪ್ಪು . ಕೆನಡಾ ಯಾವಾಗಲೂ ಹಿಂಸಾಚಾರ ಮತ್ತು ಹಿಂಸಾಚಾರದ ಬೆದರಿಕೆಗಳನ್ನು ಅತ್ಯಂತ ಗಂಭೀರವಾಗಿ ತೆಗೆದುಕೊಂಡಿದೆ. ನಾವು ಯಾವಾಗಲೂ ಭಯೋತ್ಪಾದನೆಯ ವಿರುದ್ಧ ಗಂಭೀರ ಕ್ರಮಗಳನ್ನು ತೆಗೆದುಕೊಂಡಿದ್ದೇವೆ, ಅದನ್ನು ನಾವು ಮಾಡಿಯೇ ಮಾಡುತ್ತೇವೆ. ನಾವು ಅತ್ಯಂತ ವೈವಿಧ್ಯಮಯ ದೇಶವನ್ನು ಹೊಂದಿದ್ದೇವೆ. ಹಿಂಸಾಚಾರ ಮತ್ತು ಉಗ್ರವಾದದ ಎಲ್ಲಾ ರೂಪಗಳನ್ನು ಹಿಂದೆ ಸರಿಸಲು ನಮ್ಮಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ ಎಂದು ಮಾಧ್ಯಮದವರೊಂದಿಗೆ ಮಾತನಾಡಿದ ಟ್ರುಡೊ ಹೇಳಿದ್ದಾರೆ.

ಇದನ್ನೂ ಓದಿ: ಸಿಖ್ ಉಗ್ರಗಾಮಿ ಕೃತ್ಯಗಳ ವಿರುದ್ಧ ಬಲವಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೆನಡಾ ಸರ್ಕಾರಕ್ಕೆ ಭಾರತ ಒತ್ತಾಯ

ತಮ್ಮ ಪ್ರತಿಕ್ರಿಯೆಯಲ್ಲಿ ಟ್ರುಡೊ, ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ. ‘ಅಮೂಲಾಗ್ರ, ಉಗ್ರಗಾಮಿ’ ಸಿದ್ಧಾಂತಗಳು ‘ನಮಗೆ ಅಥವಾ ಅವರಿಗೆ ಅಥವಾ ನಮ್ಮ ಸಂಬಂಧಗಳಿಗೆ (ಪರಸ್ಪರ) ಒಳ್ಳೆಯದಲ್ಲ’ ಎಂದಿದ್ದರು ಜೈಶಂಕರ್.

ವೋಟ್ ಬ್ಯಾಂಕ್ ಮೇಲೆ ಕಣ್ಣಿಟ್ಟ ಕಾರಣ ಕ್ರಮ ಕೈಗೊಳ್ಳುತ್ತಿಲ್ಲ ಎಂದ ಭಾರತ

ಕಳೆದ ವಾರ ಜೈಶಂಕರ್ ಅವರು ಖಲಿಸ್ತಾನಿ ಪ್ರತಿಭಟನೆಗಳ ವಿರುದ್ಧ ಕೆನಡಾ ಸರ್ಕಾರದ ಕ್ರಮ ತೆಗೆದುಕೊಳ್ಳದೇ ಇರುವುದನ್ನು ಟೀಕಿಸಿದ್ದರು. ಇದು ಕೆನಡಾದೊಂದಿಗಿನ ನಿರಂತರ ಸಂಭಾಷಣೆಯಾಗಿದೆ. ಯಾವಾಗಲೂ ತೃಪ್ತಿಕರವಾಗಿಲ್ಲ.ಆದರೆ ನಾವು ಈ ವಿಷಯದಲ್ಲಿ ತುಂಬಾ ಸ್ಪಷ್ಟವಾಗಿರುತ್ತೇವೆ. ನಮ್ಮ ಸಂಬಂಧಗಳ ಮೇಲೆ ಹಲವು ವಿಧಗಳಲ್ಲಿ ಪರಿಣಾಮ ಬೀರಿದೆ ಎಂದು ಒಪ್ಪಿಕೊಂಡ ಜೈಶಂಕರ್, ಖಲಿಸ್ತಾನಿ ಸಮಸ್ಯೆಯನ್ನು ಕೆನಡಾ ಹೇಗೆ ನಿಭಾಯಿಸಿದೆ ಎಂಬುದು ದೀರ್ಘಕಾಲದ ಸಮಸ್ಯೆಯಾಗಿದೆ. ಅತ್ಯಂತ ಸ್ಪಷ್ಟವಾಗಿ ಹೇಳುವುದಾದರೆ, ಅವರು ವೋಟ್ ಬ್ಯಾಂಕ್ ರಾಜಕೀಯದಿಂದ ನಡೆಸಲ್ಪಡುತ್ತಿದ್ದಾರೆಂದು ತೋರುತ್ತದೆ ಎಂದಿದ್ದರು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ