AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಸಾಹತುಶಾಹಿ ಯುಗ ಮುಗಿಯಿತು, ಭಾರತ ದೈತ್ಯ ಆರ್ಥಿಕತೆ; ಟ್ರಂಪ್ ಸುಂಕದ ಬೆನ್ನಲ್ಲೇ ಪುಟಿನ್ ಮಹತ್ವದ ಹೇಳಿಕೆ

ಭಾರತ ಹಾಗೂ ಚೀನಾದಂತಹ ಎರಡು ದೊಡ್ಡ ಆರ್ಥಿಕ ದೈತ್ಯ ರಾಷ್ಟ್ರಗಳೊಂದಿಗೆ ನೀವು ಆ ರೀತಿ ಮಾತನಾಡಬಾರದು ಎಂದು ಪುಟಿನ್ ಹೇಳಿದ್ದಾರೆ. ತೀವ್ರಗೊಳ್ಳುತ್ತಿರುವ ವ್ಯಾಪಾರ ಮತ್ತು ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಹೇಳಿಕೆ ಮಹತ್ವ ಪಡೆದಿದೆ. ಆಗಸ್ಟ್ 27ರಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸರ್ಕಾರ ಭಾರತದ ಮೇಲಿನ ಸುಂಕವನ್ನು ಶೇ. 50ಕ್ಕೆ ಏರಿಸಿತು.

ವಸಾಹತುಶಾಹಿ ಯುಗ ಮುಗಿಯಿತು, ಭಾರತ ದೈತ್ಯ ಆರ್ಥಿಕತೆ; ಟ್ರಂಪ್ ಸುಂಕದ ಬೆನ್ನಲ್ಲೇ ಪುಟಿನ್ ಮಹತ್ವದ ಹೇಳಿಕೆ
Putin With Modi And Xi Jinping
ಸುಷ್ಮಾ ಚಕ್ರೆ
|

Updated on:Sep 03, 2025 | 10:30 PM

Share

ಟಿಯಾಂಜಿನ್, ಸೆಪ್ಟೆಂಬರ್ 3: ರಷ್ಯಾದ ಜೊತೆ ವ್ಯಾಪಾರ ಸಂಬಂಧ ಹೊಂದಿದೆ ಎಂಬ ಕಾರಣಕ್ಕೆ ಭಾರತದ ಮೇಲೆ ಅಮೆರಿಕ ಸರ್ಕಾರ ಶೇ. 25ರಷ್ಟು ಹೆಚ್ಚುವರಿ ಸುಂಕ (US Tariff) ವಿಧಿಸಿದೆ. ಇದರ ಬೆನ್ನಲ್ಲೇ ಚೀನಾದಲ್ಲಿ ಪುಟಿನ್ ಭಾರತದ ಪರವಾಗಿ ಹೇಳಿಕೆ ನೀಡುವ ಮೂಲಕ ಭಾರತದ ಆರ್ಥಿಕತೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅಲ್ಲದೆ, ಭಾರತದ ಆರ್ಥಿಕತೆ ಸತ್ತ ಆರ್ಥಿಕತೆ ಎಂದಿದ್ದ ಟ್ರಂಪ್​ಗೆ ಟಾಂಗ್ ಕೊಡುವ ರೀತಿಯಲ್ಲಿ ಭಾರತ ದೃತ್ಯ ಆರ್ಥಿಕತೆಯ ದೇಶವಾಗಿದೆ ಎಂದಿದ್ದಾರೆ. ಬೀಜಿಂಗ್‌ನ ಮಿಲಿಟರಿ ಮೆರವಣಿಗೆಯಲ್ಲಿ ಭಾಗವಹಿಸಿದ ಗಂಟೆಗಳ ನಂತರ ಚೀನಾದಲ್ಲಿ ವರದಿಗಾರರಿಗೆ ಪ್ರತಿಕ್ರಿಯಿಸಿದ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತವನ್ನು ಬೆಂಬಲಿಸಿ ಮಹತ್ವದ ಹೇಳಿಕೆ ನೀಡಿದ್ದಾರೆ.

ಭಾರತ ಮತ್ತು ಚೀನಾದ ಮೇಲೆ ವಿಧಿಸಲಾಗುತ್ತಿರುವ ಆರ್ಥಿಕ ಒತ್ತಡವನ್ನು ಉದ್ದೇಶಿಸಿ ಮಾತನಾಡುತ್ತಾ ವ್ಲಾಡಿಮಿರ್ ಪುಟಿನ್, ಅವೆರಡೂ ಪ್ರಮುಖ ಆರ್ಥಿಕ ದೈತ್ಯ ರಾಷ್ಟ್ರಗಳು. ಯಾರೂ ಆ ದೇಶಗಳೊಂದಿಗೆ ಆ ರೀತಿಯಲ್ಲಿ ಮಾತನಾಡಬಾರದು. “ನೀವು ಭಾರತ ಅಥವಾ ಚೀನಾದೊಂದಿಗೆ ಹಾಗೆ ಮಾತನಾಡಲು ಸಾಧ್ಯವಿಲ್ಲ. ವಸಾಹತು ಯುಗ ಮುಗಿದಿದೆ. ಇಂದಿನ ಜಾಗತಿಕ ಯುಗದಲ್ಲಿ ಎಲ್ಲರಿಗೂ ಸಮಾನ ಹಕ್ಕಿದೆ” ಎಂದು ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.

ಇದನ್ನೂ ಓದಿ: ಝೆಲೆನ್ಸ್ಕಿ ರಷ್ಯಾಕ್ಕೆ ಬಂದರೆ ಭೇಟಿಗೆ ಸಿದ್ಧ; ಉಕ್ರೇನ್ ಸಂಘರ್ಷದ ಬಗ್ಗೆ ಪುಟಿನ್ ಹೇಳಿಕೆ

“ಈ ಜಗತ್ತಿನಲ್ಲಿ ಎಲ್ಲರಿಗೂ ಸಮಾನ ಹಕ್ಕುಗಳಿವೆ. ಭಾರತ ಅಥವಾ ಚೀನಾದಂತಹ ಆರ್ಥಿಕ ದೈತ್ಯ ರಾಷ್ಟ್ರಗಳಿವೆ. ಆದರೆ ಜಾಗತಿಕ ರಾಜಕೀಯ ಅಥವಾ ಭದ್ರತೆಯ ಮೇಲೆ ಯಾವುದೋ ಒಂದು ದೇಶ ಪ್ರಾಬಲ್ಯ ಸಾಧಿಸಬೇಕು ಎಂದು ಇದರ ಅರ್ಥವಲ್ಲ” ಎಂದು ಪುಟಿನ್ ಹೇಳಿದ್ದಾರೆ.

ನಾವೆಲ್ಲರೂ ಬಹಳ ಕಷ್ಟಪಟ್ಟು ದೇಶ ಕಟ್ಟಿದ್ದೇವೆ. ಕಠಿಣ ಇತಿಹಾಸಗಳ ಮೂಲಕ ನಿರ್ಮಿಸಲಾದ ಭಾರತ, ಚೀನಾ ಅಥವಾ ರಷ್ಯಾದ ನಾಯಕತ್ವವನ್ನು ದುರ್ಬಲಗೊಳಿಸಲು ಪ್ರಯತ್ನಿಸುವುದು ತಪ್ಪು ಎಂದು ಅಮೆರಿಕಕ್ಕೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 10:28 pm, Wed, 3 September 25

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ