AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಸಿಆರ್​ ಟೆಸ್ಟ್​ ಬದಲು ಎಕ್ಸ್​-ರೇಯಿಂದ ಬಹುಬೇಗ ಕೊವಿಡ್ ರೋಗ ಪತ್ತೆ; ಸ್ಕಾಟ್ಲೆಂಡ್ ವಿಜ್ಞಾನಿಗಳಿಂದ ಹೊಸ ಆವಿಷ್ಕಾರ

ಸ್ಕಾಟ್ಲೆಂಡ್​ನ ವಿಜ್ಞಾನಿಗಳು ಕಂಡುಹಿಡಿದಿರುವ ಈ ಎಕ್ಸ್​-ರೇ ಆಧಾರಿತ ಪರೀಕ್ಷೆ ಕೊವಿಡ್ ರೋಗವನ್ನು ಬಹುಬೇಗ ಪತ್ತೆಹಚ್ಚಲು ಸಹಾಯಕವಾಗಲಿದೆ.

ಪಿಸಿಆರ್​ ಟೆಸ್ಟ್​ ಬದಲು ಎಕ್ಸ್​-ರೇಯಿಂದ ಬಹುಬೇಗ ಕೊವಿಡ್ ರೋಗ ಪತ್ತೆ; ಸ್ಕಾಟ್ಲೆಂಡ್ ವಿಜ್ಞಾನಿಗಳಿಂದ ಹೊಸ ಆವಿಷ್ಕಾರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 20, 2022 | 1:03 PM

Share

ನವದೆಹಲಿ: ವಿಜ್ಞಾನಿಗಳು ಎಕ್ಸ್​-ರೇ (X-Ray) ಬಳಸಿಕೊಂಡು ಇಡೀ ಜಗತ್ತೇ ಅಚ್ಚರಿಪಡುವಂತಹ ಕೋವಿಡ್ (COVID-19) ರೋಗನಿರ್ಣಯ ಪರೀಕ್ಷೆಯನ್ನು ಅಭಿವೃದ್ಧಿಪಡಿಸಿದ್ದಾರೆ. ಇದರಿಂದ ಕಡಿಮೆ ಅವಧಿಯಲ್ಲಿ ಶೇ. 98ರಷ್ಟು ನಿಖರವಾದ ಫಲಿತಾಂಶವನ್ನು ನೀಡಲು ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಸದ್ಯದಲ್ಲೇ ಪಿಸಿಆರ್​ ಪರೀಕ್ಷೆಯ (PCR Test) ಜಾಗಕ್ಕೆ ಎಕ್ಸ್​-ರೇ ಮುಂಚೂಣಿಗೆ ಬರುವ ಸಾಧ್ಯತೆಗಳು ಹೆಚ್ಚಾಗಿವೆ. ಸ್ಕಾಟ್ಲೆಂಡ್​ನ ವಿಜ್ಞಾನಿಗಳು ಕಂಡುಹಿಡಿದಿರುವ ಈ ಎಕ್ಸ್​-ರೇ ಆಧಾರಿತ ಪರೀಕ್ಷೆ ಕೊವಿಡ್ ರೋಗವನ್ನು ಬಹುಬೇಗ ಪತ್ತೆಹಚ್ಚಲು ಸಹಾಯಕವಾಗಲಿದೆ.

ಯೂನಿವರ್ಸಿಟಿ ಆಫ್ ದಿ ವೆಸ್ಟ್ ಆಫ್ ಸ್ಕಾಟ್ಲೆಂಡ್ (UWS)ನ ತಜ್ಞರು ಈ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಪ್ರೋಗ್ರಾಂ ಅನ್ನು ಪ್ರಾರಂಭಿಸಿದರು. ಪಿಸಿಆರ್ ಪರೀಕ್ಷೆಗಳು ಸುಲಭವಾಗಿ ಲಭ್ಯವಿಲ್ಲದಿರುವಾಗ ಆರೋಗ್ಯ ಸಿಬ್ಬಂದಿಗೆ ಸಹಾಯ ಮಾಡಲು ಈ ಎಕ್ಸ್​-ರೇ ಸಹಾಯಕವಾಗಲಿದೆ. ಇದು ಪಿಸಿಆರ್ ಪರೀಕ್ಷೆಗಿಂತ ವೇಗವಾಗಿ ಕೊರೊನಾವೈರಸ್ ಅನ್ನು ಪತ್ತೆಹಚ್ಚುತ್ತದೆ. ಎಕ್ಸ್​-ರೇ ಮೂಲಕ ಸುಮಾರು 2 ಗಂಟೆಯೊಳಗೆ ಕೊವಿಡ್ ಪರೀಕ್ಷೆಯ ಫಲಿತಾಂಶವನ್ನು ಪಡೆಯಬಹುದು.

ಕೋವಿಡ್‌ನಿಂದ ಬಳಲುತ್ತಿರುವ ರೋಗಿಗಳು, ಆರೋಗ್ಯವಂತ ವ್ಯಕ್ತಿಗಳು ಮತ್ತು ವೈರಲ್ ನ್ಯುಮೋನಿಯಾ ರೋಗಿಗಳಿಗೆ ಸೇರಿದ ಸುಮಾರು 3,000 ಚಿತ್ರಗಳ ಡೇಟಾಬೇಸ್‌ಗೆ ಸ್ಕ್ಯಾನ್‌ಗಳನ್ನು ಹೋಲಿಸಲು ಎಕ್ಸ್-ರೇ ತಂತ್ರಜ್ಞಾನವನ್ನು ಬಳಸಲಾಗುತ್ತದೆ. ಈ ತಂತ್ರಜ್ಞಾನ ಶೇಕಡಾ 98ರಷ್ಟು ನಿಖರವಾಗಿದೆ ಎಂದು ಕಂಡುಬಂದಿದೆ.

ಇಂಗ್ಲೆಂಡ್​ನಾದ್ಯಂತ ಅಪಘಾತ ಮತ್ತು ತುರ್ತು ವಿಭಾಗಗಳಲ್ಲಿ ವೈದ್ಯಕೀಯ ಸಿಬ್ಬಂದಿಗೆ ಸಹಾಯ ಮಾಡಲು ಈ ತಂತ್ರಜ್ಞಾನವನ್ನು ಬಳಸಬಹುದೆಂದು ಭಾವಿಸಲಾಗಿದೆ. UWSನಲ್ಲಿನ ಸ್ಮಾರ್ಟ್ ಎನ್ವಿರಾನ್​ಮೆಂಟ್ಸ್ ರಿಸರ್ಚ್ ಸೆಂಟರ್‌ಗಾಗಿ ಎಫೆಕ್ಟಿವ್ ಮತ್ತು ಹ್ಯೂಮನ್ ಕಂಪ್ಯೂಟಿಂಗ್‌ನ ನಿರ್ದೇಶಕ ಪ್ರೊಫೆಸರ್ ನಯೀಮ್ ರಮ್ಜಾನ್ ಈ ಪ್ರಾಜೆಕ್ಟ್​​ನ ಮೂರು ವ್ಯಕ್ತಿಗಳ ತಂಡದ ನೇತೃತ್ವ ವಹಿಸಿದ್ದರು. ಇದರಲ್ಲಿ ಗೇಬ್ರಿಯಲ್ ಒಕೊಲೊ ಮತ್ತು ಡಾ ಸ್ಟಾಮೊಸ್ ಕಟ್ಸಿಗಿಯಾನಿಸ್ ಕೂಡ ಭಾಗವಹಿಸಿದ್ದರು.

ಇದನ್ನೂ ಓದಿ: ಕೊವಿಡ್ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಣೆ; ಬಿಜೆಪಿಯ ಎನ್​ಆರ್ ರಮೇಶ್ ವಿರುದ್ಧ ಎಫ್​ಐಆರ್ ದಾಖಲು

ಕೊವಿಡ್ ಮಾರ್ಗಸೂಚಿ ಸಡಿಲಗೊಳಿಸುವುದೋ, ಬಿಗಿಯೋ?: ಗೊಂದಲಾಪುರದಲ್ಲಿ ಬೊಮ್ಮಾಯಿ ಸರ್ಕಾರ, ದಾರಿ ಯಾವುದು?

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು