AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಸಿಆರ್​ ಟೆಸ್ಟ್​ ಬದಲು ಎಕ್ಸ್​-ರೇಯಿಂದ ಬಹುಬೇಗ ಕೊವಿಡ್ ರೋಗ ಪತ್ತೆ; ಸ್ಕಾಟ್ಲೆಂಡ್ ವಿಜ್ಞಾನಿಗಳಿಂದ ಹೊಸ ಆವಿಷ್ಕಾರ

ಸ್ಕಾಟ್ಲೆಂಡ್​ನ ವಿಜ್ಞಾನಿಗಳು ಕಂಡುಹಿಡಿದಿರುವ ಈ ಎಕ್ಸ್​-ರೇ ಆಧಾರಿತ ಪರೀಕ್ಷೆ ಕೊವಿಡ್ ರೋಗವನ್ನು ಬಹುಬೇಗ ಪತ್ತೆಹಚ್ಚಲು ಸಹಾಯಕವಾಗಲಿದೆ.

ಪಿಸಿಆರ್​ ಟೆಸ್ಟ್​ ಬದಲು ಎಕ್ಸ್​-ರೇಯಿಂದ ಬಹುಬೇಗ ಕೊವಿಡ್ ರೋಗ ಪತ್ತೆ; ಸ್ಕಾಟ್ಲೆಂಡ್ ವಿಜ್ಞಾನಿಗಳಿಂದ ಹೊಸ ಆವಿಷ್ಕಾರ
ಪ್ರಾತಿನಿಧಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Jan 20, 2022 | 1:03 PM

Share

ನವದೆಹಲಿ: ವಿಜ್ಞಾನಿಗಳು ಎಕ್ಸ್​-ರೇ (X-Ray) ಬಳಸಿಕೊಂಡು ಇಡೀ ಜಗತ್ತೇ ಅಚ್ಚರಿಪಡುವಂತಹ ಕೋವಿಡ್ (COVID-19) ರೋಗನಿರ್ಣಯ ಪರೀಕ್ಷೆಯನ್ನು ಅಭಿವೃದ್ಧಿಪಡಿಸಿದ್ದಾರೆ. ಇದರಿಂದ ಕಡಿಮೆ ಅವಧಿಯಲ್ಲಿ ಶೇ. 98ರಷ್ಟು ನಿಖರವಾದ ಫಲಿತಾಂಶವನ್ನು ನೀಡಲು ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಸದ್ಯದಲ್ಲೇ ಪಿಸಿಆರ್​ ಪರೀಕ್ಷೆಯ (PCR Test) ಜಾಗಕ್ಕೆ ಎಕ್ಸ್​-ರೇ ಮುಂಚೂಣಿಗೆ ಬರುವ ಸಾಧ್ಯತೆಗಳು ಹೆಚ್ಚಾಗಿವೆ. ಸ್ಕಾಟ್ಲೆಂಡ್​ನ ವಿಜ್ಞಾನಿಗಳು ಕಂಡುಹಿಡಿದಿರುವ ಈ ಎಕ್ಸ್​-ರೇ ಆಧಾರಿತ ಪರೀಕ್ಷೆ ಕೊವಿಡ್ ರೋಗವನ್ನು ಬಹುಬೇಗ ಪತ್ತೆಹಚ್ಚಲು ಸಹಾಯಕವಾಗಲಿದೆ.

ಯೂನಿವರ್ಸಿಟಿ ಆಫ್ ದಿ ವೆಸ್ಟ್ ಆಫ್ ಸ್ಕಾಟ್ಲೆಂಡ್ (UWS)ನ ತಜ್ಞರು ಈ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಪ್ರೋಗ್ರಾಂ ಅನ್ನು ಪ್ರಾರಂಭಿಸಿದರು. ಪಿಸಿಆರ್ ಪರೀಕ್ಷೆಗಳು ಸುಲಭವಾಗಿ ಲಭ್ಯವಿಲ್ಲದಿರುವಾಗ ಆರೋಗ್ಯ ಸಿಬ್ಬಂದಿಗೆ ಸಹಾಯ ಮಾಡಲು ಈ ಎಕ್ಸ್​-ರೇ ಸಹಾಯಕವಾಗಲಿದೆ. ಇದು ಪಿಸಿಆರ್ ಪರೀಕ್ಷೆಗಿಂತ ವೇಗವಾಗಿ ಕೊರೊನಾವೈರಸ್ ಅನ್ನು ಪತ್ತೆಹಚ್ಚುತ್ತದೆ. ಎಕ್ಸ್​-ರೇ ಮೂಲಕ ಸುಮಾರು 2 ಗಂಟೆಯೊಳಗೆ ಕೊವಿಡ್ ಪರೀಕ್ಷೆಯ ಫಲಿತಾಂಶವನ್ನು ಪಡೆಯಬಹುದು.

ಕೋವಿಡ್‌ನಿಂದ ಬಳಲುತ್ತಿರುವ ರೋಗಿಗಳು, ಆರೋಗ್ಯವಂತ ವ್ಯಕ್ತಿಗಳು ಮತ್ತು ವೈರಲ್ ನ್ಯುಮೋನಿಯಾ ರೋಗಿಗಳಿಗೆ ಸೇರಿದ ಸುಮಾರು 3,000 ಚಿತ್ರಗಳ ಡೇಟಾಬೇಸ್‌ಗೆ ಸ್ಕ್ಯಾನ್‌ಗಳನ್ನು ಹೋಲಿಸಲು ಎಕ್ಸ್-ರೇ ತಂತ್ರಜ್ಞಾನವನ್ನು ಬಳಸಲಾಗುತ್ತದೆ. ಈ ತಂತ್ರಜ್ಞಾನ ಶೇಕಡಾ 98ರಷ್ಟು ನಿಖರವಾಗಿದೆ ಎಂದು ಕಂಡುಬಂದಿದೆ.

ಇಂಗ್ಲೆಂಡ್​ನಾದ್ಯಂತ ಅಪಘಾತ ಮತ್ತು ತುರ್ತು ವಿಭಾಗಗಳಲ್ಲಿ ವೈದ್ಯಕೀಯ ಸಿಬ್ಬಂದಿಗೆ ಸಹಾಯ ಮಾಡಲು ಈ ತಂತ್ರಜ್ಞಾನವನ್ನು ಬಳಸಬಹುದೆಂದು ಭಾವಿಸಲಾಗಿದೆ. UWSನಲ್ಲಿನ ಸ್ಮಾರ್ಟ್ ಎನ್ವಿರಾನ್​ಮೆಂಟ್ಸ್ ರಿಸರ್ಚ್ ಸೆಂಟರ್‌ಗಾಗಿ ಎಫೆಕ್ಟಿವ್ ಮತ್ತು ಹ್ಯೂಮನ್ ಕಂಪ್ಯೂಟಿಂಗ್‌ನ ನಿರ್ದೇಶಕ ಪ್ರೊಫೆಸರ್ ನಯೀಮ್ ರಮ್ಜಾನ್ ಈ ಪ್ರಾಜೆಕ್ಟ್​​ನ ಮೂರು ವ್ಯಕ್ತಿಗಳ ತಂಡದ ನೇತೃತ್ವ ವಹಿಸಿದ್ದರು. ಇದರಲ್ಲಿ ಗೇಬ್ರಿಯಲ್ ಒಕೊಲೊ ಮತ್ತು ಡಾ ಸ್ಟಾಮೊಸ್ ಕಟ್ಸಿಗಿಯಾನಿಸ್ ಕೂಡ ಭಾಗವಹಿಸಿದ್ದರು.

ಇದನ್ನೂ ಓದಿ: ಕೊವಿಡ್ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಣೆ; ಬಿಜೆಪಿಯ ಎನ್​ಆರ್ ರಮೇಶ್ ವಿರುದ್ಧ ಎಫ್​ಐಆರ್ ದಾಖಲು

ಕೊವಿಡ್ ಮಾರ್ಗಸೂಚಿ ಸಡಿಲಗೊಳಿಸುವುದೋ, ಬಿಗಿಯೋ?: ಗೊಂದಲಾಪುರದಲ್ಲಿ ಬೊಮ್ಮಾಯಿ ಸರ್ಕಾರ, ದಾರಿ ಯಾವುದು?

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್